ಪ್ರಾಯೋಗಿಕ ಬೋಧನೆ ಪರಿಣಾಮಕಾರಿ
Team Udayavani, Jan 24, 2022, 12:31 PM IST
ಜೇವರ್ಗಿ: ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಸೈದ್ಧಾಂತಿಕವಾಗಿ ಬೋಧಿಸಿದರೆ ಸಾಲದು, ಪ್ರಾಯೋಗಿಕ ಜ್ಞಾನವೂ ಅವಶ್ಯಕವಾಗಿದೆ ಎಂದು ಪ್ರಾಚಾರ್ಯ ಮೊಹಮ್ಮದ್ ಅಲ್ಲಾವುದ್ದೀನ್ ಸಾಗರ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿಯಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಭೌತಶಾಸ್ತ್ರ ವಿಷಯದ ಪ್ರಾಯೋಗಿಕ ತರಗತಿಗನ್ನು ವೀಕ್ಷಿಸಿ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿಜ್ಞಾನ ಕ್ಷೇತ್ರದಲ್ಲಿ ಪ್ರಯೋಗಾಲಯಗಳು ಮಹತ್ವದ ಪಾತ್ರ ವಹಿಸುತ್ತವೆ. ತರಗತಿಯಲ್ಲಿ ಅಧ್ಯಯನ ಮಾಡಿದ ವಿಷಯವನ್ನು ಪ್ರಾಯೋಗಿಕವಾಗಿ ಒಳಪಡಿಸಿ ಮೌಲ್ಯಮಾಪನ ಮಾಡಲಾಗುತ್ತದೆ. ಪ್ರಯೋಗಾಲಯಗಳು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ಸೃಜನಶೀಲತೆ, ಕೌಶಲ್ಯ ಬೆಳೆಸುತ್ತವೆ. ವಿಷಯದ ಪರಿಕಲ್ಪನೆಯನ್ನು ಸರಳವಾಗಿ ಅರ್ಥ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಭೌತಶಾಸ್ತ್ರ ಉಪನ್ಯಾಸಕ ಶಂಕ್ರೆಪ್ಪ ಹೊಸದೊಡ್ಡಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಪ್ರಥಮ ದರ್ಜೆ ಸಹಾಯಕ ನೇಸರ ಎಂ. ಬೀಳಗಿ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?