ಪೊಲೀಸರ ದೌರ್ಜನ್ಯಕ್ಕೆ ಕೋಲಿ ಸಮಾಜ ಖಂಡನೆ


Team Udayavani, Oct 30, 2021, 9:35 AM IST

2koli

ಚಿತ್ತಾಪುರ: ಕಲಬುರಗಿ ಚೌಕ್‌ ಠಾಣೆ ಪಿಎಸ್‌ಐ ಎಸ್‌.ಆರ್‌. ನಾಯಕ ಹಾಗೂ ಆರು ಜನ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಸಾಬಣ್ಣ ಡಿಗ್ಗಿ ನೇತೃತ್ವದಲ್ಲಿ ಕಾರ್ಯಕರ್ತರು ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಅಫಜಲಪುರ ತಾಲೂಕಿನ ಕೋಲಿ ಸಮಾಜದ ದುಂಡಪ್ಪ ಸಿದ್ರಾಮ ಜಮಾದಾರ ಅವರು ಸೇಡಂನಿಂದ ಕಲಬುರಗಿ ಟೋಲ್‌ಗೇಟ್‌ ಹತ್ತಿರ ಬರುವಾಗ ಕಲಬುರಗಿ ಚೌಕಿ ಠಾಣೆಯ ಪಿಎಸ್‌ಐ ಮತ್ತು ಆರು ಜನ ಸಿಬ್ಬಂದಿ ವಿಚಾರಣೆ ನೆಪದಲ್ಲಿ ತಲೆಗೆ ಬಂದೂಕು ಹಿಡಿದು, ಠಾಣೆಗೆ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಚಾರಣೆ ನಂತರ ಅವರ ಸಹೋದರ ಲಚ್ಚಪ್ಪ ಜಮಾದಾರ್‌ ಅವರನ್ನು ಕರೆಯಿಸಿ ಬಿಟ್ಟು ಕಳಿಸಿದ್ದಾರೆ. ದುಂಡಪ್ಪ ಜಮಾದಾರ ಹೋಟೆಲ್‌ ನಡೆಸಿಕೊಂಡು ಉಪಜೀವನ ಮಾಡುತ್ತಿದ್ದಾರೆ. ಇಂತಹವರನ್ನು ವಿನಾ ಕಾರಣ ಹೊಡೆದಿರುವ ಪಿಎಸ್‌ಐ ಮತ್ತು ಆರು ಜನ ಸಿಬ್ಬಂದಿ ವಿರುದ್ಧ ಕೂಡಲೇ ಎಫ್‌.ಐ.ಆರ್‌ ದಾಖಲಿಸಿ, ಉನ್ನತ ಮಟ್ಟದ ತನಿಖೆ ಮಾಡಬೇಕು. ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಪಕ್ಕದ ಮನೆಯ ಮಹಿಳೆಯ ಟೀಕೆಗೆ ಕುಪಿತನಾಗಿ ಆಕೆಯ ಮನೆಯವರಿಗೆಲ್ಲಾ ಇರಿದ! ಇಬ್ಬರು ಸಾವು

ಕೋಲಿ ಸಮಾಜದ ಗೌರವ ಅಧ್ಯಕ್ಷ ಅಣ್ಣರಾಯ ಸಣ್ಣೂರಕರ್‌, ಉಪಾಧ್ಯಕ್ಷ ಸುರೇಶ ಬೇನಕನಳ್ಳಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಅಲ್ಲೂರಕರ್‌, ಸಹ ಕಾರ್ಯದರ್ಶಿ ಸೂರ್ಯಕಾಂತ ಕೊಂಕನಳ್ಳಿ, ಭೀಮಣ್ಣ ಸೀಬಾ, ನಾಗೇಶ ಲಬಕಾ, ಮರೇಪ್ಪ ಅಳಬೋ, ಶರಶರಣ, ಮಹೇಶ ಸಾತನೂರ, ಅಶೋಕ ಕಾಸ್ಲೆ, ಮಹಾದೇವ ಭೀಮನಳ್ಳಿ, ಚನ್ನಪ್ಪ ಭೀಮನಳ್ಳಿ, ಶಂಕ್ರಪ್ಪ ಭೀಮನಳ್ಳಿ, ಮಲ್ಲಿಕಾರ್ಜುನ, ಬಸವರಾಜ, ಅಯ್ಯಪ್ಪ, ಶರಣಪ್ಪ, ನಾಗಪ್ಪ, ದೇವಿಂದ್ರಪ್ಪ ಹಲಕಟ್ಟಿ, ರಾಜಶೇಖರ ಬಿ.ಎಂ, ಭಾಗಣ್ಣ ಹೋಳಿಕಟ್ಟಿ, ತುಳಜಪ್ಪ ಹೊಸ್ಸುರಕರ್‌, ಸಂತೋಷ ಕೊಂಕನಳ್ಳಿ, ಮಲ್ಲಿಕಾರ್ಜುನ ಮುಡಬೂಳಕರ್‌, ಮೈಲಾರಿ ಡಿಗ್ಗಿ, ಮಲ್ಲಿಕಾರ್ಜುನ ಮಳಖೇಡ, ಮೌನಗಂಗಾಧರ ಡಿಗ್ಗಿ, ಮಹಾದೇವ ಕೋನಗೇರಿ, ರಾಜಶೇಖರ ಹೋಳಿಹಟ್ಟಿ ಈ ಸಂದರ್ಭದಲ್ಲಿ ಇದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.