ಸಂಗೀತದಿಂದ ಮನಸ್ಸು ಪ್ರಫುಲ್ಲ


Team Udayavani, Feb 4, 2022, 10:28 AM IST

4music

ಶಹಾಬಾದ: ಸಂಗೀತಕ್ಕೆ ಮನಸ್ಸನ್ನು ಪ್ರಫುಲ್ಲಗೊಳಿಸುವ ಶಕ್ತಿ ಇದ್ದು, ಮನವನ್ನು ಅರಳಿಸಿ ಹೃದಯ ಉದ್ದೀಪಿಸಿ ವ್ಯಕ್ತಿತ್ವವನ್ನು ವಿಕಾಸಗೊಳಿ ಸುವುದರೊಂದಿಗೆ ಬದುಕುವ ರೀತಿ-ನೀತಿ ಕಲಿಸುತ್ತದೆ ಎಂದು ಸೆಂಟ್‌ ಥಾಮಸ್‌ ಚರ್ಚ್‌ನ ಫಾದರ್‌ ಸ್ಟೇನಿ ಗೋವಿಯಸ್‌ ಹೇಳಿದರು.

ಜಿ.ಬಿ.ಸಂಗೀತಾ ಕಲಾ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ, ಸಾಮನ್ಯ ಯೋಜನೆಯಡಿ ನಗರದ ಸೆಂಟ್‌ ಥಾಮಸ್‌ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಗೀತಕ್ಕೆ ತನ್ನದೇ ಆದ ಇತಿಹಾಸ, ಪರಂಪರೆಯಿದೆ. ಧಾರ್ಮಿಕ ಹಿನ್ನೆಲೆ ಹೊಂದಿರುವ ಇದು ಸಾಹಿತ್ಯ, ಗಾನ, ನೃತ್ಯ ಈ ಮೂರು ಪ್ರಕಾರಗಳನ್ನು ಮೇಳೈಸಿಕೊಂಡು ಮನಸಿಗೆ ಮುದ ನೀಡುತ್ತದೆ. ಸಂಗೀತ ಹಾಗೂ ಗಾಯನವನ್ನು ಆಧುನಿಕತೆಗೆ ಮುಖಾಮುಖೀ ಮಾಡಿಕೊಂಡು ಅಸ್ಮಿತೆಯನ್ನು ಹಾಗೆ ಉಳಿಸಿಕೊಳ್ಳಬೇಕಿದೆ ಎಂದರು.

ಸಂಗೀತ, ಜ್ಞಾಪನ ಶಕ್ತಿ ಹೆಚ್ಚಿಸುವ ಮೂಲಕ ಶಾಂತಿ-ಸಮಾಧಾನ ನೀಡುತ್ತದೆ. ಜಗತ್ತಿನ ಜೀವ-ಜಂತುಗಳು ಕೂಡಾ ನಾದಕ್ಕೆ ತಲೆದೂಗುತ್ತವೆ. ಇತ್ತೀಚೆಗೆ ಸಂಗೀತ ತೋಟಗಳನ್ನು ನಿರ್ಮಾಣ ಮಾಡುವುದರೊಂದಿಗೆ ಗಿಡ-ಮರಗಳು ಸಂಗೀತಕ್ಕೆ ಮಾರು ಹೋಗಿವೆ ಎಂದು ಸಂಶೋಧನೆ ಮಾಡಲಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಕಲಾವಿದ ಜಿ.ಎಸ್‌.ನನ್ನಾವರೆ ಮಾತನಾಡಿ, ಗಾಯನ ಕ್ಷೇತ್ರದಲ್ಲಿ ಹಲವಾರು ಪ್ರತಿಭೆಗಳು ಹಾಡುವ ಮುಖಾಂತರ ಪ್ರಸಿದ್ಧಿಯಾಗಿದ್ದಾರೆ. ಈ ದಿಸೆಯಲ್ಲಿ ಮುಂದಿನ ಜನಾಂಗಕ್ಕೆ ಸಂಗೀತ ಹಸ್ತಾಂತರಿಸುವ ಕಾರ್ಯ ಜರುಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ನಗರಸಭೆ ಸದಸ್ಯೆ ಸಾಬೇರಾ ಬೇಗಂ, ಇಂಗಳಗಿ ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಸ್ಥಾವರಮಠ, ಜಿ.ಬಿ. ಸಂಗೀತಾ ಕಲಾ ಸಂಸ್ಥೆ ಕಾರ್ಯದರ್ಶಿ ಶಾಂತಪ್ಪ ಹಡಪದ ವೇದಿಕೆ ಮೇಲಿದ್ದರು. ಶಾಸ್ತ್ರೀಯ ಸಂಗೀತವನ್ನು ಕಲಾವಿದ ಮೌನೇಶ್ವರರಾವ ಸೂನಾರ್‌, ವಚನ ಗಾಯನವನ್ನು ಕಲಾವಿದೆ ಸುಲಲಿತಾ ಕೊಳ್ಳಿ, ದಾಸವಾಣಿಯನ್ನು ಸೇಡಂನ ಕಲಾವಿದೆ ವಿಜಯಲಕ್ಷ್ಮೀ ಕಟ್ಟಿಮನಿ ನಡೆಸಿಕೊಟ್ಟರು. ತಬಲಾ ಕಲಾವಿದರಾದ ನಾಗಭೂಷಣ ಸ್ಥಾವರಮಠ, ಲೋಕೇಶ ಪತ್ತಾರ, ಪೂಜಾ ಮೋನಯ್ನಾ ಹಾರ್ಮೋನಿಯಂ ಸಾತ್‌ ನೀಡಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.