ನಾಲ್ವರು ದರೋಡೆಕೋರರ ಬಂಧಿಸಿದ ಪೊಲೀಸರು
Team Udayavani, Jan 18, 2022, 12:36 PM IST
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಪಟ್ಟಣ ಕ್ರಾಸ್ನಿಂದ ಸ್ಟೇಷನ್ ಗಾಣಗಾಪುರದ ರಸ್ತೆ ಮತ್ತು ಆಳಂದ-ಕಲಬುರಗಿ ರಸ್ತೆಯ ಕೇಂದ್ರೀಯ ವಿಶ್ವವಿದ್ಯಾಲಯದ ಸಮೀಪ ವಾಹನ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ.
ತಂಬಾಕವಾ ಗ್ರಾಮದ ಜಗದೀಶ ಜಮಾದಾರ, ಕಮಕನೂರು ಗ್ರಾಮದ ಸೈಬಣ್ಣ (ಗೈಬಣ್ಣ) ತಳವಾರ, ಕಲಬುರಗಿಯ ಸಮತಾ ಕಾಲೋನಿಯ ಗಣೇಶ ಅಲಿಯಾಸ್ ಗಣುಸ್ವಾಮಿ ಹಿರೇಮಠ ಹಾಗೂ ಖಜೂರಿ ಗ್ರಾಮದ ಸಚಿನ್ ಬಂಗರಗಿ ಎಂಬುವವರೇ ಬಂಧಿತ ಆರೋಪಿಗಳು.
ಎರಡೂ ರಸ್ತೆಗಳಲ್ಲಿ ವಾಹನ ಸವಾರರ ದರೋಡೆ ಸಂಬಂಧ ನಿಂಬರ್ಗಾ ಮತ್ತು ನರೋಣಾ ಪೊಲೀಸ್ ಠಾಣೆಯ ಪ್ರತ್ಯೇಕ ಕೇಸ್ ದಾಖಲಾಗಿತ್ತು. ಈ ಸಂಬಂಧ ಎಸ್ಪಿ ಇಶಾ ಪಂತ್ ಹಾಗೂ ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರವೀಂದ್ರ ಶಿರೂರ ನೇತೃತ್ವದಲ್ಲಿ ಸಿಪಿಐ ಮಂಜುನಾಥ ಮತ್ತು ಪಿಎಸ್ಐಗಳಾದ ವಾತ್ಸಲ್ಯ ಹಾಗೂ ಮಹೆಬೂಬ್ ಹಾಗೂ ಸಿಬ್ಬಂದಿ ಪತ್ತೆ ಕಾರ್ಯ ನಡೆಸಿ, ನಾಲ್ವರು ಬಂಧಿಸಿದ್ದಾರೆ.
ಬಂಧಿತರಿಂದ 10 ಗ್ರಾಂ ಚಿನ್ನಾಭರಣ, 2 ಸಾವಿರ ರೂ. ನಗದು, ಮೂರು ಬೈಕ್ಗಳು ಹಾಗೂ ಮೊಬೈಲ್ ಸೇರಿ 2 ಲಕ್ಷ ರೂ.ಗಳ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್