ಅಳ್ಳಗಿ ಮುಖ್ಯ ಕಾಲುವೆಗೆ ಶಾಸಕ ಪಾಟೀಲ್ ಭೇಟಿ
Team Udayavani, Jan 25, 2022, 11:51 AM IST
ಅಫಜಲಪುರ: ತಾಲೂಕಿನ ಅಳ್ಳಗಿ(ಬಿ) ಮುಖ್ಯ ಕಾಲುವೆಗೆ ಶಾಸಕ ಎಂ.ವೈ. ಪಾಟೀಲ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಗರಂ ಆದ ಘಟನೆ ಜರುಗಿದೆ.
ಅಳ್ಳಗಿ ಮುಖ್ಯ ಕಾಲುವೆಗೆ ಭೇಟಿ ನೀಡಿ ಮಾತನಾಡಿದ ಅವರು, ಭೀಮಾ ಏತ ನೀರಾವರಿ ಯೋಜನೆಗೆ ಆರಂಭದಲ್ಲಿ 80 ಕೋಟಿ ರೂ. ಮೀಸಲಿಡಲಾಗಿತ್ತು. ಅದು ಪೂರ್ತಿಯಾಗುವ ಹೊತ್ತಿಗೆ 900 ಕೋಟಿ ರೂ.ಖರ್ಚಾಗಿದೆ. ಇಷ್ಟು ದೊಡ್ಡ ಮೊತ್ತ ಖರ್ಚಾದರೂ ಕೂಡ ನಮ್ಮ ರೈತರ ಹೊಲಗಳಿಗೆ ಸಮರ್ಪಕವಾಗಿ ನೀರು ಹರಿದಿಲ್ಲ ಎನ್ನುವುದು ಬಹಳ ನೋವಿನ ಸಂಗತಿಯಾಗಿದೆ. ಈ ಅದ್ವಾನಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಕಿಡಿ ಕಾರಿದರು.
ಭೀಮಾ ನದಿ ನಮ್ಮ ಜೀವನದಿಯಾಗಿದೆ, ರೈತರು ನದಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಈ ಯೋಜನೆಯನ್ನು ಸಮರ್ಪಕವಾಗಿ ಪೂರ್ಣಗೊಳಿಸಲು ಅನುದಾನ ನೀಡಬೇಕು, ಅಧಿಕಾರಿಗಳು ಬೇಜವಾಬ್ದಾರಿ ಬಿಟ್ಟು ಕೆಲಸ ಮಾಡಬೇಕು. ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಪರಿಹಾರ ಕೊಟ್ಟಿಲ್ಲ, ಶೀಘ್ರವೇ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ಪೂಜಾರಿ ಉಡಚಾಣ, ಶರಣು ಕುಂಬಾರ, ಬಸವರಾಜ ಪಾಟೀಲ್, ಎಇಇ ಮಲ್ಲಿಕಾರ್ಜುನ ಜಾಕಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ