ಆಹಾರ ಧಾನ್ಯ-ಬೀಜ ವ್ಯಾಪಾರಿಗಳಿಂದ ಪ್ರತಿಭಟನೆ
Team Udayavani, Jun 2, 2022, 2:47 PM IST
ಕಲಬುರಗಿ: ಇಲ್ಲಿನ ಎಪಿಎಂಸಿ ಕಚೇರಿ ಅಧೀಕ್ಷಕ ಮಾಹಾಂತಪ್ಪ ವರ್ಗಾವಣೆಗೆ ಆಗ್ರಹಿಸಿ ಬುಧವಾರ ಎಪಿಎಂಸಿ ವ್ಯಾಪಾರ ವಹಿವಾಟು ಬಂದ್ ಮಾಡಿ ವರ್ತಕರು ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ವಿಚಾರಣೆ ಆಗಮಿಸಿದ್ದ ಕಾರಟಗಿ ಎಪಿಎಂಸಿ ಕಾರ್ಯದರ್ಶಿ, ಹೆಚ್ಚುವರಿ ನಿರ್ದೇಶಕರಿಗೆ ಮನವಿ ಸಲ್ಲಿಸಿ, ಮಹಾಂತಪ್ಪ ವರ್ತನೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳೆದ ಹಲವು ವರ್ಷಗಳಿಂದ ಎಪಿಎಂಸಿಗೆ ಬರುವ ಎಲ್ಲ ವರ್ತಕರು, ರೈತರು ಸೇರಿಕೊಂಡು ಇತರೆ ಸಾಮಾನ್ಯರಿಗೂ ಏಕವಚನದಲ್ಲಿ ಮಾತನಾಡಿಸುವುದು, ಸಮಸ್ಯೆ ಎಂದು ಬಂದವರನ್ನು ಇನ್ನಷ್ಟು ಸಮಸ್ಯೆಗೆ ಗುರಿ ಮಾಡುವುದು, ನೊಂದವರ ಗೋಳು ಕೇಳುವುದನ್ನು ಬಿಟ್ಟು ಬೇಕಾಬಿಟ್ಟಿ ಮಾತನಾಡಿ ಅಹಂಕಾರ ತೋರಿಸುವುದನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಎರಡು ಬಾರಿ ಕಾರ್ಯದರ್ಶಿ ಮತ್ತು ಇತರೆ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದರೂ, ನಮ್ಮ ಕಾರ್ಯದರ್ಶಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಕೂಡಲೇ ಮಹಾಂತಪ್ಪ ಅವರನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ವಿಶೇಷ ಅಧಿಕಾರಿಯಾಗಿ ವಿಚಾರಣೆ ಮಾಡಲು ಬಂದಿರುವ ಕಾರಟಗಿ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿ, ಸಮಸ್ಯೆ ಕುರಿತು ಮಾಹಿತಿ ನೀಡಲಾಯಿತು. ಬಳಿಕ ಆಡಳಿತ ಕಚೇರಿ ಎದುರು ಘೋಷಣೆ ಕೂಗಿ ಪ್ರತಿಭಟಿಸಲಾಯಿತು.
ಸಂಘದ ಅಧ್ಯಕ್ಷ ಶ್ರೀಮಂತ ಉದನೂರು, ಕಾರ್ಯದರ್ಶಿ ಸಂತೋಷ ಜಿ.ಲಂಗರ್, ಎಚ್ಕೆಸಿಸಿಐನ ಶಶಿಕಾಂತ ಪಾಟೀಲ, ಶರಣು ಪಪ್ಪಾ, ಬಸವರಾಜ ಮಂಗಲಗಿ, ಅಂಬರಾಯ ಜೀವಣಗಿ, ಶಿವಲಿಂಗಪ್ಪ ಪಾಟೀಲ ಭೀಮು ಜೀವಣಗಿ, ಹಮಾಲರ ಸಂಘದ ಅಧ್ಯಕ್ಷ ಆಪ್ಪರಾವ್, ಸಂಗಣ್ಣ ಹಿರೇಗೌಡ, ಸಂತೋಷ, ಅಶೋಕ ನಿಂಗದೆ, ಸಂತೋಷ ನಿಂಗದೆ, ಶಿವಪುತ್ರಪ್ಪ ಪೂಜಾರಿ, ಮಲ್ಲಿಕಾರ್ಜುನ ಪೂಜಾರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?