ಮುರುಘೇಂದ್ರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ


Team Udayavani, Dec 17, 2021, 12:25 PM IST

10mata

ಆಳಂದ: ಖಜೂರಿ ಕೋರಣೇಶ್ವರ ಮಠದ ನಾಡು, ನುಡಿ, ಕಲೆ, ಸಾಂಸ್ಕೃತಿಕ ಸೇವೆ ಶ್ಲಾಘನೀಯವಾಗಿದೆ ಎಂದು ಇಂಚಗೇರಾ ಮಠದ ಶಂಭುಲಿಂಗ ಶಿವಾಚಾರ್ಯರು ಹೇಳಿದರು.

ಖಜೂರಿ ಕೋರಣೇಶ್ವರ ಮಠದ ಮುರುಘೇಂದ್ರ ಮಹಾ ಸ್ವಾಮಿಗಳ 25ನೇ ಪಟ್ಟಾಧಿಕಾರ ವಾರ್ಷಿಕ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಬೆಳ್ಳಿ ಮಹೋತ್ಸವ, ಜಾನಪದ ಜಾತ್ರೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಬೆಳಕು ನೀಡುವ ಶಕ್ತಿ ಸೂರ್ಯನಿಗಿದ್ದಂತೆ ಜ್ಞಾನ ನೀಡುವ ಶಕ್ತಿ ಖಜೂರಿಯ ಮುರುಘೇಂದ್ರ ಸ್ವಾಮಿಗಳಲ್ಲಿದೆ. ಸತ್ವ ಶೀಲ ಮತ್ತು ಕರ್ತೃತ್ವಶೀಲ ವ್ಯಕ್ತಿತ್ವ ಉಳ್ಳವರಾಗಿದ್ದಾರೆ. ಮಹಾನುಭಾವರ ವಿಚಾರ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಹೇಳಿದರು.

ಮಾಡಿಯಾಳದ ಒಪ್ಪತ್ತೇಶ್ವರ ಮಠದ ಶ್ರೀ ಮರುಳಸಿದ್ಧ ಮಹಾ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಸ್ವಾರ್ಥ ಸಾಧನೆ ತುಂಬಿದೆ. ವಿಚಾರ ಶಕ್ತಿ ತುಂಬಿಕೊಳ್ಳುವುದು ಅಗತ್ಯವಾಗಿದೆ. ಮುರುಘೇಂದ್ರ ಸ್ವಾಮೀಜಿ ಕಳೆದ 25 ವರ್ಷಗಳ ಹಿಂದೆ ಶೂನ್ಯಾವಸ್ಥೆಯಲ್ಲಿದ್ದ ಮಠಕ್ಕೆ ನೇಮಕ ಆದಾಗಿನಿಂದ ಎಲ್ಲರ ಮನ ಗೆದ್ದಿದ್ದಾರೆ ಎಂದರು.

ಪೀಠಾಧಿಪತಿ ಶ್ರೀ ಮುರುಘೇಂದ್ರ ಮಹಾ ಸ್ವಾಮೀಜಿ ಮಾತನಾಡಿ, ಶ್ರೀ ಮಠವು ಕನ್ನಡ, ನಾಡು ನುಡಿ ಸೇವೆಗೆ ಸದಾ ಬದ್ಧವಾಗಿದೆ. ಇದಕ್ಕೆ ಕನ್ನಡಪರ ಸಂಘಟಕರು, ಪತ್ರಕರ್ತರು ಸದಾ ಬೆಂಬಲ ನೀಡುತ್ತಿದ್ದಾರೆ ಎಂದು ಸ್ಮರಿಸಿದರು.

ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ ಎಸ್‌. ಕೊರಳ್ಳಿ, ಕಲಾವಿದ ಶಿವಶರಣಪ್ಪ ಪೂಜಾರಿ, ಗಂಗಾಧರ ಕುಂಬಾರ ಹಾಗೂ ಜಾನಪದ, ಸಂಗೀತ ಕ್ಷೇತ್ರ, ಪತ್ರಕರ್ತರಿಗೆ ಶ್ರೀ ಮಠದಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳಂದ ಸಂಸ್ಥಾನ ಹಿರೇಮಠದ ಸಿದ್ಧೇಶ್ವರ ಶ್ರೀ, ಕೇಸರ ಜವಳಗಾದ ವೀರಂತೇಶ್ವರ ಶ್ರೀ, ಬಂಗರಗಾದ ಗುರುಲಿಂಗ ಶಿವಾಚಾರ್ಯರು, ಕಿಣ್ಣಿಸುಲ್ತಾನ ಮಠದ ಶಾಂತಲಿಂಗ ಶ್ರೀಗಳು ಪಾಲ್ಗೊಂಡು ಮುರುಘೇಂದ್ರ ಶ್ರೀಗಳನ್ನು ಗೌರವಿಸಿದರು.

ಭೀಮಾಶಂಕರ ಪಾಟೀಲ ಉದ್ಘಾಟಿಸಿದರು. ಸನ್ಮಾನ ಸ್ವೀಕರಿಸಿದ ಶಿವಶಂಕರ ಬಿರಾದಾರ ಅವರು ಕನ್ನಡ ಗೀತೆ ಹಾಡಿದರು. ಜಾನಪದ ಕಲಾವಿದ ಬಾಬುರಾವ್‌ ಕೋಬಾಳ, ಶರಣಗೌಡ ಪಾಳಾ, ಚಂದ್ರಶೇಖರ ಕವಡೆ ಸ್ವಾಮೀಜಿ, ರೈತ ಮುಖಂಡ ಆದಿನಾಥ ಹೀರಾ, ಮಂಜುನಾಥ ಬಂಗರಗೆ ಪಾಲ್ಗೊಂಡಿದ್ದರು. ಗಂಗಾಧರ ಕುಂಬಾರ ಸ್ವಾಗತಿಸಿ, ನಿರೂಪಿಸಿದರು. ಜಿಪಂ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ ಶ್ರೀಗಳನ್ನು ಸತ್ಕರಿಸಿದರು. ಛಾಯಾಗ್ರಾಹಕ ವೀರಂದ್ರ ಹರಿಯರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.