ಎಂಇಎಸ್‌ ಸಂಘಟನೆ ನಿಷೇಧಿಸಲು ಒತ್ತಾಯ


Team Udayavani, Dec 23, 2021, 12:28 PM IST

16protest

ಚಿತ್ತಾಪುರ: ಬೆಳಗಾವಿ ಜಿಲ್ಲೆಯ ಅನಗೋಳದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ ಎಂಇಎಸ್‌ ಸಂಘಟನೆ ನಿಷೇಧಿಸಬೇಕು ಹಾಗೂ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಸಂಘ ತಾಲೂಕು ಶಾಖೆ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕುರುಬ ಸಮಾಜದ ಮುಖಂಡ ಬಸವರಾಜ ಮದ್ರಿಕಿ ಮಾತನಾಡಿ, ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿ ರಾಜ್ಯದ ಸ್ವಾಭಿಮಾನಿಗಳ ಕಿಚ್ಚು ಹೊತ್ತಿಸಿದಂತಾಗಿದೆ. ಇದಕ್ಕೆ ಆಳುವ ಸರ್ಕಾರಗಳು, ಜನಪ್ರತಿನಿಧಿ ಗಳು ಸಿಡಿದೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರದ ಮಹಾ ಪುರುಷರು, ಸಮಾಜ ಸುಧಾರಕರ ಭಾವಚಿತ್ರಗಳಿಗೆ ಅವಮಾನ ಮಾಡುವ ಹೀನ ಕೃತ್ಯಗಳು ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಇದರಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಿರಿಯ ಮುಖಂಡ ಮಲ್ಕಣ್ಣ ಮುದ್ದಾ ಶಹಾಬಾದ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಇಷ್ಟೆಲ್ಲ ನಡೆಯುತ್ತಿದ್ದರೂ ಅಲ್ಲಿನ ಮುಖಂಡರು ಯಾಕೆ ಮೌನ ವಹಿಸಿದ್ದಾರೆ. ಮತ ಬ್ಯಾಂಕ್‌ಗಾಗಿ ರಾಜಕೀಯ ಒಳ್ಳೆಯದಲ್ಲ ಎಂದು ಹೇಳಿದರು.

ಮುಖಂಡರಾದ ಬಸವರಾಜ ಚಿನ್ನಮಳ್ಳಿ, ಬಸವರಾಜ ಹೊಸ್ಸಳ್ಳಿ, ಸಂತೋಷ ಪೂಜಾರಿ, ಬೋಜರಾಜ ಭಾಗೋಡಿ, ಶಿವಕುಮಾರ ಸುಣಗಾರ ಮಾತನಾಡಿದರು.

ಕುರುಬ ಸಮಾಜದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ ಮೊಗಲಾ, ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ್‌, ಮುಖಂಡರಾದ ಗುಂಡು ಐನಾಪೂರ, ಮಲ್ಲಿಕಾರ್ಜುನ ಪೂಜಾರಿ, ಯಲ್ಲಾಲಿಂಗ ಮುಗುಟಿ, ನಾಗರಾಜ ಪೂಜಾರಿ, ಯಲ್ಲಾಲಿಂಗ್‌ ಇವಣಿ, ಮಲ್ಲಿಕಾರ್ಜುನ ಡಬಿಗೇರಾ, ದೇವಿಂದ್ರ ಅರಣಕಲ್‌, ಹಣಮಂತ ಸಂಕನೂರ, ಕಾಶಿನಾಥ ಇಂಗಳಗಿ, ಬೀರು ಪೂಜಾರಿ, ಭೀಮು ಕೊಲ್ಲೂರ, ದೇವು ನಾಲವಾರ, ಮಲ್ಲು ರಾಜೋಳಾ, ಸುನೀಲ ಅಮ್ಮಗೋಳ, ಮಹೇಶ ಸಾತನೂರ, ಸಿದ್ಧಣ್ಣ ವಚ್ಚಾ, ಮಲ್ಲಿಕಾರ್ಜುನ ತೆಂಗಳಿ ಇತರರು ಇದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.