ಭ್ರಷ್ಟಾಚಾರ ಆರೋಪಕ್ಕೆ ಪುರಸಭೆ ಸದಸ್ಯರ ಮಾತಿನ ಚಕಮಕಿ


Team Udayavani, May 18, 2022, 2:26 PM IST

13muncipal

ಚಿತ್ತಾಪುರ: ಪಟ್ಟಣದ ಘನತ್ಯಾಜ್ಯ ನಿರ್ವಹಣೆ ಘಟಕದಲ್ಲಿ 15ನೇ ಹಣಕಾಸು ಯೋಜನೆಯಡಿ ಸ್ಕ್ರೀನಿಂಗ್‌ ಮಶಿನ್‌ ಶೆಡ್‌ ನಿರ್ಮಾಣ ಕಾಮಗಾರಿ ಕಳಪೆಯಾಗಿದ್ದು, ಸರ್ಕಾರದ ಅನುದಾನ ಲೂಟಿಯಾಗಿದೆ. ಹೀಗಾಗಿ ತನಿಖೆ ಮಾಡಬೇಕು ಎಂದು ಬಿಜೆಪಿ ಸದಸ್ಯ ರಮೇಶ ಬೊಮ್ಮನಳ್ಳಿ ಆಗ್ರಹಿಸಿಸುತ್ತಿದ್ದಂತೆ ಕಾಂಗ್ರೆಸ್‌-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚಿತ್ತಾಪುರ ಪುರಸಭೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಫ್ರಾಡ್‌ ಎನ್ನುವ ಪದ ವಾಪಸ್‌ ಪಡೆಯಬೇಕು ಎಂದು ಸದಸ್ಯೆ ಶೀಲಾ ಕಾಶಿ ಆಗ್ರಹಿಸಿದರು.

ಆಗ ಕಾಂಗ್ರೆಸ್‌ ಸದಸ್ಯರೆಲ್ಲರೂ ಬಿಜೆಪಿ ಸದಸ್ಯರ ಮೇಲೆ ಮುಗಿ ಬಿದ್ದರು. ವಿಪಕ್ಷ ನಾಯಕ ನಾಗರಾಜ ಭಂಕಲಗಿ ಮಧ್ಯಪ್ರವೇಶಿಸಿ ವಿರೋಧ ಪಕ್ಷದವರಿಗೆ ಮಾತನಾಡುವ ಹಕ್ಕು ಮತ್ತು ಪಶ್ನೆ ಮಾಡುವ ಹಕ್ಕಿದೆ. ನಾವು ಮಾಡಿದ ಆರೋಪ ತಪ್ಪು ಇದ್ದರೆ ಅದಕ್ಕೆ ಸಂಬಂಧಪಟ್ಟ ದಾಖಲೆ ಪ್ರಸ್ತುತಪಡಿಸಿ. ನಮಗೂ ಎಲ್ಲವೂ ಗೊತ್ತಿದೆ. ಸುಮ್ಮನೆ ವಿಷಯಾಂತರ ಮಾಡಬೇಡಿ ಎಂದು ಹೇಳಿದರು.

ಕಳೆದ ಮಾರ್ಚ್‌ ತಿಂಗಳಲ್ಲಿ ಪಟ್ಟಣದಲ್ಲಿ ಕಾರ್ಯಕ್ರಮವೊಂದರ ಬ್ಯಾನರ್‌ ಕಟ್ಟಲು ಅನುಮತಿಗಾಗಿ ಪುರಸಭೆಯಿಂದ ಹಣ ವಸೂಲಿ ಮಾಡಿದ್ದೀರಿ. ಆ ಹಣ ಪುರಸಭೆ ನಿಧಿಗೆ ಜಮಾ ಆಗಿಲ್ಲ. ಎಲ್ಲಿಗೆ ಹೋಯ್ತು? ಎಂಬುದು ಹೇಳಿ ಎಂದು ಸದಸ್ಯ ಕೋಟೇಶ್ವರ ರೇಷ್ಮಿ ಕೇಳಿದರು.

ಅಧಿಕಾರಿ ರಾಹುಲ್‌ ಕಾಂಬಳೆ ಉತ್ತರ ನೀಡಲು ತಡವರಿಸಿದರು. ಪುರಸಭೆಯಲ್ಲಿ ಪ್ರತಿ ತಿಂಗಳು ಝರಾಕ್ಸ್‌ ಮಾಡಲು ಸಿಕ್ಕಾಪಟ್ಟಿ ಹಣ ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಹೊಸದೊಂದು ಝರಾಕ್ಸ್‌ ಯಂತ್ರ ಖರೀದಿ ಮಾಡಿ ಎಂದು ಸದಸ್ಯ ಶ್ರೀನಿವಾಸರೆಡ್ಡಿ ಪಾಲಪ್‌ ಹೇಳಿದರು. ಸಭೆಯಲ್ಲಿ ನೈರ್ಮಲ್ಯ ನಿರೀಕ್ಷಕರು ಇರುವುದು ಅವಶ್ಯವಿದೆ. ಸದಸ್ಯರ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು? ಸಭೆಯ ಮಾಹಿತಿ ಇದ್ದರೂ ಕೂಡ ಗೈರು ಹಾಜರಿಯಾಗಿರುವುದು ಸರಿಯಲ್ಲ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ವಿಪಕ್ಷ ನಾಯಕ ನಾಗರಾಜ ಭಂಕಲಗಿ ಆಗ್ರಹಿಸಿದರು.

ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಪುರಸಭೆ ಉಪಾಧ್ಯಕ್ಷೆ ಶ್ರುತಿ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಗೋವಿಂದ ನಾಯಕ, ಸದಸ್ಯರಾದ ವಿನೋದ ಗುತ್ತೇದಾರ, ಕಾಶಿಬಾಯಿ ಮರೇಪ್ಪ, ಬೇಬಿ ಸುಭಾಷ, ಸಂತೋಷ ಚೌದ್ರಿ, ಶಹನಾಜಬೇಗಂ ಎಕ್ಬಾಲ್‌, ಶಿವರಾಜ ಪಾಳೇದ್‌, ಸುಶೀಲಾ ದೇವಸುಂದರ, ಶ್ಯಾಮ ಮೇದಾ, ಪ್ರಭು ಗಂಗಾಣಿ, ಅನ್ನಪೂರ್ಣ ನಾಗಪ್ಪ, ಅತೀಯಾ ಬೇಗಂ, ಮನೋಜ ರಾಠೊಡ, ಶಶಿಕಾಂತ ಭಂಡಾರಿ, ಕೋಟೇಶ್ವರ ರೇಷ್ಮಿ ಸೇರಿದಂತೆ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.