ಬಯೋ ಡೀಸೆಲ್‌ ಬಳಕೆಗೆ ಆದ್ಯತೆ ಅಗತ್ಯ


Team Udayavani, Aug 13, 2022, 1:29 PM IST

2bio

ಕಲಬುರಗಿ: ಮುಂದಿನ ದಿನಗಳಲ್ಲಿ ಉಂಟಾಗ ಬಹುದಾದ ತೈಲ ಕೊರತೆಗೆ ಪರ್ಯಾಯವಾಗಿ ಬಯೋ ಡಿಸೇಲ್‌ ಬಳಕೆಗೆ ಯುವ ಜನಾಂಗ ಆದ್ಯತೆ ನೀಡಬೇಕು ಎಂದು ಗುವಿವಿ ಕುಲಪತಿ ಪ್ರೊ| ದಯಾನಂದ ಅಗಸರ್‌ ಹೇಳಿದರು.

ಗುವಿವಿ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಅರಣ್ಯ ಇಲಾಖೆ, ಜಿಲ್ಲಾ ಪಂಚಾಯತ್‌, ವಿವಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಳಕೆಯಲ್ಲಿರುವ ಇಂಧನ ಮುಗಿದು ಹೋಗುವ ಸಂಪತ್ತು. ಎಷ್ಟೇ ಜಾಗರೂಕವಾಗಿ ಬಳಕೆ ಮಾಡಿದರೂ ಒಂದಲ್ಲ ಒಂದು ದಿನ ಮುಗಿಯುತ್ತದೆ. ಆದ್ದರಿಂದ ನೈಸರ್ಗಿಕವಾಗಿ ಸಿಗಬಹುದಾದ ಜೈವಿಕ ಇಂಧನದ ಕಡೆಗೆ ನಾವು ಹೋಗಲೇಬೇಕು. ಈ ನಿಟ್ಟಿನಲ್ಲಿ ನಮ್ಮ ಪಯಣವನ್ನು ಈಗಿನಿಂದಲೇ ಆರಂಭಿಸಬೇಕು. ಯುವ ಜನತೆಗೆ ಈ ಕುರಿತು ತಿಳಿವಳಿಕೆ ನೀಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಡಾ| ಗಿರೀಶ ದಿಲೀಪ್‌ ಬದೋಲೆ, ಮುಂದಿನ ದಿನಗಳಲ್ಲಿ ಗುವಿವಿ ಕ್ಯಾಂಪಸ್‌ನಲ್ಲಿ ಕಾಡು ಮರಗಳನ್ನು ಬೆಳೆಸುವ ಮೂಲಕ ಇಲ್ಲಿನ ಪರಿಸರವನ್ನು ಇನ್ನಷ್ಟು ಹಸಿರಾಗಿಸುವ ಮತ್ತು ಜೈವಿಕ ಇಂಧನ ಮೂಲದ ಮರಗಳನ್ನು ಬೆಳೆಸುವ ಯೋಜನೆ ಹಾಕಿಕೊಳ್ಳಲಾಗಿದೆ. ಇದಕ್ಕೆ ಅರಣ್ಯ ಇಲಾಖೆ ಸಾತ್‌ ನೀಡಲಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಕೆಎಸ್‌ಸಿಎಸ್‌ಟಿ ಸಲಹಾ ಸಮಿತಿ ಅಧ್ಯಕ್ಷ ಡಾ| ಎಂ.ಎಸ್‌.ಜೋಗದ್‌ ಮಾತನಾಡಿ, ನಾವು ಭೂಮಿ ಮೇಲೆ ಬಹಳ ದಿನಗಳವರೆಗೆ ಇರಬೇಕಾದರೆ ಪರ್ಯಾಯ ಇಂಧನ ಮೂಲಗಳನ್ನು ಹುಡುಕಬೇಕಿದೆ. ಈ ನಿಟ್ಟಿನಲ್ಲಿ ಗುವಿವಿ ಸೇರಿದಂತೆ ಹಲವೆಡೆಗಳಲ್ಲಿ ಸಂಶೋಧನೆಗಳು ನಡೆಯಬೇಕು. ಪರ್ಯಾಯ ಇಂಧನ ಮೂಲಗಳಲ್ಲಿ ಒಂದಾದ ಎಥೆನಾಲ್‌ ಬಳಗೆಗೆ ಸರ್ಕಾರಗಳು ಮುಂದಡಿ ಇಡುತ್ತಿವೆ. ಪ್ರಮಾಣ ಕಡಿಮೆ ಇದೆ. ಸಕ್ಕರೆ ಕಾರ್ಖಾನೆಗಳು ಹೆಚ್ಚಾಗುತ್ತಿರುವುದು ಇದೇ ಉದ್ದೇಶಕ್ಕೆ ಎಂದು ಹೇಳಿದರು.

ರೈತರಿಗೂ ಜೈವಿಕ ಇಂಧನ ಸಸಿಗಳನ್ನು ಬೆಳೆಸಿ ಎಂದರೆ ಹೇಗೆ? ಎಲ್ಲರೂ ಇದೇ ರೀತಿ ಮಾಡಿದರೆ, ಮುಂದಿನ ದಿನಗಳಲ್ಲಿ ಆಹಾರದ ಸಮಸ್ಯೆ ಉಂಟಾಗಬಹುದು. ಅದಕ್ಕಾಗಿ ಸರ್ಕಾರ ಯೋಜನೆ ರೂಪಿಸಬೇಕು. ರೈತರು ಕಬ್ಬು ಬೆಳೆದಾಗ ಬರುವ ನಿರೀಕ್ಷಿತ ಮತ್ತು ಪಕ್ಕಾ ಆದಾಯದಿಂದ ಇಂತಹ ಇಂಧನ ಮೂಲಗಳನ್ನು ಬೆಳೆದಾಗ ಬಯೋ ಡೀಸೆಲ್‌ ಉತ್ಪಾದನೆ ಸರಾಗವಾಗಿ ಆಗುತ್ತದೆ ಎಂದರು.

ಸಹಾರಾ ಸೇವಾ ಸಂಸ್ಥೆಯ ಮಸ್ತಾನ್‌ ಬಿರಾ ದಾರ್‌ ಮಾತನಾಡಿದರು. ಕುಲಸಚಿವ ಪ್ರೊ| ವಿ.ಟಿ. ಕಾಂಬಳೆ, ಪ್ರಾಚಾರ್ಯ ಜಿ.ಎಂ. ವಿದ್ಯಾಸಾಗರ, ಕುಸನೂರು ಗ್ರಾಪಂ ಅಧ್ಯಕ್ಷೆ ಸಂಗಮ್ಮ ಪಾಟೀಲ ಇನ್ನಿತರರು ಇದ್ದರು.

ಉದ್ಯೋಗ ಖಾತ್ರಿ ಆರಂಭವಾದ ಮೇಲೆ ಜೈವಿಕ ಇಂಧನದ ಮೂಲಗಳಾದ ಬೇವಿನ ಬೀಜ, ಹೊಂಗೆ ಬೀಜ, ಸಂಗ್ರಹ ಮಾಡಿ ಕೊಡುವ ಜನರ ಕೊರತೆ ಎದುರಾಗಿದೆ. ಅವರಿಗೂ ಸಮಸ್ಯೆಗಳಿವೆ. ಅದನ್ನು ಸರ್ಕಾರ ಸರಿ ಮಾಡಬೇಕು. ಈ ರೀತಿಯ ಬೀಜಗಳನ್ನು ಸಂಗ್ರಹ ಮಾಡಿ ತಂದುಕೊಟ್ಟರೆ ನರೇಗಾದಲ್ಲಿ ಕೂಲಿ ಕೊಡುವ ಭರವಸೆ ದೊರೆತಾಗ ಸ್ವಾವಲಂಬನೆ ಸಾಧ್ಯವಾಗುತ್ತದೆ. ಬಯೋ ಡೀಸೆಲ್‌ನ್ನು ನಾವು ಉತ್ಪಾದಿಸಲೇಬೇಕು. ಇಲ್ಲದಿದ್ದರೇ ಮುಂದಿನದ 30-40 ವರ್ಷಗಳಲ್ಲಿ ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತೇವೆ. ಎಂ.ಎಲ್‌.ಭಾವಿಕಟ್ಟಿ , ಉಪ ಅರಣ್ಯ ಸಂರಕ್ಷಣಾಧಿಕಾರಿ

ಗುವಿವಿಯಲ್ಲಿ ಮೊದಲು ಕುಲಪತಿ ಕಾರಿಗೆ, ಕುಲಸಚಿವರ ಕಾರಿಗೆ ಬಯೋ ಡಿಸೇಲ್‌ ಬಳಕೆ ಮಾಡಲಾಗುತ್ತಿತ್ತು. ಈಚೆಗೆ ಕೆಲವು ವರ್ಷಗಳಿಂದ ಗುವಿವಿ ಕ್ಯಾಂಪಸ್‌ ನಲ್ಲಿರುವ ಜೈವಿಕ ಇಂಧನ ಉತ್ಪಾದನಾ ಘಟಕ ಸ್ಥಗಿತವಾಗಿದೆ. ಪುನಃ ಅದನ್ನು ಆರಂಭಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಅರಣ್ಯ ಇಲಾಖೆ ಸಹಕಾರ ಕೋರಲಾಗಿದೆ. ಪ್ರೊ| ದಯಾನಂದ ಅಗಸರ್‌, ಕುಲಪತಿ, ಗುವಿವಿ

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.