ರಾವತ್ ಸಾವು ರಾಷ್ಟ್ರಕ್ಕೆ ನಷ್ಟ
Team Udayavani, Dec 10, 2021, 11:01 AM IST
ಚಿತ್ತಾಪುರ: ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡುಪಿಟ್ಟ ಜನರಲ್ ಬಿಪಿನ್ ರಾವತ್ ಬುಧವಾರ ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಅಶ್ವತ್ಥ್ ರಾಠೊಡ ಸಂತಾಪ ಸೂಚಿಸಿದ್ದಾರೆ.
ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಬುಧವಾರ ದಿ. ಬಿಪಿನ್ ರಾವತ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 11 ಸೇನಾ ಸಿಬ್ಬಂದಿ ಮೃತಪಟ್ಟಿರುವುದು ತುಂಬಾ ದುಃಖಕರ ಸಂಗತಿ ಎಂದು ಹೇಳಿದರು.
ರಾವತ್ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಸೇನಾಪಡೆ, ವಾಯುಪಡೆ, ನೌಕಾಪಡೆಗಳನ್ನು ಬೆಸೆಯುವ ಯೋಜನೆಯನ್ನು ಅವರು ಸಿದ್ಧಪಡಿಸಿದ್ದರು ಎಂದು ಸ್ಮರಿಸಿದರು. ವಿಎಚ್ಪಿ ಜಿಲ್ಲಾ ಕಾರ್ಯದರ್ಶಿ ಅಂಬರೀಶ ಸುಲೇಗಾಂವ, ತಾಲೂಕು ಅಧ್ಯಕ್ಷ ಶ್ರೀನಿವಾಸ, ಕಾರ್ಯದರ್ಶಿ ಮೇಘರಾಜ ಗುತ್ತೇದಾರ, ಸಂತೋಷ ಅಲ್ಲೂರಕರ್, ಪ್ರಹ್ಲಾದ ವಿಶ್ವಕರ್ಮ, ಕಾಶಿನಾಥ ಸಂಗಾವಿ, ಮನೋಜ ರಾಠೊಡ, ಮಲ್ಲಿಕಾರ್ಜುನ ಉಪ್ಪಾರ, ದಶರಥ ದೊಡ್ಡಮನಿ, ಅಜಯ ಬಿದರಿ, ಶರಣು, ಆಕಾಶ, ಬಸ್ಸು, ಚಂದು, ರಾಹುಲ್, ಗುರುರಾಜ, ರಮೇಶ ಇನ್ನಿತರರು ಇದ್ದರು. ನಂತರ ಮೌನಾಚರಣೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ