ಸಿದ್ದು ಬೆನ್ನು ಬಿದ್ದ ಕಾಂಗ್ರೆಸ್‌ ಪಡೆ


Team Udayavani, Mar 10, 2021, 8:19 PM IST

political article

ಸಿಂಧನೂರು: ಕುರುಬ ಸಮುದಾಯದ ಪ್ರಭಾವಿ ಮುಖಂಡ ಕೆ. ವಿರೂಪಾಕ್ಷಪ್ಪ ಬಿಜೆಪಿ ಸೇರುತ್ತಿದ್ದಂತೆ ಕಾಂಗ್ರೆಸ್‌ ಪಕ್ಷಕ್ಕೆ ಆಗಲಿರುವ ಹಾನಿ ತಪ್ಪಿಸಲು ಮಸ್ಕಿ ಉಪ ಚುನಾವಣೆ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಪ್ರತಿಯಾಗಿ ಕಾಂಗ್ರೆಸ್‌ ಪಾಳಯದಲ್ಲೂ ಲೆಕ್ಕಾಚಾರ ಗರಿಗೆದರಿವೆ.

ಉಪ ಚುನಾವಣೆ ಘೋಷಣೆಯಾದರೆ ಬರೋಬ್ಬರಿ ಒಂದು ವಾರ ಕಾಲ ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸ್ಥಳೀಯವಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ಚುರುಕು ಪಡೆದಿವೆ. ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಅವರ ರಾಜಕೀಯ ತಂತ್ರಗಳಿಗೆ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್‌ನಲ್ಲಿ ರಾಜಕೀಯ ತಾಲೀಮು ಆರಂಭಗೊಂಡಿದೆ. ಪ್ರಬಲ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಉಭಯ ಪಕ್ಷಗಳು ಆಯಾ ಸಮುದಾಯದ ಮುಖಂಡರ ಬೆನ್ನು ಬಿದ್ದಿವೆ.

ಹೊಸ ಲೆಕ್ಕಾಚಾರ?: ಈವರೆಗೂ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಕಾಂಗ್ರೆಸ್‌ನಲ್ಲಿದ್ದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಅವರನ್ನು ಬಳಸಿಕೊಳ್ಳುವ ಕುರಿತು ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಆರ್‌. ಬಸನಗೌಡ ಪ್ರಯತ್ನದಲ್ಲಿದ್ದರು. ರಾಯಚೂರು ಜಿಲ್ಲೆಯ ನಾನಾ ಕ್ಷೇತ್ರದ ನಾಯಕರು ಕೈ ಜೋಡಿಸಿದ್ದರು. ಇದೀಗ ಲೆಕ್ಕಾಚಾರವೇ ಉಲ್ಟಾ ಆದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ರಾಜಕೀಯ ತಂತ್ರ ಬದಲಾಗಿವೆ. ಈವರೆಗೆ ಮಾಜಿ ಸಂಸದ ಹಾಗೂ ಮಾಜಿ ಶಾಸಕ ಬಾದರ್ಲಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದ ವೇದಿಕೆಯಲ್ಲಿ ಇದೀಗ ಕೆ. ಕರಿಯಪ್ಪ ಅವರಸ್ಥಾನ ಭರ್ತಿಯಾಗತೊಡಗಿದೆ. ಲಿಂಗಾಯತ ಹಾಗೂ ಕುರುಬ ಸಮುದಾಯದ ಮತ  ಸೆಳೆಯಲು ಹೊಸ ಜೋಡಿ ಸನ್ನದ್ಧವಾಗಿದ್ದು, ಆ ಮೂಲಕ ಬಿಜೆಪಿಗೆ ತಿರುಗೇಟು ನೀಡುವ ತಂತ್ರ ಹೆಣೆಯಲಾಗುತ್ತಿದೆ.

ಸಿದ್ದರಾಮಯ್ಯ ವಾಸ್ತವ್ಯಕ್ಕೆ ಸಿದ್ಧತೆ: ಆಪರೇಷನ್‌ ಬಿಜೆಪಿ ವಿರುದ್ಧ ಸತತ ಹೋರಾಟ ನಡೆಸಿ ಅವರ ವಿರುದ್ಧ ಹರಿಹಾಯ್ದ ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಮರ್ಥವಾಗಿ ಬಳಸಿಕೊಳ್ಳಲು ಮಸ್ಕಿ ಅಖಾಡದಲ್ಲಿ ಸಿದ್ಧತೆ ನಡೆದಿವೆ. ಉಪ ಚುನಾವಣೆ ಘೋಷಣೆಯಾದರೆ ಒಂದು ವಾರದ ಕಾಲ ಕ್ಷೇತ್ರದಲ್ಲಿ ಬಿಡಾರ ಹೂಡಿ ಪ್ರಚಾರ ನಡೆಸಲು ಅನುಕೂಲವಾಗುವಂತೆ ಮಾಡಲು ಪ್ರಯತ್ನ ನಡೆದಿವೆ. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ. ಕರಿಯಪ್ಪ ಅವರೊಂದಿಗೆ ಈ ಕುರಿತು ಮಾತುಕತೆ ನಡೆದಿದ್ದು, ಅವರು ಈಗಾಗಲೇ ಮಸ್ಕಿ ಅಖಾಡದಲ್ಲಿ ಬಲಾಡ್ಯ ಪ್ರಚಾರಕ್ಕೆ ಭೂಮಿಕೆ ರೂಪಿಸುತ್ತಿದ್ದಾರೆಂಬ ಮಾಹಿತಿ ಹೊರಬಿದ್ದಿದೆ. ಇದಕ್ಕೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಸಾಥ್‌ ನೀಡಿದ್ದು, ಕಳೆದ ಕೆಲ ದಿನಗಳಿಂದ ಒಂದೇ ಕಾರಿನಲ್ಲಿ ಅವರ ಪ್ರಚಾರಾರ್ಥ ಪ್ರಯಾಣ ಸಾಗಿರುವುದು ಇದಕ್ಕೆ ಪುಷ್ಟಿ ನೀಡಿದೆ.

ಬಸನಗೌಡಗೆ ಭರ್ಜರಿ ಕರೆ: ಕಳೆದ 15 ದಿನಗಳ ಹಿಂದೆ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿ ಆರ್‌. ಬಸನಗೌಡ ತುರುವಿಹಾಳ ಜಿಲ್ಲೆಯ ಕಾಂಗ್ರೆಸ್‌ ಮುಖಂಡರ ಬೆನ್ನು ಬಿದ್ದು ಪ್ರಚಾರಕ್ಕೆ ಆಹ್ವಾನಿಸ ತೊಡಗಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ನಾಯಕರೇ ಪ್ರಚಾರಕ್ಕೆ ಬರುವುದಾಗಿ ಅವರಿಗೆ ಕರೆ ಮಾಡಲಾರಂಭಿಸಿದ್ದಾರೆ. ನಾಯಕರ ಪ್ರಚಾರ ಕಾರ್ಯಕ್ರಮಗಳಿಗೆ ಸಮಯ ಹೊಂದಾಣಿಕೆ ಮಾಡಿಕೊಳ್ಳಲು ಬಸನಗೌಡರೇ ಹರಸಾಹಸ ಪಡುವಂತಾಗಿದೆ. ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಎದ್ದಿರುವ ಈ ಉತ್ಸಾಹ ಎಷ್ಟು ದಿನಗಳ ಕಾಲ ಮುಂದುವರಿಯಲಿದೆ ಎಂಬ ಪ್ರಶ್ನೆಗಳು ಕೇಳಿಬರತೊಡಗಿವೆ. ಶತಾಯ ಗತಾಯ ಬೈ ಎಲೆಕ್ಷನ್‌ಗಳಲ್ಲಿ ಕಳೆದುಕೊಂಡ ಸ್ಥಾನವನ್ನು ಉಪ ಚುನಾವಣೆಯಲ್ಲಿ ಗಳಿಸಬೇಕೆಂಬ ಜಿದ್ದಿಗೆ ಇತ್ತೀಚಿನ ರಾಜಕೀಯ ಬೆಳವಣಿಗೆ ಪೂರಕವಾಗಿವೆ.

ಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಅಖಾಡದಲ್ಲಿ ಬಲಾಬಲದ ಲೆಕ್ಕಾಚಾರಗಳು ಚುರುಕು ಪಡೆದಿರುವುದಕ್ಕೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಸೇರ್ಪಡೆ ಕಾರ್ಯಕ್ರಮ, ಅಲ್ಲಿನ ಭಾಷಣಗಳು ಮಸ್ಕಿ ಹಾಗೂ ಸಿಂಧನೂರು ಕ್ಷೇತ್ರದಲ್ಲಿ ಚರ್ಚೆಯ ಧೂಳೆಬ್ಬಿಸಿವೆ.

ಯಮನಪ್ಪ ಪವಾರ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.