ಮಾರಮ್ಮ ದೇವಿಗೆ ಮೊಸರನ್ನ ಹರಕೆ

ದೇಗುಲದ ಬಾಗಿಲು ಮುಚ್ಚಿಸಿದ ಪೊಲೀಸರು | 41ರಲ್ಲಿ ಬರಬೇಕಿದೆ 30 ಮಂದಿ ವರದಿ

Team Udayavani, Apr 8, 2020, 12:34 PM IST

08-April-9

ರಾಯಚೂರು: ಎಪಿಎಂಸಿಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿ ಕಾರಿ ಆರ್‌. ವೆಂಕಟೇಶಕುಮಾರ ಮುನ್ನೆಚ್ಚರಿಕೆ, ಸಾಮಾಜಿಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ರಾಯಚೂರು: ಕೋವಿಡ್‌ 19 ನಿಯಂತ್ರಣಕ್ಕೆ ಜಿಲ್ಲಾಡಳಿತ ಸಾಕಷ್ಟು ಯತ್ನ ನಡೆಸಿದ್ದರೆ ಮತ್ತೊಂದೆಡೆ ನಗರದ ಕಂಡಗಡ್ಡೆ ಮಾರಮ್ಮದೇವಿಗೆ ಮೊಸರನ್ನ ನೈವೇದ್ಯ ಮಾಡಿದರೆ ರೋಗ ನಿವಾರಣೆಯಾಗಲಿದೆ ಎನ್ನುವ ವದಂತಿ ಹಬ್ಬಿದೆ.

ಈ ಸುದ್ದಿ ಕೇಳುತ್ತಿದ್ದಂತೆ ಸಾಕಷ್ಟು ಮಹಿಳೆಯರು ದೇವಸ್ಥಾನಕ್ಕೆ ತೆರಳಿ ನೈವೇದ್ಯ ಸಲ್ಲಿಸಿದ ಪ್ರಸಂಗ ಬುಧವಾರ ನಡೆದಿದೆ. ಯಾವುದೋ ಮಹಿಳೆ ಮೈಯಲ್ಲಿ ದೇವಿ ಬಂದು ಈ ರೀತಿ ಹೇಳಿದ್ದಾಳೆ ಎನ್ನಲಾಗಿದ್ದು, ಮಂಗಳವಾರ ದೇವಿ ವಾರವಾದ ಕಾರಣ ಜನ ಈ ರೀತಿ ಹರಕೆ ತೀರಿಸಿದ್ದಾರೆ. ಅಲ್ಲದೇ ನಿಷೇಧಾಜ್ಞೆ ಲೆಕ್ಕಿಸದೆ ಜನತೆ ದೇವಸ್ಥಾನದತ್ತ ಮುಖ ಮಾಡಿದ್ದು ಕಂಡು ಬಂತು. ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಜನರನ್ನು ಮನೆಗೆ ಕಳುಹಿಸಿ ದೇಗುಲ ಮುಚ್ಚಿಸಿದರು.

ಜಿಲ್ಲೆಯಲ್ಲಿ ಶಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಮಂಗಳವಾರ ಮತ್ತೆ 21 ಜನರ ಗಂಟಲಿನ ಮಾದರಿಯನ್ನು ಪರೀಕ್ಷೆಗೆಂದು ಲ್ಯಾಬ್‌ ಕಳುಹಿಸಲಾಗಿದೆ. ಈ ವರೆಗೂ 41 ಮಾದರಿ ಕಳುಹಿಸಿದಂತಾಗಿದೆ. ಅದರಲ್ಲಿ ಒಂಭತ್ತು ವರದಿಗಳು ನೆಗೆಟಿವ್‌ ಆಗಿದ್ದು, ರೋಗ ಲಕ್ಷಣಗಳು ಇಲ್ಲದ ಕಾರಣ ಎರಡು ತಿರಸ್ಕೃತವಾಗಿವೆ. 30 ವರದಿಗಳು ಬರಬೇಕಿದೆ. ಈ ವರೆಗೂ ವಿದೇಶಗಳಿಂದ 174 ಮಂದಿ ಹಿಂತಿರುಗಿದ್ದಾರೆ. ಸರ್ಕಾರಿ ಕ್ವಾರಂಟೈನ್‌ನಲ್ಲಿ 48 ಜನರನ್ನು ಉಳಿಸಲಾಗಿದೆ. ಜಿಲ್ಲೆಯಿಂದ ಈ ವರೆಗೆ ಕಳುಹಿಸಲಾದ ವರದಿಗಳಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್‌.
ವೆಂಕಟೇಶಕುಮಾರ ತಿಳಿಸಿದ್ದಾರೆ.

ಸಾಮಾನ್ಯ ರೋಗಿಗಳ ಚಿಕಿತ್ಸೆಗೆ ತುರ್ತಾಗಿ ಸ್ಪಂದಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗೆ ರಜೆ ಮಂಜೂರು ಮಾಡುವುದನ್ನು ನಿರ್ಬಂದಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೊರೋನಾ ವೈರಸ್‌ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತಿರುವ ನಿಮಿತ್ತ ನಿಷೇಧಾಜ್ಞೆ ಜಾರಿಗೊಳಿಸಿದರೂ ಗೂಡ್ಸ್‌ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು ತುಂಬಿಕೊಂಡು ಹೋಗಲಾಗುತ್ತಿದೆ. ಮಂಗಳವಾರ ಜಿಲ್ಲಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಅ ಧಿಕಾರಿಗಳು, 30 ಗೂಡ್ಸ್‌ ವಾಹನಗಳ ಚಾಲಕರ ವಿರುದ್ಧ ಕ್ರಮ ಕೈಗೊಂಡು ದಂಡ ವಿಧಿಸಿದ್ದಾರೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.