9ರಂದು ನಿಂಬರಗಾದಲ್ಲಿ ಪ್ರತಿಭಟನೆ
Team Udayavani, Feb 7, 2022, 1:26 PM IST
ಆಳಂದ: ಕಳೆದ ಜ.26ರಂದು ಆಚರಿಸಿದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಆಳಂದ ನ್ಯಾಯಾಧೀಶರು ಸೇರಿದಂತೆ ಕೆಲವೆಡೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ| ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಘಟನೆ ಖಂಡಿಸಿ ನಿಂಬರಗಾದಲ್ಲಿ ಫೆ. 9ರಂದು ಪ್ರತಿಭಟನೆ ನಡೆಯಲಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡ ದತ್ರಾತ್ರೇಯ ಕುಡಕಿ ಹೇಳಿದರು.
ದಲಿತ ಮತ್ತು ಪ್ರಗತಿಪರ ಸಂಘಟಗಳ ಒಕ್ಕೂಟದ ಆಶ್ರಯದಲ್ಲಿ ಗ್ರಾಮದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ರಾಯಚೂರು ನ್ಯಾಯಾಧಿಧೀಶರು ಹಾಗೂ ಆಳಂದ ನ್ಯಾಯಾಧೀಶರು ಹಾಗೂ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಕಡೆಗಣಿಸಿದ್ದಕ್ಕಾಗಿ ಗ್ರಾಮದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ಮುಖಂಡ ವಿಠ್ಠಲ ಕೋಣೆಕರ್ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ವಲಯ ಮಟ್ಟದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಬಂಜಾರಾ ಕ್ರಾಂತಿದಳದ ರಾಜ್ಯಾಧ್ಯಕ್ಷ ರಾಜು ಚವ್ಹಾಣ, ವಿಠ್ಠಲ ಕೋಣೆಕರ್, ರಾಜು ಸಿಂಗೆ, ಸಿದ್ಧರಾಮ ಅಷ್ಟಗಿ, ಸೂರ್ಯಕಾಂತ ಜಿಡಗಿ, ವಿಜಯಕುಮಾರ ಚಿಂಚೊಳ್ಳಿ, ಪ್ರಕಾಶ ಸರ್ವೋದಯ, ಸಿದ್ಧರಾಮ ಹಾದಿಮನಿ, ಮಹಾಂತೇಶ ಜಿಡಗಿ, ಶರಣಬಸಪ್ಪ ನಿರ್ಮಲಕರ್, ರೇವಣಸಿದ್ಧ ಖರ್ಚನ, ಆನಂದ ಗುಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?