ಭಾಗವತ ಪಾರಾಯಣ ತಂದ ಫಜೀತಿ!

ಆಧಾರ ಕಾರ್ಡ್‌ ವಿಳಾಸದ ಆಧಾರದ ಮೇಲೆ ತಾಲೂಕಿನಲ್ಲಿ ಶುಕ್ರವಾರ ಹೊಸದಾಗಿ 45 ಪ್ರಕರಣಗಳು ದಾಖಲಾಗಿವೆ.

Team Udayavani, Apr 17, 2021, 6:15 PM IST

ಭಾಗವತ ಪಾರಾಯಣ ತಂದ ಫಜೀತಿ

ಆಳಂದ: ಗಡಿಭಾಗದ ಆಳಂಗಾ ಗ್ರಾಮದ ಬಡಾವಣೆಯೊಂದರಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂಭತ್ತು ದಿನಗಳ ಕಾಲದ ಭಾಗವತ ಪಾರಾಯಣಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ 15ಕ್ಕೂ ಹೆಚ್ಚು ಜನರು ಒಂಭತ್ತು ದಿನಗಳ ಕಾಲ ತಂಗಿದ್ದರಿಂದ ಕೊರೊನಾ ಸೋಂಕು ಹರಡಿದ್ದು, ಸಹೋದರ ಸಂಬಂಧಿಗಳಿಬ್ಬರು ಮೃತಪಟ್ಟಿದ್ದಾರೆ. ಅಲ್ಲದೇ ಗ್ರಾಮದ ಅನೇಕ ಜನರಿಗೆ ಕೊರೊನಾ ಸೋಂಕು ಹರಡಿದೆ.

ನಾಲ್ಕು ದಿನಗಳ ಹಿಂದೆ ಇದೇ ಬಡಾವಣೆಯ 65 ವರ್ಷದ ವಯೋವೃದ್ಧೆಯೊಬ್ಬರು ಕೊರೊನಾ ಸೋಂಕಿಗೆ ಮೃತಪಟ್ಟ ಬೆನ್ನಲ್ಲೇ ಗುರುವಾರ ಮಾಣಿಕರಾವ್‌ ಕುಲಕರ್ಣಿ (90) ಎನ್ನುವವರು ಬಲಿಯಾಗಿದ್ದಾರೆ. ಮಾಣಿಕರಾವ್‌ ಕುಲಕರ್ಣಿ ಅವರನ್ನು ಉಮರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸುಮಾರು 30 ಮಂದಿಗೆ ಸೋಂಕು ಆವರಿಸಿದ್ದು, ಅವರಿಗೆ ಆಸ್ಪತ್ರೆ, ಮನೆ ಹಾಗೂ ಐಸೋಲೇಷನದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಗ್ರಾಮದಲ್ಲಿ ಆರು ದಿನಗಳಿಂದ ಗ್ರಾಮ ಪಂಚಾಯಿತಿ ಆಡಳಿತ ಸೀಲ್‌ಡೌನ್‌ ಮಾಡಿದ್ದು, ಗ್ರಾಮದಲ್ಲಿ ತುರ್ತು ಚಿಕಿತ್ಸಾ ಘಟಕ ತೆರೆಯುವಂತೆ ತಾಲೂಕು ಆರೋಗ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆರೋಗ್ಯ ಇಲಾಖೆ ಅಂದಾಜಿನಂತೆ ಆಧಾರ ಕಾರ್ಡ್‌ ವಿಳಾಸದ ಆಧಾರದ ಮೇಲೆ ತಾಲೂಕಿನಲ್ಲಿ ಶುಕ್ರವಾರ ಹೊಸದಾಗಿ 45 ಪ್ರಕರಣಗಳು ದಾಖಲಾಗಿವೆ.

ಕೋವಿಡ್‌ ಸೋಂಕು ಹರಡುವ ಭೀತಿಯಿದ್ದರೂ ಹೊರಗಿನವರನ್ನು ಗ್ರಾಮಕ್ಕೆ ಬಿಟ್ಟಿದ್ದೇ ಪ್ರಮಾದವಾಗಿದೆ. ಇದರಿಂದಾಗಿ ಇಡಿ ಗ್ರಾಮವೇ ಪರಿತಪಿಸುವಂತೆ ಆಗಿದೆ. ಈಗಾಗಲೇ ಮೂವರು ಮೃತಪಟ್ಟಿದ್ದಾರೆ. ಅನೇಕ ಗ್ರಾಮಸ್ಥರು ಆಸ್ಪತ್ರೆಗಳಿಗೆ ಎಡತಾಕುತ್ತಿದ್ದಾರೆ. ಸೀಲ್‌ಡೌನ್‌ ವಿಧಿಸಿದ್ದರಿಂದ ಯಾರೂ ಮನೆಯಿಂದ ಹೊರಬರುತ್ತಿಲ್ಲ. ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ. ಆದ್ದರಿಂದ ಗ್ರಾಮದಲ್ಲಿ ತುರ್ತು ಆರೋಗ್ಯ ಚಿಕಿತ್ಸಾ ಘಟಕ ತೆರೆಯಬೇಕು. ಅಲ್ಲದೇ ಮನೆ, ಮನೆಗೆ ಬರುವ ಆರೋಗ್ಯ ಸಿಬ್ಬಂದಿಗೆ 15 ಹಳ್ಳಿಗಳನ್ನು ಹಂಚಲಾಗಿದೆ. ಅವರು ಮತ್ತೂಂದು ಊರಿಗೆ ಹೋಗಿ ಬರುವ ತನಕ ಸೂಕ್ಷ್ಮ ಪರಿಸ್ಥಿತಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮೇಲಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಅಶೋಕ ಕಲಶೆಟ್ಟಿ , ಆಳಂಗ

ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಕೆಲವರು ಎಷ್ಟೇ ಹೇಳಿದರೂ ಮಾಸ್ಕ್ ಧರಿಸುತ್ತಿಲ್ಲ. ಆಳಂಗಾದ ಮನೆಯೊಂದರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಬೀಗರು, ನೆಂಟರು ಲಾತೂರು, ಉಮ್ಮರಗಾದಿಂದ ಬಂದಿದ್ದರು. ಅವರಿಂದ ಸೋಂಕು ಹರಡಿರಬಹುದು. ಸುರಕ್ಷತಾ ಕ್ರಮಕ್ಕಾಗಿ ಗ್ರಾಪಂ ಸೀಲ್‌ಡೌನ್‌ ಕ್ರಮ ಕೈಗೊಂಡಿದೆ. ಆರೋಗ್ಯ ಸಿಬ್ಬಂದಿ ನಿತ್ಯ ಗ್ರಾಮಕ್ಕೆ ಭೇಟಿ ನೀಡಿ, ಶಂಕಿತರ ಮೂಗಿನ ದ್ರವ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಪಾಸಿಟಿವ್‌ ಬಂದವರು ನಮ್ಮಲ್ಲಿ ತಪಾಸಣೆ ಮಾಡಿಸಿಕೊಳ್ಳುತ್ತಿಲ್ಲ. ನೇರವಾಗಿ ಮಹಾರಾಷ್ಟ್ರದ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತಿಲ್ಲ. ಗ್ರಾಮಸ್ಥರು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಇಲಾಖೆಗೆ ಸಂಪರ್ಕಿಸಬೇಕು.
ಡಾ| ಜಿ. ಅಭಯಕುಮಾರ,
ತಾಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.