ಮೇಯರ್-ಉಪ ಮೇಯರ್ ಚುನಾವಣೆ: ವಿಚಾರಣೆ ಮುಂದೂಡಿಕೆ
Team Udayavani, Feb 4, 2022, 9:52 AM IST
ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮತದಾರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರ್ಪಡೆ ಮತ್ತು ಮೇಯರ್, ಉಪ ಮೇಯರ್ ಮೀಸಲಾತಿ ಬದಲಾವಣೆ ವಿರುದ್ಧ ಸಲ್ಲಿಸಲಾದ ದೂರಿನ ಅರ್ಜಿಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಇಲ್ಲಿನ ಕರ್ನಾಟಕ ಹೈಕೋರ್ಟ್ ಪೀಠ ಮುಂದಿನ ವಿಚಾರಣೆಯನ್ನು ಫೆ. 4ರ ಶುಕ್ರವಾರಕ್ಕೆ ಮುಂದೂಡಿದೆ.
ಮತದಾರರ ಪಟ್ಟಿಯಲ್ಲಿ ಹೊಸದಾಗಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರಿಸಿದ್ದನ್ನು ಪ್ರಶ್ನಿಸಿ ಹಾಗೂ ಕಳೆದ ನವೆಂಬರ್ 20ರಂದು ನಿಗದಿಯಾಗಿದ್ದ ಚುನಾವಣೆ ಮುಂದೂಡಿಕೆಯಾಗಿ ಫೆ. 5ರಂದು ನಿಗದಿಯಾಗಿದೆ. ಆದರೆ ನ. 20ರಂದು ನಿಗದಿಯಾಗಿದ್ದ ಚುನಾವಣೆ ಅಧಿಸೂಚನೆಯಲ್ಲಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಮೇಯರ್ ಹಿಂದುಳಿದ “ಬ’ ವರ್ಗಕ್ಕೆ ಮೀಸಲಾಗಿತ್ತು. ಈಗ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಬದಲಾಗಿದೆ.
ಮೀಸಲಾತಿ ಬದಲಾವಣೆ ಆಗಿರುವುದನ್ನು ಪ್ರಶ್ನಿಸಿ ಹಾಗೂ ಮತದಾರರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರ್ಪಡೆ ವಿರುದ್ಧ ಕಾಂಗ್ರೆಸ್ ಪಕ್ಷ ಇಲ್ಲಿನ ಹೈಕೋರ್ಟ್ ಪೀಠದಲ್ಲಿ ದೂರು ಸಲ್ಲಿಸಿದ್ದು, ಅರ್ಜಿ ವಿಚಾರಣೆ ಗುರುವಾರ ನಡೆಯಿತು. ಪ್ರಥಮವಾಗಿ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ನ ಏಕ ಪೀಠದ ನ್ಯಾಯಮೂರ್ತಿಗಳಾದ ನ್ಯಾ| ಇಂದ್ರೀಶ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದರು. ಮುಂದಿನ ವಿಚಾರಣೆ ಶುಕ್ರವಾರಕ್ಕೆ ನಿಗದಿಯಾಗಿದ್ದರಿಂದ ಎಲ್ಲರ ಚಿತ್ತ ಹೈಕೋರ್ಟ್ನ ಶುಕ್ರವಾರ ವಿಚಾರಣೆಯತ್ತ ಎನ್ನುವಂತಾಗಿದೆ.
ಶುಕ್ರವಾರದ ವಿಚಾರಣೆ ಫಲಿತಾಂಶ ಏನು ಬರಬಹುದು ಎಂಬುದರ ಕುರಿತಾಗಿ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದವರು ತೀವ್ರ ಚಿಂತನೆಯಲ್ಲಿ ಮುಳುಗಿದ್ದಾರೆ. ಶನಿವಾರ ನಡೆಯುವ ಚುನಾವಣೆಗೆ ಪಾಲಿಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದು, ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಒಟ್ಟಾರೆ ಶುಕ್ರವಾರದ ನ್ಯಾಯಾಲಯದ ಆದೇಶದ ಮೇಲೆ ಮುಂದಿನ ನಡೆ ನಿರ್ಧಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ