ಹೊನಗುಂಟಾಕೆ ಸಮರ್ಪಕ ಬಸ್ ಕಲ್ಪಿಸಿ
Team Udayavani, Nov 15, 2021, 12:10 PM IST
ಶಹಾಬಾದ: ತಾಲೂಕಿನ ಹೊನಗುಂಟಾ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಬೇಕೆಂದು ಎಐಡಿಎಸ್ಓ ಸಂಘಟನೆ ವತಿಯಿಂದ ಪ್ರತಿಭಟಿಸಿ, ಬಸ್ ನಿಲ್ದಾಣದ ನಿಯಂತ್ರಕರಿಗೆ ಮನವಿ ಸಲ್ಲಿಸಲಾಯಿತು.
ಹೊನಗುಂಟಾ ಗ್ರಾಮದಿಂದ ಹಲವಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹಾಗೂ ಜನರು ದಿನನಿತ್ಯದ ಕೆಲಸಕ್ಕಾಗಿ ನಗರಕ್ಕೆ ಬರುತ್ತಾರೆ. ಗ್ರಾಮದ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣ ಮುಗಿಸಿಕೊಂಡು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಶಹಾಬಾದ, ಜೇವರ್ಗಿ, ಚಿತ್ತಾಪುರ, ಕಲಬುರಗಿ ನಗರಕ್ಕೆ ತೆರಳುತ್ತಾರೆ. ಈ ವೇಳೆ ಬಸ್ ಪಾಸ್ ಇದ್ದರೂ ಸರಿಯಾದ ಸಮಯಕ್ಕೆ ಬಸ್ ಬಾರದೇ ಇರುವುದರಿಂದ ಪರದಾಡುವಂತೆ ಆಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಸಮಿತಿ ಸದಸ್ಯರಾದ ತುಳಜಾರಾಮ ಎನ್.ಕೆ, ನಗರಾಧ್ಯಕ್ಷ ಕಿರಣ ಜಿ. ಮಾನೆ, ಕಾರ್ಯದರ್ಶಿ ಅಜಯ ಎ.ಜಿ, ಉಪಾಧ್ಯಕ್ಷ ದೇವರಾಜ ಹೊನಗುಂಟ, ವಿದ್ಯಾರ್ಥಿಗಳಾದ ಸಿದ್ಧು ಕೆ., ಭಾಗ್ಯೇಶ, ಮೌನೇಶ, ರಾಕೇಶ, ಕೃಷ್ಣ, ಮಲ್ಲು, ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?