ಹಸಿ ಕಸದಿಂದ ಗೊಬ್ಬರ: ನೌಕರರಿಗೆ ಟಾಸ್ಕ್


Team Udayavani, Nov 13, 2021, 11:49 AM IST

7garbage

ಕಲಬುರಗಿ: “ಸ್ವಚ್ಛ ಕಲಬುರಗಿ’ಯನ್ನಾಗಿಸುವ ಉದ್ದೇಶದಿಂದ ಹಲವು ಕ್ರಮ ಕೈಗೊಂಡಿರುವ ಮಹಾನಗರ ಪಾಲಿಕೆ ಇದೀಗ ತನ್ನ ಅಧಿಕಾರಿಗಳು, ಸಿಬ್ಬಂದಿಗೆ ಹೊಸ ಟಾಸ್ಕ್ ನೀಡಿದ್ದು, ಅವರ ಮನೆಗಳಲ್ಲೇ ವೈಜ್ಞಾನಿಕವಾಗಿ ಕಸ ವಿಂಗಡಿಸಿ ಹಸಿ ತ್ಯಾಜ್ಯದಿಂದ ಸಾವಯವ ಗೊಬ್ಬರ ತಯಾರಿಸಲು ಗಡುವು ನೀಡಿದೆ.

ಮಹಾನಗರ ಪ್ರದೇಶದಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿ ಮಾಡುವುದೇ ದೊಡ್ಡ ಸಮಸ್ಯೆ ಮತ್ತು ಸವಾಲಾಗಿದೆ. ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಒಣ ಮತ್ತು ಹಸಿ ಕಸವನ್ನಾಗಿ ವಿಂಗಡಿಸಬೇಕೆಂಬ ನಿಯಮವಿದ್ದರೂ ಯಾರು ಸರಿಯಾಗಿ ಪಾಲಿಸುತ್ತಿಲ್ಲ. ಮೇಲಾಗಿ ವೈಜ್ಞಾನಿಕ ಕಸ ವಿಲೇವಾರಿಯನ್ನು ಪಾಲಿಕೆ ಸಿಬ್ಬಂದಿಯೇ ಮಾಡುವುದಿಲ್ಲ. ಪಾಲಿಕೆ ಸಿಬ್ಬಂದಿಯೇ ಮಾಡದ ಮೇಲೆ ನಾವೇನು ಮಾಡೋದು ಎನ್ನುವ ಉತ್ತರ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಆದ್ದರಿಂದ ನಮ್ಮಿಂದಲೇ ನಾಗರಿಕರಿಗೆ ಜಾಗೃತಿ ಸಂದೇಶ ರವಾನಿಯಾಗಲಿ, ಕಸ ವಿಗಂಡನೆಯಲ್ಲಿ ನಾವೇ ಮಾದರಿಯಾಗೋಣ ಎನ್ನುವ ಸದುದ್ದೇಶದಿಂದ ಪಾಲಿಕೆ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಸ್ವಚ್ಛ ಭಾರತ ಅಭಿಯಾನದಡಿ ” ಸ್ವಚ್ಛ ಕಲಬುರಗಿ’ ಮಾಡುವ ಅಗತ್ಯ ಇದೆ. ಇದಕ್ಕಾಗಿ ನಗರದ ಬಡಾವಣೆಗಳು ತ್ಯಾಜ್ಯ ಶೂನ್ಯವಾಗಬೇಕು. ಅಲ್ಲಿ ಸೃಷ್ಟಿಯಾಗುವ ಕಸ, ಅಲ್ಲೇ ಗೊಬ್ಬರವಾಗಬೇಕು. ಅದನ್ನು ಅಲ್ಲಿಯ ಗಿಡಗಳಿಗೆ ಬಳಸಬೇಕೆಂಬ ಪರಿಕಲ್ಪನೆಯನ್ನು ಆಯುಕ್ತ ಸ್ನೇಹಲ್‌ ಸುಧಾಕರ್‌ ಲೋಖಂಡೆ ಹೊಂದಿದ್ದು, ಈ ನಿಟ್ಟಿನಲ್ಲಿ ಮೊದಲು ಪಾಲಿಕೆ ಮತ್ತು ನೌಕರರಿಂದಲೇ ಇದನ್ನು ಆರಂಭಿಸಬೇಕೆಂಬ ಉದ್ದೇಶದಿಂದ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಇದನ್ನೂ ಓದಿ:ಅಪ್ಪು ಭಾವಚಿತ್ರದ ಎದುರು ಶಾಂಪೇನ್ :’ಏಕ್ ಲವ್ ಯಾ’ತಂಡದ ವಿರುದ್ಧ ಸಾ.ರಾ.ಗೋವಿಂದು ಕಿಡಿ

ಆಯುಕ್ತರ ಆದೇಶದಲ್ಲಿ ಏನಿದೆ?

” ಸ್ವಚ್ಛ ಕಲಬುರಗಿ’ಗೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕಾರ್ಯ ನಿರ್ವಹಿಸುವುದು ಅತ್ಯವಶ್ಯಕವಾಗಿದೆ. ಈ ಪ್ರಯುಕ್ತ ಪಾಲಿಕೆ ಅಧೀನದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಮೊಬೈಲ್‌ನಲ್ಲಿ ” ಸ್ವಚ್ಛತಾ ಆ್ಯಪ್‌’ ಡೌನ್‌ ಲೋಡ್‌ ಮಾಡಿಕೊಳ್ಳಬೇಕು. ಮನೆ ಮತ್ತು ಉದ್ಯಾನದಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ಹಸಿ ಕಸ ಹೊರಗೆ ಬಿಸಾಡಬಾರದು ಎಂದು ಆಯುಕ್ತರು ಆದೇಶ ಹೊರಡಿಸಿದ್ದಾರೆ.

ವೇತನ ತಡೆಹಿಡಿಯುವ ಎಚ್ಚರಿಕೆ

ಮನೆ ಮತ್ತು ಉದ್ಯಾನದಲ್ಲಿ ಉತ್ಪತ್ತಿಯಾಗುವ ಹಸಿ ಕಸವನ್ನು ಹೊರಗೆ ಬಿಸಾಡದೆ ಉದ್ಯಾನದ ಪ್ರದೇಶದಲ್ಲೇ ಕಡ್ಡಾಯವಾಗಿ ಕಂಪೋಸ್ಟ್‌ ಪಿಟ್‌ ಅಥವಾ ಪೈಪ್‌ ಕಂಪೋಸ್ಟ್‌ ಘಟಕ ನಿರ್ಮಿಸಿ, ಅದರಲ್ಲಿ ಹಸಿ ಕಸ ಸಂಗ್ರಹಿಸಬೇಕು. ಅದರಿಂದ ಗೊಬ್ಬರ ತಯಾರಿಸಿ ಅದರ ಸದುಪಯೋಗ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ. ಕಂಪೋಸ್ಟ್‌ ಘಟಕ ನಿರ್ಮಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ಒಂದು ವೇಳೆ ಕಂಪೋಸ್ಟ್‌ ಘಟಕ ನಿರ್ಮಿಸಿಕೊಳ್ಳದೇ ಇರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವೇತನ ತಡೆಹಿಡಿಯಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ. ಕಂಪೋಸ್ಟ್‌ ಘಟಕ ನಿರ್ಮಿಸಲು ಮತ್ತು ತಯಾರಿಸುವ ಬಗ್ಗೆ ಪಾಲಿಕೆ ಪರಿಸರ ಅಭಿಯಂತರರಾದ ಮರಿಯಾ ಅದನ ಮತ್ತು ಸುಷ್ಮಾ ಅವರನ್ನು ಸಂಪರ್ಕಿಸುವಂತೆ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ಏನಿದು ಕಾಂಪೋಸ್ಟ್‌ ಘಟಕ?

ಮನೆಯಲ್ಲಿ ಉತ್ಪತ್ತಿಯಾಗುವ ಮತ್ತು ಮನೆಯ ಉದ್ಯಾನದಲ್ಲಿ ಬಿದ್ದ ಎಲೆಗಳ ಹಸಿ ತ್ಯಾಜ್ಯ ಬಳಸಿ ಗೊಬ್ಬರ ಉತ್ಪನ್ನ ಮಾಡುವುದೇ ಕಾಂಪೋಸ್ಟ್‌ ಘಟಕ. ಮನೆಯಲ್ಲಿ ಸ್ಥಳಾವಕಾಶವಿದ್ದಲ್ಲಿ ಗುಂಡಿ ತೋಡಿಕೊಳ್ಳುವುದು, ಇಲ್ಲವಾದಲ್ಲಿ ಮಧ್ಯಮ ಗ್ರಾತದ ಡಬ್ಬ ಮತ್ತು ಪೈಪ್‌ಗ್ಳನ್ನು ತೆಗೆದುಕೊಂಡು ಗಾಳಿಯಾಡುವಂತೆ ರಂಧ್ರ ಹಾಕಲಾಗುತ್ತದೆ. ಇದರಲ್ಲಿ ನೊಣ, ಸೊಳ್ಳೆಗಳು ನುಸುಳದಂತೆ ನೋಡಿಕೊಳ್ಳಬೇಕಾಗುತ್ತದೆ. ಮೊದಲಿಗೆ ಘಟಕದ ಅಡಿಯಲ್ಲಿ ಸೆಗಣಿ, ಬೆಲ್ಲ ಮತ್ತು ಬದಾಮಿ, ಅರಳೆ ಗಿಡದ ಎಲೆಗಳು ಹಾಕಬೇಕಾಗುತ್ತದೆ. ನಂತರ ಈ ಘಟಕದಲ್ಲಿ ಅಡುಗೆ ಮನೆಯಲ್ಲಿ ಬಳಸಿ ಉಳಿಯುವ ತರಕಾರಿ, ಆಹಾರ ಪದಾರ್ಥ, ಹಣ್ಣುಗಳ ಸಿಪ್ಪೆ ಸೇರಿ ಹಸಿ ಕಸಿ ಹಾಕುವ ಮೂಲಕ ಗೊಬ್ಬರ ಉತ್ಪನ್ನವಾಗುತ್ತದೆ. ಇದೇ ಗೊಬ್ಬರವನ್ನು ಕೈತೋಟ ಮತ್ತು ಸಸಿಗಳಿಗೆ ಬಳಸಬಹುದು. ಈಗಾಗಲೇ ಇಂತಹ ಕಂಪೋಸ್ಟ್‌ ಘಟಕಗಳನ್ನು ಓಂನಗರ ಮತ್ತು ಅಕ್ಕಮಹಾದೇವಿ ನಗರದ ಕೆಲ ನಿವಾಸಿಗಳು ತಮ್ಮ ಮನೆಗಳಲ್ಲಿ ನಿರ್ಮಿಸಿ ಗೊಬ್ಬರ ಉತ್ಪಾದಿಸುವಲ್ಲಿ ಮಾದರಿಯಾಗಿದ್ದಾರೆ.

ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಒಣ ಮತ್ತು ಹಸಿ ಕಸವನ್ನಾಗಿ ವಿಂಗಡಿಸಿ, ಹಸಿ ಕಸದಿಂದ ಗೊಬ್ಬರ ತಯಾರಿಸುವಂತೆ ಆಗಬೇಕು. ಈ ನಿಟ್ಟಿನಲ್ಲಿ ಪಾಲಿಕೆ ಅಧೀನದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಮಾದರಿಯಾಗಬೇಕೆಂಬ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ. ಬಾಡಿಗೆ ಮನೆಯಲ್ಲಿರುವ ನೌಕರರು ತಮ್ಮ ಮನೆ ಮಾಲೀಕರ ಮನವೊಲಿಸಿ ಅವರಿಂದಲೂ ಗೊಬ್ಬರ ತಯಾರಿಸಬೇಕು. -ಸ್ನೇಹಲ್‌ ಸುಧಾಕರ್‌ ಲೋಖಂಡೆ, ಆಯುಕ್ತರು, ಮಹಾನಗರ ಪಾಲಿಕೆ

-ರಂಗಪ್ಪ ಗಧಾರ

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.