ಅನುದಾನ ಪೂರ್ಣ ಬಳಸಲು ತೇಲ್ಕೂರ ತಾಕೀತು
Team Udayavani, Feb 18, 2022, 12:40 PM IST
ಸೇಡಂ: ಗ್ರಾಮೀಣ ಭಾಗದ ಅನೇಕ ಗ್ರಾಮಗಳ ರಸ್ತೆಗಳ ಮೇಲೆ ಚರಂಡಿ ನೀರು ಹರಿಯುತ್ತಿದೆ. ಕಂಪ್ಯೂಟರ್ ಆಪರೇಟರ್ಗಳ ಮೇಲೆ ಆರೋಪಗಳು ಕೇಳಿ ಬರುತ್ತಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಅಸಡ್ಡೆಯಿಂದ ಬಜೆಟ್ ವಾಪಸ್ ಹೋಗುತ್ತಿದೆ. ನೈರ್ಮಲ್ಯಕ್ಕೆ ಒತ್ತು ನೀಡಲಾಗುತ್ತಿಲ್ಲ.
ಇವು ಪಟ್ಟಣದ ತಾಪಂ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರ ಅಸಮಾಧಾನಕ್ಕೆ ಕಾರಣವಾದ ವಿಷಯಗಳು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒಗಳು, ನೋಡಲ್ ಅಧಿಕಾರಿಗಳು, ಕಂಪ್ಯೂಟರ್ ಆಪರೇಟರ್ ಗಳು ಭಾಗಿಯಾಗಿದ್ದರು. ಆದರೆ ಬಹುತೇಕರ ನಿಷ್ಕಾಳಜಿ ಬಗ್ಗೆ ಶಾಸಕ ತೇಲ್ಕೂರ ಸಿಡಿಮಿಡಿಗೊಂಡಿದ್ದರು. ಅಲ್ಲದೇ ಕೆಲಹೊತ್ತು ತರಾಟೆ ತೆಗೆದುಕೊಂಡರು. ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
14 ಮತ್ತು 15ನೇ ಹಣಕಾಸು ಯೋಜನೆ ಸದ್ಬಳಕೆಯಾಗುತ್ತಿಲ್ಲ. ಈ ಬಾರಿ 14ನೇ ಹಣಕಾಸು ಯೋಜನೆಯ ಸಂಪೂರ್ಣ ಅನುದಾನ ಬಳಕೆಯಾಗಬೇಕು. ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ದೊರೆಯಬೇಕು. ಏಪ್ರಿಲ್ 1ರ ನಂತರ ಗ್ರಾಮಗಳಿಗೆ ತೆರಳುತ್ತಿದ್ದು, ಅಲ್ಲಿಯ ವರೆಗೆ ಯಾವ ಗ್ರಾಮದ ರಸ್ತೆಯಲ್ಲೂ ಚರಂಡಿ ನೀರು ಹರಿಯದಂತೆ ಎಚ್ಚರವಹಿಸಬೇಕು. ಕೂಡಲೇ ಇಂಗುಗುಂಡಿ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ಮನೆ ಹಂಚಿಕೆಗೆ ಹೆಚ್ಚಿನ ವೇಗ ನೀಡಬೇಕಾಗಿದೆ. ನಿಗದಿತ ಸಮಯದಲ್ಲಿ ಸಬೂಬು ಹೇಳದೇ ಮನೆ ಹಂಚಿಕೆ ಮುಗಿಯಬೇಕು. ವಸತಿ ಯೋಜನೆಯಡಿ 980 ಮನೆಗಳು ತಾಲೂಕಿಗೆ ನೀಡಲಾಗಿದೆ. ಜನರ ಸಮಸ್ಯೆ ಪರಿಹರಿಸಿದಾಗಲೇ ಜನಪ್ರತಿನಿಧಿಗೆ ಬೆಲೆ ಬರಲು ಸಾಧ್ಯ ಎಂದರು. ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ತಾಪಂ ಇಒ ಗುರುನಾಥ ಶೆಟಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ