ಕ್ರಾಂತಿ ರಣಕಹಳೆ ಮೊಳಗಿಸಿದ್ದು ರಾಯಣ್ಣ


Team Udayavani, Nov 26, 2021, 10:53 AM IST

6rayanna

ಶಹಾಬಾದ: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮುನ್ನವೇ ಬ್ರಿಟಿಷ್‌ ಸಾಮ್ರಾಜ್ಯದ ಎದೆ ನಡುಗಿಸಿದ, ತನ್ನ ಅಪಾರ ಶೌರ್ಯ ಪರಾಕ್ರಮಗಳಿಂದ ಬ್ರಿಟಿಷರಿಗೆ ಸವಾಲಾಗಿ ನಿಂತು ಕ್ರಾಂತಿಯ ರಣಕಹಳೆ ಮೊಳಗಿಸಿದ್ದು ಕನ್ನಡ ನಾಡಿನ ಗಂಡುಗಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಸಂಗೋಳಿ ರಾಯಣ್ಣ ಯುವ ಘರ್ಜನೆ ಜಿಲ್ಲಾಧ್ಯಕ್ಷ ಬಸವರಾಜ ಮದ್ರಕಿ ಹೇಳಿದರು.

ನಗರದಲ್ಲಿ ಕುರುಬ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಕ್ರಾಂತಿವೀರ ಸಂಗೋಳಿ ರಾಯಣ್ಣ ಯುವಕರ ಸಂಘ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಹುತೇಕರಿಗೆ ತಿಳಿಯದ ಅಚ್ಚರಿಯೆಂದರೆ, ರಾಯಣ್ಣ ಹುಟ್ಟಿದ್ದು ಆಗಸ್ಟ್‌ 15 ರಂದು ಮತ್ತು ದೇಶಕ್ಕಾಗಿ ಬಲಿದಾನ ಮಾಡಿದ್ದು ಜನವರಿ 26 (15 ಆಗಸ್ಟ್‌ 1798 – 26 ಜನವರಿ 1831). ಒಂದು ಸ್ವಾತಂತ್ರ್ಯ ದಿನ, ಮತ್ತೊಂದು ಗಣರಾಜ್ಯ ದಿನ. ಎರಡೂ ದಿನಗಳೂ ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನಗಳು ಎಂದರು.

ಬ್ರಿಟಿಷರ ದಬ್ಟಾಳಿಕೆ ಮೆಟ್ಟಿನಿಂತು ಕೆಚ್ಚೆದೆಯಿಂದ ಅವರ ವಿರುದ್ಧ ಸಮರ ಸಾರಿದ ಕನ್ನಡದ ವೀರವನಿತೆ ಕಿತ್ತೂರ ರಾಣಿ ಚೆನ್ನಮ್ಮಳ ಬಲಗೈ ಬಂಟನಾಗಿದ್ದ ರಾಯಣ್ಣ. ದೇಶಕ್ಕಾಗಿ ಅವನ ತ್ಯಾಗ ಅವಿಸ್ಮರಣೀಯವಾದದ್ದು. ಅವರ ಹೆಸರಿನಲ್ಲಿ ಸಂಘ ಸ್ಥಾಪನೆಯಾಗಿದ್ದು, ಸಮಾಜದ ಒಳತಿಗೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ಕುರುಬ ಸಮಾಜದ ಅಧ್ಯಕ್ಷ ಮಲ್ಕಣ್ಣ ಮುದ್ದಾ ಮಾತನಾಡಿ, ತನ್ನವರದೇ ಮೋಸಕ್ಕೆ ಒಳಗಾಗಿ ಚೆನ್ನಮ್ಮ ಬ್ರಿಟಿಷರ ಸೆರೆಗೆ ಸಿಕ್ಕಾಗ ಕಿತ್ತೂರಿನ ಪರವಾಗಿ ಕ್ರಾಂತಿ ಕಹಳೆ ಮೊಳಗಿಸಿದ ಗಂಡುಗಲಿ ರಾಯಣ್ಣ. ಕಿತ್ತೂರು ಚೆನ್ನಮ್ಮನ ಸೇನೆಯ ಅಧಿಪತಿಯಾಗಿದ್ದ. ದೊಡ್ಡ ದೇಶಭಕ್ತರ ಪಡೆಯನ್ನೇ ಕಟ್ಟಿದ್ದ. ಅದೇ ರೀತಿ ರಾಯಣ್ಣ ಸಂಘದವರು ಯುವ ಪಡೆ ಕಟ್ಟಿ ಉತ್ತಮ ಮಾರ್ಗದಲ್ಲಿ ಸಾಗಲಿ. ದುಶ್ಚಟಗಳಿಂದ ದೂರವಿದ್ದು, ಸಮಾಜಮುಖೀ ಕಾರ್ಯದಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಹೇಳಿದರು.

ಹೊನಗುಂಟಾದ ಪೂಜ್ಯ ಪದ್ಮಣಪ್ಪ ಮುತ್ಯಾ ಉದ್ಘಾಟಿಸಿದರು. ಕುರುಬ ಗೊಂಡ ಸಮಾಜದ ಅಧ್ಯಕ್ಷ ಸಾಯಬಣ್ಣ ಕೊಲ್ಲೂರ್‌, ನಿಂಗಣ್ಣ ಪೂಜಾರಿ, ಮರಲಿಂಗ ಕಮರಡಗಿ, ಸುರೇಶ ಗಿರಣಿ, ಸುನೀಲ ಪೂಜಾರಿ, ದತ್ತಾ ಪಂಡ್‌, ಅನೀಲ ದೊಡ್ಮನಿ, ಮಂಜುನಾಥ ದೊಡ್ಮನಿ, ಶ್ರೀಕಾಂತ ಕಟ್ಟಿ, ಸಂಗಣ್ಣ ಕಂಠಿಕಾರ, ವಿಜಯಕುಮಾರ ಕಂಠಿಕಾರ,ಯಲ್ಲಾಲಿಂಗ ಕರಗಾರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.