ಕೊಟ್ಟಿಗೆಯಂತಾಗಿದೆ ಗ್ರಂಥಾಲಯ
Team Udayavani, May 6, 2022, 11:59 AM IST
ಶಹಾಬಾದ: ತಾಲೂಕಿನ ಭಂಕೂರ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಕಂದಗೂಳ ಭೇಟಿ ನೀಡಿದಾಗ ಅಲ್ಲಿನ ಅವ್ಯವಸ್ಥೆ ಕಂಡು ಸಿಡಿಮಿಡಿಗೊಂಡರು.
ಗ್ರಂಥಾಲಯದ ಟೇಬಲ್ ಮೇಲೆ, ಜ್ಞಾನಪೀಠ ಪ್ರಶಸ್ತಿ ವಿಜೇತರ ಭಾವಚಿತ್ರದ ಎದುರೇ ಸೆಗಣಿ ಹರಡಲಾಗಿತ್ತು. ಈ ಅವ್ಯವಸ್ಥೆ ಕಂಡು ಅಲ್ಲಿನ ಸಿಬ್ಬಂದಿ ವಿರುದ್ಧ ಕಂದಗೂಳ ಆಕ್ರೋಶ ವ್ಯಕ್ತಪಡಿಸಿದರು.
ಗ್ರಂಥಾಲಯ ಸಿಬ್ಬಂದಿ ಪಾರ್ವತಿ ಮಠಪತಿ ಸರಿಯಾದ ಸಮಯಕ್ಕೆ ಬರುತ್ತಿಲ್ಲ ಎನ್ನುವ ಕಾರಣಕ್ಕೆ ಬಯೋಮೆಟ್ರಿಕ್ ಯಂತ್ರ ಕೂಡಿಸಲಾಗಿತ್ತು. ಅದನ್ನು ಕೂಡಾ ಹಾಳು ಮಾಡಿದ್ದರಿಂದ ಈಗ ಮತ್ತೊಂದು ಯಂತ್ರ ಕೂಡಿಸಲಾಗಿದೆ. ಆದರೂ ಸರಿಯಾದ ಸಮಯಕ್ಕೆ ಅವರು ಬಾಗಿಲು ತೆರೆಯುತ್ತಿಲ್ಲ. ಆದ್ದರಿಂದ ಗ್ರಂಥಾಲಯ ಸ್ವಚ್ಛತೆ ಹಾಗೂ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ತಾಪಂ ಇಒ ಬಸಲಿಂಗಪ್ಪ ಡಿಗ್ಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಕಂದಗೂಳ ತಿಳಿಸಿದರು.
ಗ್ರಂಥಾಲಯದಲ್ಲಿನ ಸ್ವತ್ಛತೆ ಕುರಿತು ಮಾಹಿತಿ ಬಂದಿದ್ದು, ಅಲ್ಲಿನ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು. ಸೂಕ್ತ ಕ್ರಮ ಕೈಗೊಳ್ಳಲಾಗುವುದು. –ಬಸಲಿಂಗಪ್ಪ ಡಿಗ್ಗಿ, ಇಒ, ತಾಪಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ