“ಎತ್ತಪೋತ’ ಬಳಿ ಸೌಲಭ್ಯ ಕಲ್ಪಿಸಲು ಆದ್ಯತೆ

ಪ್ರವಾಸೋದ್ಯಮ ಇಲಾಖೆಯಿಂದ ಆಗಿರುವ ಅಭಿವೃದ್ಧಿ ಕೆಲಸಗಳು ನಮ್ಮಲ್ಲಿಯೂ ಆಗಬೇಕು

Team Udayavani, Apr 6, 2021, 6:47 PM IST

Pravasa

ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಇರುವ ಎತ್ತಪೋತ ಜಲಧಾರೆ ಹತ್ತಿರ ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸಿಕೊಡುವುದಕ್ಕಾಗಿ ಪ್ರವಾಸೋದ್ಯಮ ಇಲಾಖೆಯಿಂದ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರವಾಸೋದ್ಯಮ ಪರಿಸರ
ಮತ್ತು ಜೀವಶಾಸ್ತ್ರ ಸಚಿವ ಸಿ.ಪಿ. ಯೋಗೇಶ್ವರ ಭರವಸೆ ನೀಡಿದರು.

ಎತ್ತಪೋತ ಜಲಧಾರೆ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಬಗ್ಗೆ ಉದಾಸೀನ ಮಾಡಲಾಗುತ್ತಿದೆ ಎಂಬ ಕೂಗು ಇದೆ.

ಅದನ್ನು ಹೋಗಲಾಡಿಸುವುದಕ್ಕಾಗಿ ಹಿಂದುಳಿದ ಪ್ರದೇಶದಲ್ಲಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆಯಿಂದ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೆಚ್ಚು ಅರಣ್ಯಪ್ರದೇಶ ಹೊಂದಿರುವ ಕುಂಚಾವರಂ ಅರಣ್ಯವು ನೈಸರ್ಗಿಕವಾಗಿರುವ ಸುಂದರ ಸೊಬಗನ್ನು ಹೊಂದಿರುವ ಪ್ರದೇಶವಾಗಿದೆ. ಇಲ್ಲಿಗೆ ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸಿ ತಾಣ ಎತ್ತಪೋತ ಸ್ಥಳದಲ್ಲಿ ಮೂಲ ಸೌಲಭ್ಯಗಳಾದ ರಸ್ತೆ, ಶೌಚಾಲಯ, ಕುಡಿಯುವ ನೀರು, ಯಾತ್ರಿ ನಿವಾಸ ನಿರ್ಮಿಸಿದರೆ ಪ್ರವಾಸಿಗರು ತಮ್ಮ ಕುಟುಂಬ ಸಮೇತ ಆಗಮಿಸಿ ಮಳೆಗಾಲದಲ್ಲಿ ಹರಿಯುವ ಜಲಧಾರೆಯನ್ನು ನೋಡಿ ಆನಂದಿಸಬಹುದಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅರಣ್ಯಪ್ರದೇಶದಲ್ಲಿ ಯಾವುದೇ ಪರಿಸರ ಹಾನಿ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಈ ಭಾಗದಲ್ಲಿ ಇರುವ ಪ್ರವಾಸಿ ತಾಣಗಳು ಸಾಕಷ್ಟು ನಿರ್ಲಕ್ಷತನಕ್ಕೆ ಒಳಗಾಗಿವೆ. ಬಿಜೆಪಿ ಸರಕಾರದಲ್ಲಿ ಹಣದ ಕೊರತೆ ಏನು ಇಲ್ಲ. ಎತ್ತಪೋತ ಜಲಪಾತ
ಬಳಿ ಈಗಾಗಲೇ ಮೂಲ ಸೌಕರ್ಯಗಳ ಬಗ್ಗೆ ಸಮೀಕ್ಷೆ ನಡೆಸಿ ಕೆಲಸಗಳನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ  ಸೂಚಿಸುತ್ತೇನೆ. ಇನ್ನೆರಡು ತಿಂಗಳಲ್ಲಿ ಮತ್ತೆ ಚಿಂಚೋಳಿ ತಾಲೂಕಿನಲ್ಲಿ ಪ್ರವಾಸ ಮಾಡಿ ನಾನೇ ಖುದ್ದು ಮೂಲ ಸೌಕರ್ಯಗಳನ್ನು ಉದ್ಘಾಟಿಸುತ್ತೇನೆ.

ಚಂದ್ರಂಪಳ್ಳಿಯ ಪ್ರವಾಸಿ ತಾಣದಲ್ಲಿ ಹೆಲಿಪ್ಯಾಡ್‌ ನಿರ್ಮಿಸಿದರೆ ಕಲಬುರಗಿ ಬಂದ ಪ್ರವಾಸಿಗರು ನೇರವಾಗಿ ಇಲ್ಲಿಗೆ ಬಂದು ಹೋಗಲು ಅನುಕೂಲವಾಗಲಿದೆ ಎಂದು ಹೇಳಿದರು. ಸಂಸದ ಡಾ| ಉಮೇಶ ಜಾಧವ್‌ ಮಾತನಾಡಿ, ಚಿಂಚೋಳಿ ತಾಲೂಕಿನಲ್ಲಿ ಪ್ರವಾಸಿ ತಾಣಗಳಿದ್ದರೂ ಅವುಗಳ ನಿರ್ಲಕ್ಷಕ್ಕೆ ಒಳಗಾಗಿವೆ
ಎಂದು ಲೋಕಸಭೆಯಲ್ಲಿ ಧ್ವನಿ ಎತ್ತಿದ್ದೇನೆ. ಭೌಗೋಳಿಕವಾಗಿ ಒಳ್ಳೆಯ ಸ್ಥಳ ಎತ್ತಪೋತ, ಗೊಟ್ಟಂಗೊಟ್ಟ ಬಕ್ಕಪ್ರಭು ದೇವಸ್ಥಾನ, ಚಂದ್ರಂಪಳ್ಳಿ ಪ್ರವಾಸಿ ತಾಣಗಳಾಗಿವೆ. ಮೈಸೂರು ಭಾಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಆಗಿರುವ ಅಭಿವೃದ್ಧಿ ಕೆಲಸಗಳು ನಮ್ಮಲ್ಲಿಯೂ ಆಗಬೇಕು
ಎಂದು ಸಚಿವರ ಗಮನಕ್ಕೆ ತಂದರು. ಶಾಸಕ ಡಾ| ಅವಿನಾಶ ಜಾಧವ ಮಾತನಾಡಿದರು.

ಜಿಪಂ ಸದಸ್ಯ ಗೌತಮ್‌ ಪಾಟೀಲ, ಅಜೀತ ಪಾಟೀಲ, ಲಕ್ಷ್ಮಣ ಆವಂಟಿ, ಸಂತೊಷ ಗಡಂತಿ, ವಿಜಯಕುಮಾರ ರಾಠೊಡ್‌, ಭೀಮಶೆಟ್ಟಿ ಮುರುಡಾ, ಅಲ್ಲಮಪ್ರಭು
ಹುಲಿ, ಗಿರಿರಾಜ ನಾಟೀಕಾರ, ಪ್ರೇಮಸಿಂಗ ಜಾಧವ್‌, ವನ್ಯಜೀವಿಧಾಮ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ, ಎಸಿಎಫ್‌ ಬಾಬುರಾವ ಪಾಟೀಲ, ಶ್ರೀಮಂತ ಕಟ್ಟಿಮನಿ, ಅರುಣ ಪವಾರ, ಜಗದೀಶಸಿಂಗ ಠಾಕೂರ, ಶಾಂತುರೆಡ್ಡಿ, ಕಿರಣರೆಡ್ಡಿ ಮಿರಿಯಾಣ, ಶೈಲೇಶ ಹುಲಿ, ಸತೀಶರೆಡ್ಡಿ ತಾಜಲಾಪುರ ಇದ್ದರು.

ಸಮ್ಮಿಶ್ರ ಸರಕಾರದಲ್ಲಿ ಚಿಂಚೋಳಿ ಶಾಸಕರಾಗಿದ್ದ ಡಾ| ಉಮೇಶ ಜಾಧವ್‌ ಅವರನ್ನು ಶಾಸಕ ಸ್ಥಾನ ಬಿಡಿಸಿ ಒತ್ತಾಯ ಪೂರ್ವಕವಾಗಿ ಬಿಜೆಪಿಗೆ ಸೇರ್ಪಡೆ
ಮಾಡಿಸಿದ್ದೇನೆ. ಚಿಂಚೋಳಿ ಮತಕ್ಷೇತ್ರದ ಶಾಸಕರನ್ನು ರಾಜೀನಾಮೆ ಕೊಡಿಸಲು ನಾನೇ ಪ್ರಮುಖ ಕಾರಣನಾಗಿದ್ದೇನೆ. ಇದರಲ್ಲಿ ನನ್ನ ಪಾತ್ರ ಪ್ರಮುಖವಾಗಿದೆ. ಬಿಜೆಪಿ ಸರಕಾರದಲ್ಲಿ ನನ್ನ ಪಾತ್ರ ಹಿರಿದಾಗಿದೆ.
ಸಿ.ಪಿ. ಯೋಗೇಶ್ವರ, ಸಚಿವ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.