ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದ ಸಂಸದ ಜಾಧವ
Team Udayavani, Jun 13, 2022, 12:25 PM IST
ಕಲಬುರಗಿ: ಸಮಾವೇಶವೊಂದರಲ್ಲಿ ಭಾಗವಹಿಸಲು ಹೊರಟಿದ್ದಾಗ ಮಾರ್ಗ ಮಧ್ಯೆ ಶಹಾಬಾದ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದನ್ನು ಕಂಡ ಸಂಸದ ಡಾ| ಉಮೇಶ ಜಾಧವ, ಖುದ್ದು ತಮ್ಮ ಕಾರಿನಲ್ಲಿ ಮಹಿಳೆಯನ್ನು ಜಿಮ್ಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ ಘಟನೆ ರವಿವಾರ ನಡೆದಿದೆ.
ಈ ಎಲ್ಲ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಜನಪರ ಕಾರ್ಯಗಳು ಲೋಕಸಭೆಯಲ್ಲೂ ಕಾಣಿಸಲಿ ಎಂದು ಸಲಹೆ ನೀಡಿದ್ದಾರೆ.
ರವಿವಾರ ಬೆಳಗ್ಗೆ ನಾಲವಾರದಲ್ಲಿ ನಡೆಯುವ ಸಮಾವೇಶಕ್ಕೆ ಸಂಸದರು ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಶಹಾಬಾದ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರಿಗೆ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ, ರಕ್ತ ಸುರಿಯುತ್ತಿತ್ತು. ಇದನ್ನು ಗಮನಿಸಿದ ಸಂಸದರು ಕೂಡಲೇ ಕಾರಿನಿಂದ ಇಳಿದು ಮಹಿಳೆ ಸಹಾಯಕ್ಕೆ ಧಾವಿಸಿದರು. ಈ ವೇಳೆ ತಮ್ಮ ಕಾರಿನಲ್ಲೇ ಮಹಿಳೆಯನ್ನು ಕುಳ್ಳಿರಿಸಿಕೊಂಡು ನಗರ ಜಿಮ್ಸ್ ಆಸ್ಪತ್ರೆಗೆ ಕರೆತಂದರು. ಅಲ್ಲದೇ, ತಾವೇ ಆಪರೇಷನ್ ಕೊಠಡಿಯಲ್ಲಿ ನಿಂತು ಚಿಕಿತ್ಸೆ ಕೊಡಿಸಿದರಲ್ಲದೇ, ಸ್ವಯಂ ವೈದ್ಯರಾಗಿರುವ ಅವರು ಗೌನ್ ತೊಟ್ಟು ಚಿಕಿತ್ಸೆಗೆ ಸಹಾಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು