ಡಿಜಿಪಿ ವರ್ಗಾವಣೆ ಖಂಡಿಸಿ ಪ್ರತಿಭಟನೆ
Team Udayavani, May 12, 2022, 3:31 PM IST
ಕಲಬುರಗಿ: ರಾಜ್ಯ ನಾಗರಿಕ ಹಕ್ಕುಜಾರಿ ನಿರ್ದೇಶನಾಲಯದ ಡಿಜಿಪಿ ರವೀಂದ್ರನಾಥ ವರ್ಗಾವಣೆ ರದ್ದುಪಡಿಸಿ ಸುಳ್ಳು ಜಾತಿ ಪ್ರಮಾಣ ಪತ್ರಗಳ ಬಗ್ಗೆ ತನಿಖೆ ಮಾಡಲು ಸಿಆರ್ಸಿ ಸೆಲ್ಗೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಎಸ್ಸಿ, ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರವೀಂದ್ರನಾಥ ನಿರ್ದೇಶನಾಲಯಕ್ಕೆ ಬಂದಾಗಿನಿಂದಲೂ ಉತ್ತಮ ಕೆಲಸ ನಡೆಯುತ್ತಿವೆ. ಆದರೂ ಸರ್ಕಾರ ಇತರರ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡುತ್ತಿದೆ. ಇದು ಸರಿಯಲ್ಲ ಎಂದು ಸಮಿತಿ ರಾಜ್ಯಾಧ್ಯಕ್ಷ ಶ್ರವಣಕುಮಾರ ನಾಯಕ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಮಾರೆಪ್ಪ ನಾಯಕ ಮಗ್ಧಂಪೂರ, ನಂದ ಕುಮಾರ ಮಾಲಿಪಾಟೀಲ, ನಂದಕುಮಾರ ನಾಯಕ, ಆನಂದ ತಾಜಸುಲ್ತಾನಪೂರ, ಶಿವಕುಮಾರ ನಾಯಕ, ವೆಂಕಟೇಶ ಕೊಡಚಿ, ಕಲ್ಯಾಣಿ ಸಿಂಗ್, ಬಸವರಾಜ ಪಾಳಾ, ಗೌತಮ ತಳಕೇರಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್