ದಿಕ್ಕು ತಪ್ಪಿಸುತ್ತಿದೆ ಅಧಿವೇಶನ


Team Udayavani, Dec 20, 2021, 12:42 PM IST

13session

ಆಳಂದ: ಸಂಕಷ್ಟದಲ್ಲಿರುವ ನಾಡಿನ ಜನರು, ರೈತರು, ಕಾರ್ಮಿಕರ ಅಭಿವೃದ್ಧಿ ಕುರಿತು ಚರ್ಚಿಸಿ ನೀತಿ ನಿರೂಪಣೆ ಜಾರಿಗೆ ತರದೇ ಕಾಮಗಾರಿಗಳ ಪರ್ಸಂಟೇಜ್‌ ಹಂಚಿಕೊಂಡ ಬಗ್ಗೆ ಸದನದಲ್ಲಿ ಶಾಸಕರು, ಸಚಿವರು ಚರ್ಚಿಸುವ ಮೂಲಕ ಜನರ ದಿಕ್ಕು ತಪ್ಪಿಸಲು ಕಾಲಹರಣ ಮಾಡುತ್ತಿದ್ದಾರೆ ಎಂದು ಸಿಪಿಐ ರಾಜ್ಯ ಕಾರ್ಯಕಾರಣಿ ಮಂಡಳಿ ಸದಸ್ಯ ಹಾಗೂ ಜಿಲ್ಲಾ ಕಿಸಾನ ಸಭಾ ಅಧ್ಯಕ್ಷ ಮೌಲಾ ಮುಲ್ಲಾ ಕಿಡಿಕಾರಿದ್ದಾರೆ.

ತಾಪಂ ಕಚೇರಿ ಬಳಿ ಕಾರ್ಮಿಕರ ಬೇಡಿಕೆ ಮತ್ತು ಪಂಪಸೆಟ್‌ಗಳಿಗೆ ನಿರಂತರ ವಿದ್ಯುತ್‌ ಒದಗಿಸಲು ಒತ್ತಾಯಿಸಿ ಅಖೀಲ ಭಾರತ ಕಿಸಾನಸಭಾ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ನಡುವೆಯೂ ಬೆಳಗಾವಿಗೆ ನಿಯೋಗದೊಂದಿಗೆ ತೆರಳಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕರು, ಸಚಿವರಿಗೆ ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿ ಹಿಂದುರುಗಿದ ಬಳಿಕ ರವಿವಾರ ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾಮಗಾರಿಗೆ ಶಾಸಕರುಗಳು ಶೇ. 40ರಷ್ಟು ಪ್ರತಿಶತ ಪರ್ಸಂಟೇಜ್‌ ಅಷ್ಟೇ ಅಲ್ಲ. ಈ ವಿಷಯಕ್ಕೆ ವಿರೋಧಿಸಲು ಯಾರಿಗೂ ನೈತಿಕತೆಯಿಲ್ಲ. ಶೇ. 10 ಆಗಿರಲಿ ಅಥವಾ ಶೇ. 40ರಷ್ಟಿರಲಿ ಪರ್ಸಂಟೇಜ್‌ ವಿಷಯದಲ್ಲಿ ಕಳ್ಳತನವೇ ಆಗಿದೆ. ರಾಜ್ಯದ ಜನರ ಚಿಂತೆಯಿಲ್ಲದ ಶಾಸನ ಸಭೆ ಇದಾಗಿದೆ ಎಂದು ಆರೋಪಿಸಿದರು.

ಪಂಪಸೆಟ್‌ಗಳಿಗೆ ಸಮರ್ಪಕ ಹಾಗೂ ಸಕಾಲಕ್ಕೆ ವಿದ್ಯುತ್‌ ಪೂರೈಕೆ, ಉದ್ಯೋಗ ಖಾತ್ರಿ ಸಮಪರ್ಕ ಅನುಷ್ಠಾನ, ಗ್ರಾಪಂಗಳಲ್ಲಾದ ಅವ್ಯವಹಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವ ಬೇಡಿಕೆಯೊಂದಿಗೆ ತಾಪಂ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ನಮ್ಮ ಬೇಡಿಕೆಗಳು ಸದನದಲ್ಲಿ ಚರ್ಚೆಯಾಗಲಿ ಎಂದು ಬೆಳಗಾವಿಯಲ್ಲಿ ಅಧಿವೇಶನ ಜಾಗಕ್ಕೆ ತರಳಿ 50ಕ್ಕೂ ಹೆಚ್ಚು ಶಾಸಕರಿಗೆ ಮನವಿ ಸಲ್ಲಿಸಿ, ಮನವರಿಕೆ ಮಾಡಿ ಹಿಂದಿರುಗಿದ್ದೇವೆ. ಆದರೂ ಬೇಡಿಕೆ ಈಡೇರುವ ವರೆಗೆ ಧರಣಿ ಹಿಂದಕ್ಕೆ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಪಂಪಸೆಟ್‌ಗಳಿಗೆ ವಿದ್ಯುತ್‌ ಬೇಡಿಕೆ ಪೂರೈಸುತ್ತಿಲ್ಲ. ರೈತರು ತಪ್ಪು ಮಾಡುವಂತ ಅನಿವಾರ್ಯತೆ ಸೃಷ್ಟಿಸಿ ದಂಡ ವಿಧಿಸುವುದು ಸರಿಯಲ್ಲ. ಟ್ರಾನ್ಸಫಾರ್ಂಗಳು ಸುಟ್ಟ ಮೇಲೆ ಅಳವಡಿಸುವಂತೆ ಶಾಸಕರುಗಳು ಅಧಿಕಾರಿಗಳಿಗೆ ಗದರಿಸುತ್ತಾರೆ. ಆದರೆ ಹೆಚ್ಚಿನ ಒತ್ತಡ ಸಹಿಸದೇ ಪದೇ ಪದೇ ಹಾಳಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುತ್ತಿಲ್ಲ. ಸದನದಲ್ಲಿ ಈ ಕುರಿತು ಪ್ರಸ್ತಾಪಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ಶಾಸಕ ಬಂಡೆಪ್ಪ ಕಾಂಶೆಪೂರೆ, ಕಾಂಗ್ರೆಸ್‌ನ ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ಡಾ| ಅಜಯಸಿಂಗ್‌, ಎಂ.ವೈ. ಪಾಟೀಲ, ಬಿಜೆಪಿಯ ಶಾಸಕ ಸುಭಾಷ ಗುತ್ತೇದಾರ, ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ದತ್ತಾತ್ರೆಯ ಪಾಟೀಲ ಸೇರಿದಂತೆ ರಾಜ್ಯದ ವಿವಿಧ ಕ್ಷೇತ್ರಗಳ 50ಕ್ಕೂ ಹೆಚ್ಚು ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಈ ಪೈಕಿ ಶಶೀಲ ಜಿ. ನಮೋಶಿ ಅವರು ಶೀಘ್ರವೇ ರೈತರ ಸಂಘಟನೆಗಳನ್ನು ಒಳಗೊಂಡು ಜೆಸ್ಕಾಂ ಅಧಿಕಾರಿಗಳ ಸಭೆ ಕರೆದು ಮುಂದಿನ ತೀರ್ಮಾನ ತೆಗೆದುಕೊಳ್ಳೋಣ ಎಂದಿದ್ದಾರೆ. ಇನ್ನುಳಿದವರಿಗೆ ರೈತರ ಸಮಸ್ಯೆ ಕೇಳಲು ಪುರಸೊತ್ತು ಇರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಿಸಾನಸಭಾ ಕಾರ್ಯಾಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ, ತಂಜುಮೆ ಇನ್ಸಾಫ್‌ನ ಮುಖಂಡ ದಸ್ತಗೀರ ಭೂಸನೂರ, ರೈತ ಮೈನೋದ್ದೀನ್‌ ಜವಳಿ ಇತರರು ನಿಯೋಗದಲ್ಲಿದ್ದರು. ಧರಣಿಯಲ್ಲಿ ಕಿಸಾನಸಭೆ ತಾಲೂಕು ಅಧ್ಯಕ್ಷ ಚಂದ್ರಕಾಂತ ಖೋಬ್ರೆ ತಂಜುಮೆ ಇನ್ಸಾಫ್‌ ಸಂಚಾಲಕ ಖಲೀಲ ಅನ್ಸಾರಿ, ಫಕ್ರೋದ್ದೀನ್‌ ಗೊಳಾ, ದಲಿತ ಸೇನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ ಮತ್ತಿತರರು ಪಾಲ್ಗೊಂಡಿದ್ದರು. ತಾಪಂ ಎದುರು ನಡೆದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 10ನೇ ದಿನಕ್ಕೆ ಮುಂದುವರಿದಿದೆ.

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.