ಲಸಿಕೆ ಪಡೆದಲ್ಲಿ ಕೋವಿಡ್ ಅಪಾಯ ಕಡಿಮೆ: ಸಿದ್ದು
Team Udayavani, Jan 20, 2022, 10:24 AM IST
ಕಲಬುರಗಿ: ಸಾಕಷ್ಟು ಸಂಶೋಧನೆ ನಡೆಸಿ ಕೋವಿಡ್ ಲಸಿಕೆ ಬಂದಿದ್ದರಿಂದ ಲಸಿಕೆ ಪಡೆದಲ್ಲಿ ಕೊರೊನಾ ನಿಯಂತ್ರಿಸಬಹುದು. ಆದ್ದರಿಂದ ವಿದ್ಯಾರ್ಥಿಗಳು ಆಸಕ್ತಿಯಿಂದ ಲಸಿಕೆ ಪಡೆಯಬೇಕೆಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಐಟಿಐ ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸಿದ್ಧರಾಮೇಶ್ವರ (ಸಿದ್ಧು) ಬಳಬಟ್ಟಿ ಹೇಳಿದರು.
ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆಗೆ ಚಾಲನೆ ನೀಡಿ ಮಾತನಾಡಿದ ಅವರು, ಯುವಕರು ತಾವೆಲ್ಲ ಸದೃಢ, ಲಸಿಕೆ ಹಾಕಿಕೊಳ್ಳದಿದ್ದರೂ ಏನೂ ಆಗುವುದಿಲ್ಲ ಎಂಬ ಭಾವನೆ ತೆಗೆದು ಹಾಕಬೇಕು. ಈಗಿನ ಬದಲಾದ ಜೀವನಶೈಲಿಯಿಂದ ಯುವಕರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಇದಕ್ಕೆಲ್ಲ ಲಸಿಕೆಯೇ ರಾಮಬಾಣವಾಗಿದೆ ಎಂದರು.
ಕೋವಿಡ್ ಮೂರನೇ ಅಲೆ ವ್ಯಾಪಿಸುತ್ತಿದೆ. ಇದರ ಲಕ್ಷಣ ನೋಡಿದರೆ ಹೆಚ್ಚಿನ ಅಪಾಯ ಇಲ್ಲ ಎಂಬುದು ಕಂಡು ಬರುತ್ತಿದೆಯಾದರೂ ಮುಂಜಾಗ್ರತೆ ವಹಿಸುವುದು, ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡುವುದು ಹೆಚ್ಚು ಸೂಕ್ತವಾಗಿದೆ ಎಂದು ಹೇಳಿದರು.
ಕಾಲೇಜಿನ ವಿದ್ಯಾರ್ಥಿಗಳಿಗೆಲ್ಲ ಕೋವಿಡ್ ಲಸಿಕೆ ಹಾಕಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ನಾಗವೇಣಿ ಸಿಕೆ, ಕಿರಿಯ ತರಬೇತಿ ಅಧಿಕಾರಿಗಳಾದ ಸೋಮಶೇಖರ ಪಾಟೀಲ, ಗುರುಶಾಂತ ಪಾಟೀಲ, ಜಯಶ್ರೀ ಚಕ್ಕಿ, ಸಾವಿತ್ರಿ ಪಾಟೀಲ, ತರಬೇತಿ ಅಧಿಕಾರಿ ವಿಜಯಕುಮಾರ ಆಲೂರ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…