ಸರ್ಕಾರಿ ಶಾಲೆಗೆ 3 ವರ್ಷದ ಮಗು ಸೇರಲು ಅವಕಾಶ


Team Udayavani, Feb 13, 2022, 1:01 PM IST

6school

ಕಲಬುರಗಿ: ಮಕ್ಕಳ ಶೈಕ್ಷಣಿಕ ಮಟ್ಟ ಬೆಳವಣಿಗೆಗೆ ಉತ್ತಮ ಅಡಿಪಾಯ ಹಾಕಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ (ಎನ್‌ಇಪಿ) ಸಾಧ್ಯವಿದೆ. ಖಾಸಗಿ ಶಾಲೆಗಳಲ್ಲಿ ಮೂರು ವರ್ಷದ ಮಗು ಸೇರಿಸುವಂತೆ ಸರ್ಕಾರಿ ಶಾಲೆಗೂ ಮಗು ಸೇರಲು ಎನ್‌ಇಪಿಯಲ್ಲಿ ಅವಕಾಶವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದರು.
ನಗರದ ಎಚ್‌ಕೆಸಿಸಿಐ ಸಭಾಂಗಣದಲ್ಲಿ ಶನಿವಾರ ಸಿದ್ಧಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕಾಶನ, ಸಿದ್ಧಲಿಂಗೇಶ್ವರ ಪ್ರಕಾಶನ, ಬಸವ ಪ್ರಕಾಶನದ 45ನೇ ವಾರ್ಷಿಕೋತ್ಸವ ಹಾಗೂ 115 ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಹೊಸ ಬಟ್ಟೆ ಧರಿಸಿದಂತೆ ಅಲ್ಲ. ಕಲಿಕೆಯಲ್ಲಿ ಗುಣಮಟ್ಟ ಹೆಚ್ಚಿಸುವುದೇ ಈ ನೀತಿಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಶಾಲೆಗೆ ಸೇರುವ 100 ವಿದ್ಯಾರ್ಥಿಗಳ ಪೈಕಿ 35ರಷ್ಟು ಮಾತ್ರ ಗುಣಮಟ್ಟದ ಶಿಕ್ಷಣ ಪಡೆದ ವಿದ್ಯಾರ್ಥಿಗಳಾಗಿ ಹೊರಹೊಮ್ಮುತ್ತಿದ್ದಾರೆ. ಇದರಲ್ಲಿ ಸರ್ಕಾರಿ ಮತ್ತು ಖಾಸಗಿಯಲ್ಲಿ ಅಂತಹ ದೊಡ್ಡ ಮಟ್ಟದ ವ್ಯಾತ್ಯಾಸವೇನಿಲ್ಲ. ಕೇವಲ 5ರಷ್ಟು ಮಾತ್ರ ಗುಣಮಟ್ಟದ ಶಿಕ್ಷಣದ ವ್ಯತ್ಯಾಸವಿದೆ ಎಂದರು.

ಬಾಲ್ಯದಲ್ಲೇ ಶೇ.85ರಷ್ಟು ಬುದ್ಧಿಮಟ್ಟ ಬೆಳವಣಿಗೆ ಆಗುತ್ತದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಗುಣಮಟ್ಟದ ಶಿಕ್ಷಣಕ್ಕೆ ಹೊಸ ಶಿಕ್ಷಣ ನೀತಿ ಅಡಿಪಾಯ ಹಾಕಲಾಗಿದೆ. ಈ ಹಿಂದೆ ಸರ್ಕಾರಿ ಶಾಲೆಗೆ ಆರು ವರ್ಷಕ್ಕೆ ಮಗು ಬರುತ್ತಿತ್ತು. ಆದರೆ, ಈ ಹೊಸ ನೀತಿಯಲ್ಲಿ ಮೂರು ವರ್ಷದಿಂದಲೇ ಮಗು ಆಟದ ಮೂಲಕ ಪಾಠ ಕಲಿಯಲಿದೆ ಎಂದರು.

34 ವರ್ಷಗಳ ನಂತರ ದೇಶದಲ್ಲಿ ಶಿಕ್ಷಣಕ್ಕೆ ಹೊಸ ದಿಕ್ಕು ನೀಡಲಾಗಿದೆ. ಇದು ಸುಧಾರಣೆ, ಪರಿರ್ವತನೆಗೆ ಸಹಕಾರಿಯಾಗದೆ. ಕಳೆದ ಆರು ವರ್ಷಗಳಿಂದ ಎಲ್ಲ ಆಯಾಮಗಳಲ್ಲೂ, ಎಲ್ಲರೊಂದಿಗೂ ಚರ್ಚೆ-ಪರಾಮರ್ಶೆ ನಡೆಸಿದ ಬಳಿಕ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ. ಇದರಿಂದ ರಾಜ್ಯ ಮತ್ತು ದೇಶದ ಪರಿಪೂರ್ಣ ಸಬಲೀಕರಣದ ಕನಸು ನನಸಾಗಿಸಲಿದೆ. ದೇಶವನ್ನು ಸದೃಢವಾಗಿ ಕಟ್ಟುವುದೇನಿದ್ದರೂ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪ್ರತಿಪಾದಿಸಿದರು.

ವ್ಯಕ್ತಿ ಸ್ವಂತ ಜ್ಞಾನದಿಂದ ಬೆಳೆಯಬೇಕು, ಸ್ವಂತ ಕೌಶಲದಿಂದ ದುಡಿಯಬೇಕು, ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು, ಸಮಾಜದ ಅಭಿವೃದ್ಧಿಗೂ ಪೂರಕವಾಗಬೇಕು ಎನ್ನುವ ಆಶಯ ಈ ಹೊಸ ನೀತಿಯಲ್ಲಿದೆ. ಬಸವಣ್ಣನವರ ಕಾಯಕವೇ ಕೈಲಾಸ ಎಂಬಂತೆ ಮೌಲ್ಯವರ್ಧಿತ ಶಿಕ್ಷಣ ನೀಡುವ ಮೂಲಕ ಕಾಯಕ ಹಾಗೂ ಕೈಲಾಸದ ಸಾಕಾರ ಮಾಡಲೂ ಸಾಧ್ಯವಿದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಮಾತನಾಡಿ, ಇಂದಿನ ಡಿಜಿಟಲ್‌ ಯುಗದಲ್ಲೂ ಓದುವಿಕೆ ವ್ಯಾಪಿಸಿದೆ. ಗುಣಮಟ್ಟದ ಬರಹಕ್ಕೆ ಪ್ರಜ್ಞಾವಂತರು ಮನ್ನಣೆ ನೀಡಿಯೇ ನೀಡುತ್ತಾರೆ. ಓದುವ ಸಂಸ್ಕೃತಿಯ ಎಂದೂ ಕಳೆದುಕೊಳ್ಳಬಾರದು ಎಂದರು.

ಗುಲಬರ್ಗಾ ವಿವಿ ಕುಲಪತಿ ಪ್ರೊ| ದಯಾನಂದ ಅಗಸರ ಮಾತನಾಡಿ, ಸಿದ್ಧಲಿಂಗೇಶ್ವರ ಪ್ರಕಾಶನ ಹೊರದಂತ 115 ಪುಸ್ತಕಗಳ ಪೈಕಿ 34 ಪುಸ್ತಕಗಳು ಹೊಸ ಶಿಕ್ಷಣ ನೀತಿಯ ಪಠ್ಯಕ್ರಮಕ್ಕೆ ಸಂಬಂಧಿಸಿವೆ. ಈ ಮೂಲಕ ವಿವಿಯ ಪಠ್ಯ ಪುಸ್ತಕದ ಕೊರತೆ ನೀಗದಂತೆ ಆಗಿದೆ. ಗುವಿವಿ ವ್ಯಾಪ್ತಿಯ ಎಲ್ಲ 352 ಕಾಲೇಜಿಗಳಲ್ಲೂ ಹೊಸ ಶಿಕ್ಷಣ ನೀತಿ ಜಾರಿಗೆ ಮಾಡಲಾಗುತ್ತಿದೆ ಎಂದರು.

ಗದಗ-ಡಂಬಳ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಆಶೀರ್ವಚನ ನೀಡಿದರು. ಗುವಿವಿ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ| ಎಚ್‌.ಟಿ.ಪೋತೆ ಮಾತನಾಡಿದರು. ಸಿದ್ಧಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕಾಶನದ ಸಂಸ್ಥಾಪಕ ಬಸವರಾಜ ಜಿ. ಕೊನೇಕ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್‌ ಸದಸ್ಯರಾದ ಶಶೀಲ್‌ ನಮೋಶಿ, ಬಿ.ಜಿ. ಪಾಟೀಲ, ಕ್ರೆಡಲ್‌ ಅಧ್ಯಕ್ಷ ಚಂದು ಪಾಟೀಲ ಮತ್ತಿತರರು ಇದ್ದರು.

ಪುಸ್ತಕ ಪ್ರಕಾಶನ ಮತ್ತು ನಾಟಕ ಕಂಪನಿಯಿಂದ ಬದುಕು ಕಟ್ಟಿಕೊಳ್ಳುವುದು ಕಷ್ಟಸಾಧ್ಯ. ಆದರೆ, ಸಿದ್ಧಲಿಂಗೇಶ್ವರ ಪ್ರಕಾಶನ ನಿರಂತರವಾಗಿ 45 ವರ್ಷದಿಂದ ಪುಸ್ತಕಗಳ ಪ್ರಕಟಣೆಯೊಂದಿಗೆ ಇತರರ ಬದುಕು ಕಟ್ಟುತ್ತಿದೆ. ಮನೆಯಲ್ಲಿ ಪುಸ್ತಕ ಇದ್ದರೆ ಆ ಮನೆಗೆ ಜೀವ ಕಳೆ ತುಂಬಿದಂತೆ. -ಸಿದ್ಧರಾಮ ಸ್ವಾಮೀಜಿ, ಗದಗ-ಡಂಬಳ ತೋಂಟದಾರ್ಯ ಮಠ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.