ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ
Team Udayavani, Dec 6, 2021, 10:28 AM IST
ಕಲಬುರಗಿ: ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕೆಂದು ಪಕ್ಷದ ನಗರಾಧ್ಯಕ್ಷ ಸಿದ್ಧಾಜಿ ಪಾಟೀಲ ಕರೆ ನೀಡಿದರು.
ನಗರದ ಸಂಗಮೇಶ್ವರ ಕಾಲೋನಿಯಲ್ಲಿರುವ ಯಜ್ಞವಲ್ಕ ಸಭಾಗಂಣದಲ್ಲಿ ಬಿಜೆಪಿ ದಕ್ಷಿಣ ಮಂಡಲ ಕಾರ್ಯಕಾರಿಣಿ ಸಭೆಯನ್ನು ಭಾರತಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಚಾಲನೆ ನೀಡಿ ಅವರು ಮಾತನಾಡಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್ ಮಾತನಾಡಿ, ಪ್ರಸ್ತುತ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಬಿ.ಜಿ.ಪಾಟೀಲ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮ ವಹಿಸಬೇಕಾಗಿದೆ ಎಂದರು.
ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಸಾಲಿಮಠ ಮಾತನಾಡಿ, ಕಳೆದ ಮೂರು ತಿಂಗಳಲ್ಲಿ ನಡೆದ ಪಕ್ಷದ ಕಾರ್ಯ ಕ್ರಮಗಳನ್ನು ವಿವರಿಸಿದರು. ದಕ್ಷಿಣ ಮಂಡಲದ ಅಧ್ಯಕ್ಷ ರಾಮಚಂದ್ರ ಗುಮ್ಮಟ್ ಸ್ವಾಗತ ಭಾಷಣ ಮಾಡಿದರು. ಕಾರ್ಯಕಾರಿಣಿ ಆರಂಭಕ್ಕೂ ಮುಂಚೆ ಇತ್ತೀಚೆಗೆ ನಿಧನರಾದ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ ಹಾಗೂ ಹಿರಿಯ ನಟ ಶಿವರಾಮ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮುಖಂಡರಾದ ಮಹದೇವ ಬೆಳ ಮಗಿ, ಸುರಜ ಪ್ರಸಾದ ತಿವಾರಿ, ವಿಶ್ವನಾಥ ಸಾಲಿಮಠ, ಸತೀಶ ಜಮಖಂಡಿ, ರಂಜಿತ್ ಮೂಲಿಮನಿ, ಮಹಾನಗರ ಪಾಲಿಕೆ ಸದಸ್ಯರಾದ ವಿಶಾಲ ದರ್ಗಿ, ಮಲ್ಲು ಉದನೂರು, ವೀರಣ್ಣ ಹೊನ್ನಳ್ಳಿ, ಶಂಭು ಬಳಬಟ್ಟಿ, ಗುರು ಪಟ್ಟಣ, ಮೋರ್ಚಾ ಅಧ್ಯಕ್ಷೆ ಶೋಭಾ ಪಾಟೀಲ ಬಾಗೆವಾಡಿ, ವಿಜಯಲಕ್ಷ್ಮೀ ಗೊಬ್ಬುರ, ಮಹಾದೇವಿ, ಆರತಿ ತಿವಾರಿ, ಸತೀಶ ಜಮಖಂಡಿ, ರಂಜಿತ ಮೂಲಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ