ರೈತರಿಂದ ಬಾಳೆಹಣ್ಣು ಖರೀದಿಸಿ ವಿತರಣೆ
Team Udayavani, Nov 26, 2021, 12:29 PM IST
ಆಳಂದ: ಮಾರುಕಟ್ಟೆಯಲ್ಲಿ ಬಾಳೆ ಹಣ್ಣಿನ ಬೆಲೆ ಕುಸಿದು ಸಂಕಷ್ಟದಲ್ಲಿರುವ ಬೆಳೆಗಾರರಿಗೆ ಬೆಂಬಲ ನೀಡಲು ತಾಲೂಕಿನ ಮದಗುಣಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ವೇಳೆ ಗ್ರಾಮಸ್ಥರೊಬ್ಬರು ಬಾಳೆಹಣ್ಣು ಖರೀದಿಸಿ ನೀಡಿದರು.
ಕರವೇ ಜಿಲ್ಲಾ ಸಂಚಾಲಕ ಮಹಾಂತೇಶ ಸಣ್ಣಮನಿ ಬಾಳೆ ಬೆಳೆಗಾರರಿಂದ ಬಾಳೆಹಣ್ಣು ಖರೀದಿಸಿ 180 ವಿದ್ಯಾರ್ಥಿಗಳಿಗೆ ತಲಾ ಎರಡು ಬಾಳೆ ಹಣ್ಣು ವಿತರಿಸಿದರು.
ಇದೇ ವೇಳೆ ಪ್ರತಿಕ್ರಿಯಿಸಿದ ಸಣ್ಣಮನಿ, ಸಂಕಷ್ಟದಲ್ಲಿರುವ ಬಾಳೆ ಬೆಳೆಗಾರರಿಗೆ ಬೆಲೆ ಕುಸಿದ ಹಿನ್ನೆಲೆಯಲ್ಲಿ ದಿಕ್ಕು ತೋಚದಂತಾಗಿದೆ. ಆದ್ದರಿಂದ ರೈತರಿಂದ ಬಾಳೆಹಣ್ಣು ಖರೀದಿಸಿ ಸಭೆ, ಸಮಾರಂಭ, ವಿವಾಹ ಸಮಾರಂಭಗಳಲ್ಲಿ ನೀಡಬೇಕು ಎಂದು ಕೋರಿದರು.
ಮುಖ್ಯ ಶಿಕ್ಷಕ ಬಸಣ್ಣ ಸಿಗರಕಂಟಿ ಅವರು ಕರವೇ ಜಿಲ್ಲಾ ಸಂಚಾಲಕರ ಕಾರ್ಯವನ್ನು ಶ್ಲಾಗಿಸಿದರು. ಶಿಕ್ಷಕರಾದ ಮಹಾದೇವ ಬಂಡೆ, ಭಾರತಿ, ನಾಗೇಶ ಇಂದಾಪುರೆ, ಬಸವರಾಜ, ಸಿದ್ಧು, ಶಿವನಿಂಗಪ್ಪ, ಬಿಸಿಯೂಟದ ಶಾಂತಾಬಾಯಿ ಮಾಂಗ್, ಭೌರಮ್ಮ ಸಣ್ಣಮನಿ, ಮಹಾದೇವಿ ಜಮಾದಾರ, ಗ್ರಾಮದ ನಾಗೇಶ ಮಡಿವಾಳ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್