ಕೋಟೆಯ ಶಿವಲಿಂಗ ದೇವಸ್ಥಾನ ಪುನಃಶ್ಚೇತನಕ್ಕೆ ಆಗ್ರಹಿಸಿ ನಿರಶನ


Team Udayavani, May 24, 2022, 10:20 AM IST

4protest

ಕಲಬುರಗಿ: ನಗರದ ಬಹುಮನಿ ಕೋಟೆಯ ಪ್ರದೇಶದಲ್ಲಿರುವ ಶಿವಲಿಂಗ ದೇವಸ್ಥಾನವನ್ನು ಪುನಃಶ್ಚೇತನಗೊಳಿಸಬೇಕು ಮತ್ತು ಕೋಟೆ ಪ್ರದೇಶದಲ್ಲಿರುವ ಜನರನ್ನು ಹೊರ ಹಾಕಬೇಕು ಎಂದು ಒತ್ತಾಯಿಸಿ ಹಿಂದು ಜಾಗೃತ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ಮಾಡಿದರು.

ಬಹುಮನಿ ಕೋಟೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ವಾರಂಗಲ್ಲಿನ ಕಾಕತೀಯರು, ದೇವಗಿರಿಯ ಯಾದವರು ಮತ್ತು ರಾಷ್ಟ್ರಕೂಟರು, ಚಾಲುಕ್ಯರು ಆಳಿದ್ದಾರೆ. ಒಂದೊಮ್ಮೆ ವಿಜಯನಗರದ ಕೃಷ್ಣದೇವರಾಯನೂ ಕೂಡ ಯುದ್ಧ ಮಾಡಿ ಗೆದ್ದು ಸ್ವಲ್ಪ ದಿನ ಆಳಿದ್ದಾನೆ. ಕೋಟೆಯ ಈಶಾನ್ಯ ಮೂಲೆಯಲ್ಲಿ ಸ್ವಯಂ ಭು ಸೋಮೇಶ್ವರ ದೇವಾಲಯವಿದೆ. ದೇವಸ್ಥಾನದಲ್ಲಿ ಲಭ್ಯ ಇರುವ ಶಿಲ್ಪ ವಿನ್ಯಾಸದಲ್ಲಿ ಗಣೇಶ, ನಂದಿ, ಶಿವ-ಪಾರ್ವತಿ, ನವಿಲಿನ ಶಿಲಾಮೂರ್ತಿಗಳಿವೆ. ಹಿಂದೂ ಧರ್ಮಕ್ಕೆ ಹೊಲುವ ಎಲ್ಲ ಕುರುಹುಗಳು ಇಲ್ಲಿವೆ. ದುರಾದೃಷ್ಟವೆಂದರೆ ಬಹುಮನಿಯ ರಾಜರ ಆಳ್ವಿಕೆಯಲ್ಲಿ ಇವೆಲ್ಲವೂ ಮೂಲೆಗುಂಪಾಗಿ ಹಾಳಾಗಿವೆ. ಅವುಗಳನ್ನು ಪುನಃ ಶ್ಚೇತನ ಮಾಡುವ ಕೆಲಸ ಆಗಬೇಕು. ಕೂಡಲೇ ಜಿಲ್ಲಾಡಳಿತ ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಿ ದೇವಾಲಯವನ್ನು ಸಾರ್ವಜನಿಕ ವೀಕ್ಷಣೆ, ಪೂಜೆ ಪುನಸ್ಕಾರಗಳಿಗೆ ಯೋಗ್ಯವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಕೋಟೆ ಪುರಾತತ್ವ ಇಲಾಖೆಗೆ ಸಂಬಂಧಿಸಿದ್ದರೂ, ಕೋಟೆಯೊಳಗೆ ಬಹುಮನಿ ರಾಜರ ವಂಶಸ್ಥರು ಎಂದು ಹೇಳಿಕೊಂಡು ವಾಸವಿರುವ ಜನರನ್ನು ಹೊರ ಹಾಕಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದ ಲಕ್ಷ್ಮಿಕಾಂತ ಎಸ್‌ ಸಾದ್ವಿ, ಜಿಲ್ಲಾ ಘಟಕದ ಸುನೀಲ ಶಿರ್ಕೆ, ವಿದ್ಯಾರ್ಥಿ ಘಟಕದ ಪವನ ಕದಂ, ಸಂತೋಷ ಸೋನಾವಣೆ, ದಶರಥ ಇಂಗಳಗಿ, ಮಹಾದೇವ ಕೋಟನೂರು, ಸಂಜನಾ ಮಂಗಳಮುಖೀ, ಸಂಗು ಕಾಳನೂರು, ರಮೇಶ ಆಳ್ಳೊಳ್ಳಿ, ಹಣಮಂತ ಪೂಜಾರಿ, ಗುರುಸ್ವಾಮಿ ಹಿರೇಮಠ, ಚಿದಾನಂದ ಸ್ವಾಮಿ, ಉದಯಕುಮಾರ ಇತರರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.