ಅಂಬೇಡ್ಕರ್ ಓಡಾಡಿದ ನೆಲ ರಾಷ್ಟ್ರ ಗುರುತಿಸಲಿ
Team Udayavani, May 13, 2022, 2:45 PM IST
ವಾಡಿ: ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಸ್ಮಾರಕ ನಿರ್ಮಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಡಾ| ಬಿ.ಆರ್.ಅಂಬೇಡ್ಕರ್ ಸ್ಮಾರಕ ನಿರ್ಮಾಣ ಹೋರಾಟ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಕುರಿತು ಗುರುವಾರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಕರ್ನಾಟಕ ರಾಜ್ಯ ಡಾ| ಬಿ.ಆರ್.ಅಂಬೇಡ್ಕರ್ ಸ್ಮಾರಕ ನಿರ್ಮಾಣ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ವಿಕ್ರಮ ನಿಂಬರ್ಗಾ, ಅಂಬೇಡ್ಕರ್ ಭೇಟಿ ನೀಡಿದ ರಾಜ್ಯದ ವಿವಿಧ ಸ್ಥಳಗಳನ್ನು ಗುರುತಿಸಿ ರಾಷ್ಟ್ರೀಯ ಸ್ಮಾರಕವಾಗಿಸಲು ಸರ್ಕಾರ ಬಜೆಟ್ನಲ್ಲಿ ಅನುದಾನ ಘೋಷಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಅಂಬೇಡ್ಕರ್ ಅವರು ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಗುರುತಿಸಿರುವ ರಾಜ್ಯದ ಹತ್ತು ಸ್ಥಳಗಳಲ್ಲಿ ವಾಡಿ ಪಟ್ಟಣವೂ ಸೇರಿದೆ. ಬಾಬಸಾಹೇಬರು ತಮ್ಮ ಜೀವಿತಾವಧಿಯಲ್ಲಿ 1944ರ ಸೆಪ್ಟೆಂಬರ್ 20 ಹಾಗೂ 1952ರ ಏಪ್ರಿಯಲ್ 27ರಂದು ವಾಡಿ ಪಟ್ಟಣಕ್ಕೆ ಭೇಟಿ ನೀಡಿರುವ ಕುರಿತು ದಾಖಲೆಗಳಿವೆ.
ಪರಿಣಾಮ ವಿವಿಧೆತೆಯಲ್ಲಿ ಏಕತೆ ಮೆರೆಯುತ್ತಿರುವ ಭಾರತಕ್ಕೆ ಪ್ರಜಾಪ್ರಭುತ್ವ ನೆಲೆಯ ಶ್ರೇಷ್ಠ ಸಂವಿಧಾನ ನೀಡಿರುವ ಬಾಬಾಹೇಬ ಡಾ| ಭೀಮರಾವ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲು ಮತ್ತು ಐತಿಹಾಸಿಕ ಕುರುಹುಗಳನ್ನು ಇತಿಹಾಸದ ಪುಟವಾಗಿಸುವ ಅಗತ್ಯವಿದೆ. ವಿಶ್ವ ಮಾನವನ ಹೋರಾಟದ ಚರಿತ್ರೆಯನ್ನು ಮುಂದಿನ ಪೀಳಿಗೆಗಾಗಿ ಉಳಿಸುವ ಮಹತ್ವದ ಜವಾಬ್ದಾರಿ ಸರ್ಕಾರದ ಮೇಲಿದೆ. ಆದ್ದರಿಂದ ಪಟ್ಟಣದಲ್ಲಿ ಸಂಶೋಧನಾ ಕೇಂದ್ರ, ಗ್ರಂಥಾಲಯ, ವಸ್ತು ಸಂಗ್ರಹಾಲಯ ಹೊಂದಿರುವಂತಹ ರಾಷ್ಟ್ರೀಯ ಸ್ಮಾರಕ ನಿರ್ಮಿಸಲು ಹತ್ತು ಎಕರೆ ಜಮೀನು ಮಂಜೂರು ಮಾಡುವ ಜತೆಗೆ 25 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಸಿಎಂಗೆ ಬರೆದ ಪತ್ರದಲ್ಲಿ ಮನವಿ ಮಾಡಲಾಗಿದೆ.
ದಲಿತ ಮುಖಂಡರಾದ ಭೀಮಾಶಂಕರ ಸಿಂಧೆ, ರವಿಕುಮಾರ ಕೋಳಕೂರ, ರಘುವೀರ ಪವಾರ, ಖೇಮಲಿಂಗ ಬೆಳಮಗಿ, ಮಲ್ಲೇಶ ನಾಟೀಕಾರ, ಶ್ರವಣಕುಮಾರ ಮೊಸಲಗಿ, ಪರಶುರಾಮ ರಾವೂರ ಮನವಿ ಸಲ್ಲಿಸುವ ನಿಯೋಗದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ