ರಾಜ್ಯ ಕಾಂಗ್ರೆಸ್‌ನಲ್ಲಿ ಒಳ ಜಗಳವಿಲ್ಲ: ಖರ್ಗೆ


Team Udayavani, Mar 18, 2022, 9:25 AM IST

1karge

ಕಲಬುರಗಿ: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಒಳ ಜಗಳವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದು ಪಕ್ಷ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ರಾಜ್ಯಸಭೆಯಲ್ಲಿನ ವಿಪಕ್ಷ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನವದೆಹಲಿಯಿಂದ ವಿಮಾನದ ಮೂಲಕ ಸಂಜೆ ನಗರಕ್ಕಾಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಒಳಜಗಳ ಕಾರಣ. ಅಲ್ಲದೇ ಈ ಹಿಂದೆ ನಮಗೆ ಅಧಿಕಾರ ಸಿಕ್ಕ ರಾಜ್ಯದಲ್ಲಿ ಸರ್ಕಾರ ಅಸ್ಥಿರ ಮಾಡಿದ ಬಿಜೆಪಿಯವರು ಪ್ರಜಾಪ್ರಭುತ್ವ ಕೊಲೆ ಮಾಡಿದ್ದಾರೆ. ಯಾವ ಪ್ರಧಾನಿಯೂ ತಿಂಗಳುಗಟ್ಟಲೆ ಚುನಾವಣಾ ಪ್ರಚಾರ ಮಾಡುವುದಿಲ್ಲ. ಆದರೆ ಮೋದಿ ತಿಂಗಳುಗಟ್ಟಲೆ ಚುನಾವಣಾ ಪ್ರಚಾರ ಮಾಡ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡುತ್ತಾ ಹೋದ್ರೆ ಪ್ರಜಾಪ್ರಭುತ್ವ ಉಳಿಯಲ್ಲ. ಧರ್ಮ, ಹಣ, ವ್ಯಕ್ತಿ ಪೂಜೆ ಮಾಡುವವರಿಂದ ನಿಷ್ಪಕ್ಷಪಾತ ಚುನಾವಣೆ ನೋಡಲು ಸಾಧ್ಯವಿಲ್ಲ. ಸಂವಿಧಾನ ಉಳಿಸಲು ಜನರು ಜಾಗೃತರಾಗಬೇಕಿದೆ ಎಂದರು.

ದಿ ಕಾಶ್ಮೀರಿ ಫೈಲ್ಸ್‌ ಚಿತ್ರ ಚೆನ್ನಾಗಿದ್ದರೆ ಜನ ನೋಡ್ತಾರೆ. ಆದರೆ ಪ್ರಧಾನಿ ಪ್ರಮೋಟ್‌ ಮಾಡೋದನ್ನು ನೋಡಿದರೆ ಇದರ ಮರ್ಮ ಗೊತ್ತಾಗುತ್ತದೆ. ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಚಿತ್ರ ತೆಗೆದಿದ್ದಾರೆ. ಜನ ತಾವಾಗಿಯೇ ನೋಡಿದ್ರೆ ಯಾರದ್ದೂ ಅಭ್ಯಂತರವಿಲ್ಲ. ಬಿಜೆಪಿಯವರು ತಮ್ಮ ಪಕ್ಷದ ಮೀಟಿಂಗ್‌ನಲ್ಲಿ ಪ್ರಮೋಟ್‌ ಮಾಡ್ತಿದ್ದಾರೆ. ಪ್ರಮುಖವಾಗಿ ದೇಶದಲ್ಲಿ ಬೆಂಕಿ ಹಚ್ಚುವುದು, ದೇಶ ವಿಭಜನೆ ಮಾಡೋ ಕೆಲಸ ಮಾಡುತ್ತಿದ್ದಾರೆ ಎಂದರು.

ದೇಶಕ್ಕಾಗಿ ಬಲಿದಾನ ಮಾಡಿದವರ ಚಿತ್ರ ತೆಗೆದು ತೋರಿಸಲಿ. ಆದರೆ ಬಿಜೆಪಿಯವರು ದೇಶದ ಸ್ವಾತಂತ್ರ್ಯಕ್ಕೆ ಯಾರೂ ಬಲಿದಾನ ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾದ್ರೆ ಅವರಿಗೆ ನ್ಯಾಯ ಒದಗಿಸಿ. ಇದೀಗ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆವರೆಗೆ ಮತ್ತೆ ಈ ರೀತಿಯ ಚಿತ್ರಗಳು ಬರುತ್ತವೆ. ಮೋದಿ ತಮಗೆ ಚಿತ್ರ ತೋರಿಸಿಲ್ಲ, ತಮಗೆ ನೋಡು ಅಂತಲೂ ಹೇಳಿಲ್ಲ ಎಂದರು.

ಹೊಗಳುತ್ತಿದ್ದವರೇ ಈಗ ತೆಗಳುತ್ತಿದ್ದಾರೆ!

ಮೊನ್ನೆವರೆಗೂ ಸೋನಿಯಾ ಗಾಂಧಿ ಅವರನ್ನು ಹೊಗಳುತ್ತಿದ್ದರು. ಗೆದ್ದಾಗ ಇದೇ ನಾಯಕರು ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಹೊಗಳಿದ್ದರು. ಕೆಲ ಜನರಿಗೆ ಅಧಿಕಾರಬೇಕು. ಆದರೆ ಅವರು ಅಷ್ಟು ಶಾಸಕರನ್ನೇ ಗೆಲ್ಲಿಸಿಲ್ಲ. ಇದೇ ನಾಯಕರೇ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರನ್ನು ಕರೆತಂದಿದ್ದು. ಇದೀಗ ಅವರೇ ಅವರ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ ಗಾಂಧಿ ಗುಂಡಿಗೆ ಬಲಿಯಾಗಿದ್ದಾರೆ. ಇವರು ಯಾರಾದರೂ ದೇಶಕ್ಕಾಗಿ ಜೀವ ಕೊಟ್ಟಿದ್ದಾರಾ? ಪಕ್ಷದ ಮೇಲೆ ಅಭಿಮಾನ ಇರೋರು ಈ ರೀತಿ ಮಾತನಾಡುವುದು ಸರಿಯಲ್ಲ. ಸಿಡಬ್ಲ್ಯುಸಿ ಸಭೆಯಲ್ಲಿ ಇವರ್ಯಾರು ಮಾತನಾಡಲ್ಲ. ಹೊರಗಡೆ ಮಾತ್ರ ನಾಯಕತ್ವದ ಬಗ್ಗೆ ಮಾತನಾಡುತ್ತಾರೆ. ಒಳ್ಳೆಯದಾಯ್ತು ಅಂದ್ರೆ ನಂದು, ಕೆಟ್ಟದಾಯ್ತು ಅಂದ್ರೆ ನಿಂದು ಅನ್ನೋರಿದ್ದಾರೆ ಎಂದು ಡಾ| ಖರ್ಗೆ ತಿರುಗೇಟು ನೀಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.