ಕೆಂಡದಂಥ ಬಿಸಿಲಿಗೆ ಜನತೆ ಸುಸ್ತು


Team Udayavani, Apr 10, 2022, 12:55 PM IST

8summer

ಜೇವರ್ಗಿ: ಬಿಸಿಲಿನ ತಾಪಮಾನ ದಿನೇದಿನೆ ಹೆಚ್ಚಾಗುತ್ತಿದ್ದು, ಏಪ್ರಿಲ್‌ ಕೊನೆ ವಾರ ಹಾಗೂ ಮೇ ತಿಂಗಳಲ್ಲಿ ಇನ್ನೂ ಹೆಚ್ಚಿನ ಬಿಸಿಲು ಎದುರಾಗುವ ಭೀತಿ ಜನಕ್ಕೆ ಎದುರಾಗಿದ್ದು, ಕೆಂಡದಂಥ ಬಿಸಿಲಿಗೆ ಜನ ಸುಸ್ತಾಗಿ ಮನೆ ಬಿಟ್ಟು ಹೊರಗೆ ಬರಲು ಹಿಂಜರಿಯುತ್ತಿದ್ದಾರೆ.

ಬೆಳಗ್ಗೆ 8 ಗಂಟೆಯಾದರೇ ಸಾಕು ಬಿಸಿಲು ಮುಖಕ್ಕೆ ಕೆಂಡ ಎರಚಿದಂತೆ ಭಾಸವಾಗುತ್ತಿದ್ದು, ಎಲ್ಲಿ ಕೂತರು ಸಮಧಾನವಿಲ್ಲದಂತಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಜನ ಪಟ್ಟಣಕ್ಕೆ ಬರುವುದನ್ನೇ ಕಡಿಮೆ ಮಾಡಿದ್ದಾರೆ. ಮದ್ಯಾಹ್ನ ಮುಖ್ಯ ರಸ್ತೆಗಳು ಬಿಕೋ ಎನ್ನುತ್ತಿವೆ. ಅಲ್ಲದೇ ವ್ಯಾಪಾರ ವಹಿವಾಟಿನ ಮೇಲೂ ಕೆಟ್ಟ ಪರಿಣಾಮ ಬೀರಿದೆ. ರಾತ್ರಿ ಸಮಯದಲ್ಲಂತೂ ವಿದ್ಯುತ್‌ ಹೋದರೇ ಚಿಕ್ಕ ಮಕ್ಕಳು, ವೃದ್ಧರ ಪಾಡು ಹೇಳತೀರದಾಗಿದೆ.

ತಾಪಮಾನ ಹೆಚ್ಚಾಗುತ್ತಾ ಹೋಗುತ್ತಿರುವುದರಿಂದ ಧಗೆಗೆ ಬೆದರಿ ಮಹಿಳೆಯರು, ಮಕ್ಕಳು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಬೆಂಕಿ ಅನುಭವ ನೀಡುತ್ತಿರುವ ಉರಿ ಬಿಸಿಲಿಗೆ ಬೆಳಗ್ಗೆ ಹಾಗೂ ರಾತ್ರಿ ಮಾತ್ರ ಹೆಚ್ಚಾಗಿ ಮನೆಯಿಂದ ಹೊರಬರುತ್ತಿದ್ದಾರೆ. ಬಿಸಿಲಿನ ಉಪಟಳ ತಾಳದೇ ತಂಪು ಪಾನೀಯಗಳಾದ ಐಸ್‌ ಕ್ರೀಮ್‌, ಕಲ್ಲಂಗಡಿ, ಕರಬೂಜ್‌, ದ್ರಾಕ್ಷಿ, ಹಣ್ಣಿನ ಜ್ಯೂಸ್‌, ಎಳೆನೀರು, ಶರಬತ್‌ಗಳಿಗೆ ಜನ ಮಾರು ಹೋಗುತ್ತಿದ್ದಾರೆ. ಅದರಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಫಿಲ್ಟರ್‌ ನೀರು ಮಾರಾಟವಾಗುತ್ತಿದೆ.

ಬಿಸಿಲಿನ ಉಪಟಳಕ್ಕೆ ಮಧ್ಯಮ ವರ್ಗದ ಜನ ಮಣ್ಣಿನ ಮಡಿಕೆ ಮೊರೆ ಹೋಗುವುದು ಅನಿವಾರ್ಯವಾಗಿದೆ. ಹೀಗಾಗಿ ಪಟ್ಟಣದಲ್ಲಿ ನಡೆಯುವ ವಾರದ ಸಂತೆಯಲ್ಲಿ ಹಾಗೂ ಬಸ್‌ ನಿಲ್ದಾಣ ಹತ್ತಿರ ಮಣ್ಣಿನ ಮಡಿಕೆ ಮಾರಾಟಗಾರರ ಹತ್ತಿರ ಚೌಕಾಸಿ ಮಾಡಿ ಖರೀದಿಸುತ್ತಿದ್ದಾರೆ.

ಭೀಮೆಯಲ್ಲಿ ಕಡಿಮೆಯಾಗುತ್ತಿದೆ ನೀರು

ಭೀಮಾನದಿಯಲ್ಲಿ ದಿನ ಕಳೆದಂತೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಬೀತಿ ಎದುರಾಗಿದೆ. ಈಗಾಗಲೇ ಲಕ್ಷ್ಮೀ ಚೌಕ್‌ ಬಡಾವಣೆ ಹೊರತುಪಡಿಸಿ ಬಹುತೇಕ ಎಲ್ಲ ವಾರ್ಡ್‌ಗಳಲ್ಲಿ ಮೂರ್‍ನಾಲ್ಕು ದಿನಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಖಡಕ್‌ ಬಿಸಿಲಿಗೆ ಪಟ್ಟಣದ ಎಲ್ಲ ಬಾವಿ, ಹಳ್ಳ, ಕೊಳ್ಳಗಳು ಬತ್ತಿ ಹೋಗುತ್ತಿವೆ. ಏಪ್ರಿಲ್‌ ತಿಂಗಳ ಪ್ರಾರಂಭದಲ್ಲೇ ಬಿಸಿಲು ಜನರ ನೆಮ್ಮದಿ ಹಾಳುಮಾಡಿರುವಾಗ ಮೇ ತಿಂಗಳಲ್ಲಿ ಇದರ ಪರಿಣಾಮ ಹೇಗಿರಬಹುದು. ಸದಾ ಜನನೀಬಿಡ ಪ್ರದೇಶವಾಗಿರುವ ಬಸ್‌ ನಿಲ್ದಾಣ, ಬಸವೇಶ್ವರ ಸರ್ಕಲ್‌, ಅಖಂಡೇಶ್ವರ ವೃತ್ತಗಳು ಬಿಕೋ ಎನ್ನುತ್ತಿವೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.