ಜಿಮ್ಸ್‌ ವೈದ್ಯಕೀಯ ಕಾಲೇಜಿಗೆ ಎಂಡಿ ಕೋರ್ಸ್‌ ಮಂಜೂರು

ಮುಂದಿನ ಅಗತ್ಯ ಕ್ರಮ ಕೈಗೊಂಡು ಅನುಮತಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.

Team Udayavani, Jan 26, 2021, 4:26 PM IST

ಜಿಮ್ಸ್‌ ವೈದ್ಯಕೀಯ ಕಾಲೇಜಿಗೆ ಎಂಡಿ ಕೋರ್ಸ್‌ ಮಂಜೂರು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಹು ಅನುಕೂಲವಾಗುವ ನಿಟ್ಟಿನಲ್ಲಿ ಇಲ್ಲಿನ ಗುಲ್ಬರ್ಗ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸೈನ್ಸ್‌ (ಜಿಮ್ಸ್‌) ಮೆಡಿಕಲ್‌ ಕಾಲೇಜಿನಲ್ಲಿ ಪಿಜಿ (ಎಂಡಿ) ಕೋರ್ಸ್‌ಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.

ಕೊರೊನಾದಿಂದ ಉಂಟಾಗಿರುವ ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಸರ್ಕಾರ ಕಲಬುರಗಿಯ ಜಿಮ್ಸ್‌ ವೈದ್ಯಕೀಯ ಕಾಲೇಜು ಸೇರಿ ಯಾವುದೇ ಕಾಲೇಜುಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳನ್ನು ಆರಂಭಿಸಲು ಅನುಮತಿ ನೀಡಿರಲಿಲ್ಲ. ಪಿಜಿ ಕೋರ್ಸ್‌ ಆರಂಭಿಸಲು ಇನ್ನಷ್ಟು ವೈದ್ಯಕೀಯ ಸಲಕರಣೆಗಳು ಮತ್ತು ಪ್ರಯೋಗಾಲಯಗಳನ್ನು ಆರಂಭಿಸಬೇಕಾಗುತ್ತದೆ.

ಜತೆಗೆ ಹೆಚ್ಚುವರಿ ಪ್ರಾಧ್ಯಾಪಕರ ಅಗತ್ಯವಿರುತ್ತದೆ. ಇದಕ್ಕೆ ಹಣ ನೀಡಲು ಆಗಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ, ಹೇಗಾದರೂ ಮಾಡಿ ಪಿಜಿ ಕೋರ್ಸ್‌ ಆರಂಭಿಸಬೇಕು ಎಂದುಕೊಂಡು ಕೆಕೆಆರ್‌ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ ಮತ್ತು ಸಂಸದ ಡಾ| ಉಮೇಶ ಜಾಧವ್‌ ಅವರ ಕಾಳಜಿ ಹಾಗೂ ಪ್ರಯತ್ನದ ಪರಿಣಾಮದಿಂದ ಈ ವರ್ಷ ಕಲಬುರಗಿಗೆ ಧಕ್ಕಲು ಸಾಧ್ಯವಾಗಿದೆ. ಇದು ವೈದ್ಯಕೀಯ ಲೋಕಕ್ಕೆ ಕೊಡುಗೆ ನೀಡಿದಂತಾಗಿದೆ.

ರಾಜ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದು, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸಭೆಯಲ್ಲಿ ಕಲಬುರಗಿಯ ಜಿಮ್ಸ್‌ನಲ್ಲಿ ಪಿಜಿ ಕೋರ್ಸ್‌ ಆರಂಭಿಸಲು ಅನುಮತಿಸಿದೆ. ಹೀಗಾಗಿ ಅದಕ್ಕೆ ಪೂರಕವಾಗಿರುವ ತಯಾರಿ ಮಾಡಿಕೊಂಡು ಎಂಸಿಐ ನಿಯಮದಂತೆ ಕೋರ್ಸ್‌ ಆರಂಭಿಸಲಾಗುವುದು.

ಅದರ ಮುಂದಿನ ಅಗತ್ಯ ಕ್ರಮ ಕೈಗೊಂಡು ಅನುಮತಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ. 2021-22ನೇ ಸಾಲಿನಿಂದಲೇ ಎಂಡಿಗೆ ಪ್ರವೇಶ ನೀಡಲಾಗುತ್ತದೆ. ಇದರಿಂದ ಕಲ್ಯಾಣ ಭಾಗದ ಪ್ರತಿಭಾವಂತ 90 ಮೆಡಿಕಲ್‌ ವಿದ್ಯಾರ್ಥಿಗಳಿಗೆ ಪಿಜಿ ಸೀಟುಗಳು ಸಿಗಲಿದೆ. ಜಿಮ್ಸ್‌ನಲ್ಲಿ ಪಿಸಿ ಕೋರ್ಸ್‌ನ ಜನರಲ್‌ ಮೆಡಿಸಿನ್‌ ಮತ್ತು ಜನರಲ್‌ ಸರ್ಜರಿ ವಿಭಾಗಕ್ಕೆ ತಲಾ 11, ಎಂಎಸ್‌ ಒಬಿಜಿ, ಆಥೋಪೆಡಿಕ್‌ ಮತ್ತು ಎಂಡಿ-ಪಿಡಿಯಾಟ್ರಿಕ್‌ ವಿಭಾಗಕ್ಕೆ ತಲಾ 7,
ಅನಸ್ಥೆಷಿಯಾ ಮತ್ತು ಕಮ್ಯೂನಿಟಿ ಮೆಡಿಸಿನ್‌ ಮತ್ತು ಪ್ಯಾಥಾಲಜಿ ವಿಭಾಗಕ್ಕೆ ತಲಾ 9, ಎಂಎಸ್‌ ಆಪ್ತಮಾಲೋಜಿ ಮತ್ತು ಇಎನ್‌ಟಿ ಹಾಗೂ ಎಂಡಿ ಫೋರೆನ್ಸಿಕ್‌ ಮೆಡಿಸಿನ್‌ ವಿಭಾಗದಲ್ಲಿ ತಲಾ 5 ಸೇರಿದಂತೆ ಒಟ್ಟಾರೆ 90 ಸೀಟುಗಳಿಗೆ ಪಿಜಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ರಾಜೀವಗಾಂಧಿ ಆರೋಗ್ಯ ವಿವಿ ಅನುಮತಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜ್ಯೋತಿ ಪ್ರಕಾಶ ಪತ್ರದಲ್ಲಿ ವಿವರಿಸಿದ್ದಾರೆ.

ಜಿಮ್ಸ್‌ ಮೆಡಿಕಲ್‌ ಕಾಲೇಜಿನಲ್ಲಿ ಪಿಜಿ ಕೋರ್ಸ್‌ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ದೊರೆತ್ತಿರುವುದು ತಮ್ಮ ಹಾಗೂ ಸಂಸದರ ಪ್ರಯತ್ನ ಸಾರ್ಥಕವೆನಿಸಿದೆ. ಜಿಮ್ಸ್‌ಗೆ ಅಗತ್ಯವಿರುವ ಪ್ರಯೋಗಾಲಯ, ಯಂತ್ರೋಪರಣ ಖರೀದಿಗೆ ಕೆಕೆಆರ್‌ ಡಿಬಿಯಿಂದಲೇ ಅನುದಾನ ನೀಡುವುದಾಗಿ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದರಿಂದ ಸ್ಪಂದಿಸಿ ಈಗ ಅನುಮತಿ ಸಿಕ್ಕಿದೆ. ವೈದ್ಯ ವಿದ್ಯಾರ್ಥಿಗಳಿಗೆ 371 (ಜೆ) ಅಡಿಯಲ್ಲಿ ಪ್ರವೇಶ ಲಭ್ಯವಾಗಲಿದೆ.ಇದರಿಂದ ನಮ್ಮ ಭಾಗಕ್ಕೆ ಹೆಚ್ಚಿನ ಉಪಯೋಗವಾಗಲಿದೆ.
ದತ್ತಾತ್ರೇಯ ಪಾಟೀಲ್‌ ರೇವೂರ, ಕೆಕೆಆರ್‌ಡಿಬಿ ಅಧ್ಯಕ್ಷರು

ಈಗ ಪ್ರಮುಖವಾಗಿ ಎಂಸಿಐ ಶೀಘ್ರ ಅನುಮೋದನೆ ದೊರಕಿಸಲು ಶ್ರಮಿಸಲಾಗುವುದು. ಜಿಮ್ಸ್‌ನಲ್ಲಿ ಪಿಜಿ ಕೋರ್ಸ್‌ ಆರಂಭಿಸಲು ರಾಜೀವಗಾಂಧಿ ಆರೋಗ್ಯ ವಿವಿ ಅನುಮತಿ ನೀಡಿದೆಯಲ್ಲದೆ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ರು ಮಂಡಳಿಯಿಂದಲೇ ಅನುದಾನ ನೀಡುವುದಾಗಿ ಹೇಳಿದ್ದರಿಂದ ಇದು ಸಾಧ್ಯವಾಗಿದೆ.
ಡಾ| ಉಮೇಶ ಜಾಧವ, ಸಂಸದರು ಕಲಬುರಗಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.