ಶರಣರ ವಚನ ವಿಶಕ್ಕೆ ಮಾದರಿ: ಶಾಸ್ತ್ರಿ
Team Udayavani, Dec 11, 2021, 11:16 AM IST
ಮಾದನಹಿಪ್ಪರಗಿ: ಜೀವನದ ಮೌಲ್ಯ ಅರಿಯಬೇಕಾದರೆ ಶರಣರ ಚರಿತ್ರೆ ಓದಬೇಕು. ಶರಣರ ತತ್ವಗಳು ಅವರ ಬದುಕಿನ ಘಟನೆಗಳೇ ಅವರು ರಚಿಸಿದ ವಚನಗಳಲ್ಲಿದ್ದು, ಅವು ವಿಶ್ವಕ್ಕೆ ಮಾದರಿಯಾಗಿವೆ ಎಂದು ಪ್ರವಚನಕಾರ ಶರಣಕುಮಾರ ಶಾಸ್ತ್ರೀ ಹೇಳಿದರು.
ಸ್ಥಳೀಯ ಶಿವಲಿಂಗೇಶ್ವರ ಮಠದ ಲಿಂ. ಶಾಂತಲಿಂಗ, ಶಿವಲಿಂಗ ಸ್ವಾಮೀಜಿ ಪುಣ್ಯಸ್ಮರಣೋತ್ಸವ ನಿಮಿತ್ತ ನಡೆಯುತ್ತಿರುವ ವಚನ ಪ್ರವಚನ ಕಾರ್ಯಕ್ರಮ ಮಾಲಿಕೆಯಲ್ಲಿ ಅವರು ಪ್ರವಚನ ನೀಡಿದರು.
ನಾವಾಡುವ ಮಾತು ವಚನವಾಗಿರಬೇಕು. ಮಾತು ಗಾಳಿಮಾತಾಗಬಾರದು. ಮಾತು ಕೃತಿಯಲ್ಲಿರಬೇಕು. ನಮ್ಮ ನಡೆ-ನುಡಿ ಇನ್ನೊಬ್ಬರಿಗೆ ಆದರ್ಶವಾಗಿರಬೇಕು ಎಂದು ನುಡಿದರು.
ಅಕ್ಕಲಕೋಟದ ಬಸವಲಿಂಗ ಸ್ವಾಮೀಜಿ, ಶಿವಯೋಗಾಶ್ರಮದ ಶಿವದೇವಿ ಮಾತಾಜಿ, ದುಧನಿಯ ಡಾ| ಶಾಂತಲಿಂಗ ಸ್ವಾಮೀಜಿ, ಶ್ರೀ ಮಠದ ಅಭಿನವ ಶಿವಲಿಂಗ ಸ್ವಾಮೀಜಿ ವೇದಿಕೆ ಮೇಲಿದ್ದರು. ಇದೆ ವೇಳೆ ಕಳೆದ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದರ್ಗಾಶಿರೂರ ಕೇರೂರ ಚಲಗೇರಾ ಖೇಡಉಮರಗಾ ನಿಂಗದಳ್ಳಿ ಸಲಗರ ಮದಗುಣಕಿ ಮುಂತಾದ ಗ್ರಾಮದ ಗಣ್ಯರು, ಭಕ್ತರು ಪಾಲ್ಗೊಂಡಿದ್ದರು.
ರಸಪ್ರಶ್ನೆ ವಿಜೇತರು
ಶುಕ್ರವಾರ ಅಭಿನವ ಶ್ರೀ ಯುವಭಕ್ತ ಬಳಗದವರಿಂದ ಮಠದಿಂದ ವಿದ್ಯಾರ್ಥಿಗಳಿಗಾಗಿ ವಲಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ಸರ್ಕಾರಿ ಪ್ರೌಢಶಾಲೆ ಸರಸಂಬಾ (ಪ್ರಥಮ), ಸ್ಥಳೀಯ ಶಿವಲಿಂಗೇಶ್ವರ ಪ್ರೌಢಶಾಲೆ (ದ್ವಿತೀಯ), ಶ್ರೀಮಂತ ದೋತ್ರೆ ಪ್ರೌಢಶಾಲೆ ಮೋಘಾ ಬಿ (ತೃತೀಯ) ವಿದ್ಯಾಥಿಗಳು ಬಹುಮಾನ ಪಡೆದರು ಎಂದು ಆನಂದರಾಜ ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ