ಅಕ್ಕಮಹಾದೇವಿ ವಚನ ಅರಿತು ಅಳವಡಿಸಿಕೊಳ್ಳಿ: ಡಾ| ಪಟ್ಟದ್ಧೇವರು
Team Udayavani, Mar 28, 2022, 11:14 AM IST
ಚಿಂಚೋಳಿ: ಶಿವಶರಣೆ ಜಗನ್ಮಾತೆ ಅಕ್ಕಮಹಾದೇವಿ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮನಸ್ಸು ಪರಿಶುದ್ಧವಾಗುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ, ಪೂಜ್ಯ ಡಾ| ಬಸವಲಿಂಗ ಪಟ್ಟದೇವರು ನುಡಿದರು.
ದೇಗಲಮಡಿ ಗ್ರಾಮದಲ್ಲಿ ಪರಮ ಪೂಜ್ಯ ಡಾ| ಬಸವಲಿಂಗ ಅವಧೂತರ 10ನೇ ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.
ಶರಣೆ ಅಕ್ಕಮಹಾದೇವಿ ವಚನಗಳನ್ನು ನಮ್ಮ ಬದುಕಿನಲ್ಲಿ ಹಾಸು ಹೊಕ್ಕಾಗಬೇಕು. ಮನಸ್ಸು ಪವಿತ್ರವಾಗಿದ್ದರೆ ದೇವರನ್ನು ಕಾಣಬಹುದು ಎಂದರು.
ಪೂಜ್ಯ ಡಾ| ಬಸವಲಿಂಗ ಅವದೂತರ ಆರ್ಶೀವಚನ ನೀಡಿ, ಭಕ್ತರು ಹಣೆಯ ಮೇಲೆ ವಿಭೂತಿ ಹಚ್ಚಿಕೊಂಡರೆ ನಾವು ಮಾಡಿದ ಪಾಪಗಳು ಪರಿಹಾರ ಆಗುತ್ತವೆ ಎಂದು ಹೇಳಿದರು.
ತಡೋಳ ಕಟ್ಟಿಮಠ ಸಂಸ್ಥಾನ ಹಿರೇಮಠದ ಶ್ರೀ ರಾಜೇಶ್ವರ ಶಿವಾಚಾರ್ಯರು ಮಾತನಾಡಿ, ಯಾರ ಮನೆಯಲ್ಲಿ ಭಜನೆ ಮತ್ತು ಭೋಜನ ಇರುತ್ತದೋ ಅಲ್ಲಿ ಸ್ವರ್ಗ ಮತ್ತು ಆನಂದ ಇರುತ್ತದೆ ಎಂದರು.
ಶಾಸಕ ಡಾ| ಅವಿನಾಶ ಜಾಧವ ಮಾತನಾಡಿ, ಅವಧೂತರ ಪುಣ್ಯಾಶ್ರಮಕ್ಕೆ ನಾನು ಶಾಸಕನಾಗಿ ಬಂದಿಲ್ಲ. ಮಠದ ಭಕ್ತನಾಗಿ ಬಂದಿದ್ದೇನೆ. ಅಧಿಕಾರ ಇರಲಿ, ಬಿಡಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಪೂಜ್ಯರ ಆಶೀರ್ವಾದ ನನ್ನ ಮೇಲಿರಲಿ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ, ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಡಿವೈಎಸ್ಪಿ ಬಸವೇಶ್ವರ ಹೀರಾ, ದೇಗಲಮಡಿ ಗ್ರಾಪಂ ಅಧ್ಯಕ್ಷೆ ಶೋಭಾ ಮುದ್ದಾ, ಉಮಾ ಪಾಟೀಲ, ಲಕ್ಷ್ಮಣ ಆವಂಟಿ, ಶ್ರೀಮಂತ ಕಟ್ಟಿಮನಿ, ಸಿಪಿಐ ಮಹಾಂತೇಶ ಪಾಟೀಲ, ಪಿಎಸ್ಐ ಮಂಜುನಾಥರೆಡ್ಡಿ, ಚಿತ್ರಶೇಖರ ಪಾಟೀಲ, ಶರಣಗೌಡ ಮುದ್ದಾ, ವಿವೇಕ ಪಾಟೀಲ, ಹಿರಿಯ ಪತ್ರಕರ್ತ ಶಾಮರಾವ ಚಿಂಚೋಳಿ, ಜಗನ್ನಾಥ ಶೇರಿಕಾರ, ಅವಿನಾಶ ಗೋಸುಲ, ಸಿದ್ಧಪ್ಪಗೌಡ ಮುದ್ದ ಇನ್ನಿತರರು ಭಾಗವಹಿಸಿದ್ದರು. ಕು. ಅನ್ವಿತಾ ಪಾಟೀಲ ಪ್ರಾರ್ಥಿಸಿದರು, ಬೀದರ ದೇವೇಂದ್ರ ಕರಂಜಿ ಸ್ವಾಗತಿಸಿದರು, ನವಲಿಂಗ ಪಾಟೀಲ ವಂದಿಸಿದರು. ಬೀದರ, ಜಹೀರಾಬಾದ, ಚಿಂಚೋಳಿ, ಹುಮನಾಬಾದ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ