ಮನೆ ನಳಕ್ಕೆ ಮೀಟರ್‌: ಕಮರವಾಡಿ ಗ್ರಾಮಸ್ಥರ ವಿರೋಧ


Team Udayavani, Feb 15, 2022, 1:06 PM IST

11apeal

ವಾಡಿ: ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಅಡಿ ಮನೆ ಮನೆಗೆ ಗಂಗೆ ಯೋಜನೆಗೆ ಹಳಕರ್ಟಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತವಾದ ಬಳಿಕ ಈಗ ಕಮರವಾಡಿ ಗ್ರಾಮಸ್ಥರಿಂದ ವಿರೋಧ ಕೇಳಿಬಂದಿದೆ.

ಎಐಕೆಕೆಎಂಎಸ್‌ ಸಂಘಟನೆಗೆ ಸಂಯೋಜಿತ ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‌ಕೆಎಸ್‌) ನೇತೃತ್ವದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಭಾರತಿ ಮಣೂರೆ ಅವರಿಗೆ ಸೋಮವಾರ ಮನವಿ ಸಲ್ಲಿಸಿರುವ ಗ್ರಾಮಸ್ಥರು, ಜಲಜೀವನ್‌ ಮಿಷನ್‌ ಕಾರ್ಯಕ್ರಮದಡಿ ಮನೆ ಮನೆಗೆ ನಳ ಸಂಪರ್ಕ ಕೊಟ್ಟು ಪ್ರತಿಯೊಂದು ನಳಕ್ಕೂ ಮೀಟರ್‌ ಅಳವಡಿಸುವುದನ್ನು ಖಂಡಿಸಿದ್ದಾರೆ.

ಆರಂಭದಲ್ಲಿ ಅಗತ್ಯವಿರುವಷ್ಟು ನೀರು ಉಚಿತವಾಗಿ ಕೊಟ್ಟು ನಂತರ ಸ್ವೀಕರಿಸಿದಷ್ಟು ನೀರಿಗೆ ಇಂತಿಷ್ಟು ಶುಲ್ಕ ಪಾವತಿಸಬೇಕು ಎಂದು ದುಬಾರಿ ದರ ನಿಗದಿಪಡಿಸುತ್ತಾರೆ. ಇದು ಗ್ರಾಮೀಣ ಪ್ರದೇಶದ ಬಡ ಕುಟುಂಬಗಳಿಗೆ ಹೊರೆಯಾಗಲಿದೆ. ಕುಡಿಯುವ ನೀರು ಕೊಡುವ ಯೋಜನೆಯಲ್ಲೂ ಸರ್ಕಾರ ವ್ಯಾಪಾರಕ್ಕಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನವಿ ಸಲ್ಲಿಸಿ ಮಾತನಾಡಿದ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ಪ್ರಜಾತಂತ್ರ ವ್ಯವಸ್ಥೆಯ ಸರ್ಕಾರಗಳು ಕುಡಿಯುವ ನೀರು ಜನರಿಗೆ ಉಚಿತವಾಗಿ ಸರಬರಾಜು ಮಾಡಬೇಕು. ಆದರೆ ಮನೆ ಮನೆಯ ನಳಗಳಿಗೆ ಮೀಟರ್‌ ಅಳವಡಿಸುವ ಮೂಲಕ ಜಲ ಮೂಲಗಳನ್ನೆಲ್ಲ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಲು ಹೊರಟಿದ್ದಾರೆ.

ಬಹುತೇಕ ಸರ್ಕಾರದ ಸಾರ್ವಜನಿಕ ಸೇವಾ ಕ್ಷೇತ್ರಗಳು ಈಗಾಗಲೇ ಉದ್ಯಮಿಪತಿಗಳ ಪಾಲಾಗಿವೆ. ಈಗ ಕುಡಿಯುವ ನೀರಿನ ಸರದಿ ಬಂದಿದೆ. ಮೇಲ್ನೋಟಕ್ಕೆ ಬಹಳ ಉತ್ತಮ ಯೋಜನೆ ಎನ್ನಿಸುತ್ತಿರುವ ಮನೆ ಮನೆಗೆ ಗಂಗೆ ಯೋಜನೆಯ ಒಳಗಡೆ ಸುಲಿಗೆಕೋರರು ಅಡಗಿ ಕುಳಿತಿದ್ದಾರೆ ಎಂದು ಕಿಡಿಕಾರಿದರು.

ಗ್ರಾಮೀಣ ಜನರನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆ ಅನುಷ್ಟಾನಕ್ಕೆ ಮುಂದಾಗಿರುವ ಬಿಜೆಪಿ ಸರ್ಕಾರ, ಕಾರ್ಪೋರೇಟ್‌ ಕಂಪನಿಗಳಿಗೆ ರತ್ನಗಂಬಳಿ ಹಾಸಿ ಗ್ರಾಮೀಣ ಜನರ ಜೇಬಿಗೆ ಕೈಹಾಕಿದೆ. ಈಗಗಲೇ ಜನರು ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿ ಹೋಗಿದ್ದಾರೆ. ನಿರುದ್ಯೋಗ ಸಮಸ್ಯೆ ಪೆಡಂಭೂತದಂತೆ ಬೆಳೆದು ನಿಂತಿದೆ. ಖಾಸಗೀಕರಣ ನೀತಿಯಿಂದಾಗಿ ಎಲ್ಲವೂ ಮಾರಾಟಕ್ಕಿಡಲಾಗಿದೆ. ಜನರು ಎಚ್ಚೆತ್ತು ಸರ್ಕರದ ಹುನ್ನಾರಗಳನ್ನು ಅರ್ಥ ಮಾಡಿಕೊಳ್ಳಬೇಕು. ಮೀಟರ್‌ ದಂಧೆಗೆ ಒಕ್ಕೂರಲಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ರೈತ ಮುಖಂಡ ಗುಂಡಣ್ಣ, ಜನರ ವಿರೋಧದ ನಡುವೆಯೂ ನಳಗಳಿಗೆ ಮೀಟರ್‌ ಅಳವಡಿಸಲು ಮುಂದಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆರ್‌ಕೆಎಸ್‌ ತಾಲೂಕು ಕಾರ್ಯದರ್ಶಿ ಮಲ್ಲಣ್ಣ ದಂಡಬಾ, ಗ್ರಾಮದ ಮುಖಂಡರಾದ ಸೂರ್ಯಕಾಂತ ಶಿರವಾಳ, ಹಣಮಂತ ತಳವಾರ, ಶರಣಗೌಡ ಶಿರವಾಳ, ವಿನೋದ ಚವ್ಹಾಣ, ಮಹ್ಮದ್‌ ಯ್ಯೂಸೂಪ್‌ ಮುಲ್ಲಾ, ಬಂಡೆಪ್ಪ ಶಿರವಾಳ, ನಿಂಗಪ್ಪ ಪೂಜಾರಿ, ದ್ಯಾವಣ್ಣ ತಳವಾರ, ಜಗನ್ನಾಥಗೌಡ ಪೊಲೀಸ್‌ ಪಾಟೀಲ, ಬಸವರಾಜ ಸುಲೇಪೇಠ ಮತ್ತಿತರರು ಮನವಿ ಪತ್ರ ಸಲ್ಲಿಸುವ ನಿಯೋಗದಲ್ಲಿ ಇದ್ದರು.

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.