ಮೊಕದ್ದಮೆ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
Team Udayavani, Jun 22, 2022, 2:38 PM IST
ಕಲಬುರಗಿ: ತಾಲೂಕಿನ ನಂದೂರ ಗ್ರಾಮದ ಹತ್ತಿರ ಇರುವ ಸರ್ವೇ ನಂ. 77/1ರ 11ಜನ ಬಾಪು ನಾಯಕ ತಾಂಡಾದ ರೈತರ ಮೇಲೆ ಹಾಕಿರುವ ಮೊಕದ್ದಮೆ ಕೂಡಲೇ ಹಿಂಪಡೆಯಬೇಕು ಮತ್ತು ಸಾಗುವಳಿ ಮಾಡುತ್ತಿರುವವರ ಜಮೀನು ಸಕ್ರಮಗೊಳಿಸಬೇಕೆಂದು ಒತ್ತಾಯಿಸಿ ಮಂಗಳವಾರ ಅಖೀಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದರು.
ತಾಲೂಕಿನ ನಂದೂರ ಗ್ರಾಮದ ಹತ್ತಿರವಿರುವ ಕಂದಾಯ ಜಮೀನಿನಲ್ಲಿರುವ ಸರ್ವೇ ನಂ.77/1ರ ಜಮೀನಿನಲ್ಲಿ ಅಕ್ರಮ ಸಾಗುವಳಿ ನಡೆಯುತ್ತಿದೆ ಎಂದು ತಹಶೀಲ್ದಾರ್ ವರದಿ ಆಧರಿಸಿ ಮೊಕದ್ದಮೆ ದಾಖಲಿಸಲಾಗಿದೆ. ಆದರೆ 30 ವರ್ಷಗಳಿಂದ ಅಲ್ಲಿ ಸಾಗುವಳಿ ಮಾಡಲಾಗುತ್ತಿದೆ. ಇದಕ್ಕೆ ದಾಖಲೆಗಳೂ ಇವೆ. ಆದರೆ ಇವತ್ತು ಏಕಾಏಕಿ ರೈತರ ವಿರುದ್ಧ ದೂರು ದಾಖಲಿಸುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ದುಡಿಯವ ರೈತರಿಗೆ ಜಮೀನು ತಪ್ಪಿಸುವ ಹುನ್ನಾರ ಇದರಲ್ಲಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ವೇಳೆ ಜಿಲ್ಲಾ ಅಧ್ಯಕ್ಷ ಗಣಪತರಾವ್ ಮಾನೆ, ಕಾರ್ಯದರ್ಶಿ ಮಹೇಶ ಎಸ್.ಬಿ. ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್