ಜಾತಿ ಸೋಸುವಿಕೆ ಅವಶ್ಯ: ಮಾಲಗತ್ತಿ


Team Udayavani, Dec 22, 2021, 12:16 PM IST

10malagatti

ಕಲಬುರಗಿ: ಸಮಾಜದಲ್ಲಿನ ಜಾತಿ, ವರ್ಣ, ಧರ್ಮದ ವ್ಯವಸ್ಥೆ ತಪ್ಪಲ್ಲ. ಆದರೆ, ಅದನ್ನು ಬದಲಾದ ಕಾಲಕ್ಕೆ ತಕ್ಕಂತೆ ಸೋಸುವಿಕೆ ಆಗದಿರುವುದು ತಪ್ಪು ಎಂದು ಹಿರಿಯ ಸಾಹಿತಿ ಪ್ರೊ| ಅರವಿಂದ ಮಾಲಗತ್ತಿ ಬೇಸರ ವ್ಯಕ್ತಪಡಿಸಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿದ್ದ ಮುಖಾಮುಖೀ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳೆ ಕಾಲದ ಚಿನ್ನ ಭಾರ ಎಂದು ಯಾರೂ ಎಸೆಯುವುದಿಲ್ಲ. ಅದೇ ಚಿನ್ನ ಕರಗಿಸಿ, ಸೋಸಿ ಅದಕ್ಕೆ ಹೊಸ ರೂಪ ಕೊಟ್ಟು ಧರಿಸುತ್ತೇವೆ. ಅದೇ ರೀತಿ ಜಾತಿ, ಧರ್ಮದ ನ್ಯೂನತೆ ಸೋಸಿ ಸರಿಪಡಿಸಿಕೊಳ್ಳುವುದು ಅಗತ್ಯವಿದೆ. ಇಲ್ಲವಾದಲ್ಲಿ ಸಮಾಜ ಜಡವಾಗುತ್ತದೆ ಎಂದರು.

ನಮ್ಮ ಆಲೋಚನೆಗಳ ಜತೆ, ನಡೆಯೂ ಅವಲಂಬನೆ ಆಗಬೇಕು. ಆಚಾರ ಹೇಳಿದರೆ ಸಾಲದು, ಅದನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳುವುದೂ ಮುಖ್ಯ. ನಮ್ಮ ಕೃತಿಯಲ್ಲಿರುವುದನ್ನು ಅನುಷ್ಠಾನಕ್ಕೂ ತರಬೇಕು. ಹೊಸ ಆಲೋಚನೆ, ಚಿಂತನೆ ಬಂದಾಗ ವಿರೋಧ ವ್ಯಕ್ತವಾಗುವುದು ಸಹಜ. ಆದರೆ, ತೆರೆದ ಹಾಗೂ ಮುಕ್ತ ಆಲೋಚನೆಗಳಿಂದ ಮನಸ್ಸು ಪರಿಶುದ್ಧವಾಗುತ್ತದೆ. ವಿರೋಧ ಮೀರಿ ನಿಲ್ಲುವ ಗುಣವನ್ನು ಕನ್ನಡ ಸಾಹಿತ್ಯ ನೀಡುತ್ತದೆ ಎಂದು ಹೇಳಿದರು.

ಕಂಡ-ಕಂಡಿದ್ದನ್ನೆಲ್ಲ ವಿರೋಧಿಸುವುದು ಬಂಡಾಯ ಸಾಹಿತ್ಯವಲ್ಲ. ಸಮಾಜದಲ್ಲಿನ ಕೆಟ್ಟದ್ದನ್ನು ವಿರೋಧಿಸುವುದೇ ಬಂಡಾಯ ಸಾಹಿತ್ಯ. ಅಲ್ಲದೇ, ಸಾಹಿತ್ಯಗಾರನಿಗೆ ತನ್ನ ತಪ್ಪುಗಳನ್ನು ಸರಿಪಡಿಸಿಕೊಂಡು ಸತ್ಯಹೇಳುವ ಗುಣ ಇರಬೇಕು. ಆಗ ನಿತ್ಯ ನೂತನವಾಗಿ ಕಾಣುತ್ತದೆ ಎಂದು ತಿಳಿಸಿದರು.

ಸೋಲು-ಗೆಲುವುಗಳು ನಮ್ಮೊಳಗೆ ಇವೆ. ಸೋಲುತ್ತೇವೆ ಅಂತ ನಾವೇ ಅಂದುಕೊಂಡರೆ ಸೋಲುತ್ತೇವೆ. ಗೆದ್ದೇ ಗೆಲ್ಲುತ್ತೇವೆ ಎಂದು ಭಾವಿಸಿದರೆ, ಸೋಲಾದರೂ ಎದ್ದು ಮುಂದೆ ಸಾಗಲು ಸಾಧ್ಯವಾಗುತ್ತದೆ. ಇಂತಹ ಗಟ್ಟಿತನದಿಂದ ಸೋಲು ಗೆಲುವಾಗಿ ಪರಿವರ್ತನೆ ಆಗುತ್ತದೆ ಎಂದರು.

ಜಿಲ್ಲಾ ಸಾಹಿತ್ಯ ಕನ್ನಡ ಸಾಹಿತಿ ಪರಿಷತ್‌ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಸುರೇಶ ಬಡಿಗೇರ, ಶಿವರಾಜ ಅಂಡಗಿ ಹಾಗೂ ಸಾಹಿತ್ಯಾಸ್ತಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.