ತುರ್ತು ಸಭೆಗೆ ಬಾರದ ಅಧಿಕಾರಿಗೆ ನೋಟಿಸ್: ತಾಪಂ ಇಒ ಎಚ್ಚರಿಕೆ
Team Udayavani, May 24, 2022, 11:10 AM IST
ಚಿಂಚೋಳಿ: ತಾಲೂಕಿನ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ನಿರ್ಲಕ್ಷತನ ಹೆಚ್ಚಾಗಿದೆ. ತುರ್ತು ಪರಸ್ಥಿತಿಯಲ್ಲಿ ಕರೆಯಲಾದ ಸಭೆಗಳಿಗೆ ಅಧಿಕಾರಿಗಳು ಹಾಜರಾಗದೇ ಇರುವುದು ಸರಿಯಾದ ಕ್ರಮವಲ್ಲ. ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ತಾಪಂ ಇಒ ಅನಿಲಕುಮಾರ ರಾಠೊಡ ಎಚ್ಚರಿಕೆ ನೀಡಿದರು.
ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಸಮಾಜ ಕಲ್ಯಾಣ ಇಲಾಖೆ 2021-22ನೇ ಸಾಲಿನ ಎಸ್ ಸಿಪಿ/ಟಿಎಸ್ಪಿ ಯೋಜನೆಗಳಲ್ಲಿ ಕೈಗೊಂಡ ಕಾಮಗಾರಿಗಳ ಅನುಷ್ಠಾನ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಸಭೆ ನಡೆಯುವ ಬಗ್ಗೆ ಒಂದು ದಿನ ಮೊದಲೇ ಅಧಿಕಾರಿಗಳಿಗೆ ತಿಳಿಸಿದರು ಸಹ ಯಾರು ಸಭೆಗೆ ಬರುವುದಿಲ್ಲ. ಇದರಿಂದ ಸಭೆ ನಡೆಸುವುದಾದರು ಯಾಕೆ? ಸಭೆ ನಡೆಸುವ ಅರ್ಥವೇ ಇಲ್ಲ. ಸರಕಾರಿ ಯೋಜನೆಗಳೆಲ್ಲವೂ ಕಾರ್ಯರೂಪಕ್ಕೆ ಬರುವುದಕ್ಕಾಗಿ ಅಧಿಕಾರಿಗಳೆಲ್ಲರೂ ಕಾರ್ಯ ಪ್ರವೃತ್ತರಾಗಬೇಕಾಗಿದೆ ಎಂದರು.
ತಹಶೀಲ್ದಾರ್ ಅಂಜುಮ ತಬಸುಮ ಮಾತನಾಡಿ, ಕಂದಾಯ ಇಲಾಖೆ ಅತೀ ಮಹತ್ವದ ಕೆಲಸ ಬಿಟ್ಟು ಸಭೆಗೆ ಹಾಜರಾಗಿದ್ದೇನೆ. ಆದರೆ ಯಾರು ಸಭೆಗೆ ಹಾಜರಾಗದೇ ನಿರ್ಲಕ್ಷತನ ಮಾಡಿದ ಅಧಿಕಾರಿಗಳಿಗೆ ನೋಟಿಸು ನೀಡಬೇಕು. ಮಳೆಗಾಲ ಪ್ರಾರಂಭ ಆಗಿರುವುದರಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿ ಬರುತ್ತಿದೆ. ಎಲ್ಲ ಅಧಿಕಾರಿಗಳು ಅಲರ್ಟ ಆಗಿರಬೇಕು ಸೂಚನೆ ನೀಡಿದರು.
ಪಿಆರ್ಇ ಎಇಇ ಅಹೆಮದ ಹುಸೇನ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಎಇಇ ಶಿವಶರಣಪ್ಪ ಕೇಶ್ವಾರ ಮಾತನಾಡಿದರು. ಮೇ 27ರಂದು ನಿಡಗುಂದಾ ಗ್ರಾಮದಲ್ಲಿ ಸೇಡಂ ಶಾಸಕರು ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಭಾಗವಹಿಸಬೇಕು ಎಂದು ತಹಶೀಲ್ದಾರರು ತಿಳಿಸಿದರು.
ಆರೋಗ್ಯಾಧಿಕಾರಿ ಡಾ| ಮಹಮ್ಮದ ಗಫಾರ, ಎಇಇ ಪ್ರಕಾಶ ಕುಲಕರ್ಣಿ, ಬಿಸಿಎಂ ಅಧಿಕಾರಿ ಶಾಂತವೀರಯ್ಯ ಹಿರೇಮಠ, ಅರಣ್ಯ ಇಲಾಖೆ ಸಿದ್ದಾರೂಢ ಹೊಕ್ಕುಂಡಿ, ಅನುಸೂಯಾ ಚವ್ಹಾಣ, ಜೆಇ ಗಿರಿರಾಜ ಸಜ್ಜನಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ