ಜೆಸ್ಕಾಂನಿಂದ ಪರಿಹಾರ ವಿತರಣೆ
Team Udayavani, Jan 15, 2022, 12:01 PM IST
ಆಳಂದ: ತಾಲೂಕಿನ ಕೋರಳ್ಳಿ ಗ್ರಾಮದ ರೈತ ಗಂಗಾಧರ ಗುರುಲಿಂಗಪ್ಪ ವಾರದ ಅವರ ಎತ್ತು ಕಳೆದ ವರ್ಷ ವಿದ್ಯುತ್ ತಗುಲಿ ಮೃತಪಟ್ಟಿದ್ದರಿಂದ ಜೆಸ್ಕಾಂನಿಂದ ಮಂಜೂರಾದ 50 ಸಾವಿರ ರೂ. ಪರಿಹಾರ ಚೆಕ್ನ್ನು ಶಾಸಕ ಸುಭಾಷ ಗುತ್ತೇದಾರ ಸಂತ್ರಸ್ತ ರೈತನಿಗೆ ವಿತರಿಸಿದರು.
ಬಳಿಕ ಮಾತನಾಡಿದ ಶಾಸಕರು, 50 ಸಾವಿರ ರೂ. ನೀಡಿದ ಪರಿಹಾರ ಹಣವನ್ನು ಕೃಷಿ ಚಟುವಟಿಕೆಗಳಿಗೆ ಬಳಿಸಿಕೊಂಡು ಜೀವನ ಸಾಗಿಸಬೇಕು ಎಂದು ಸಲಹೆ ನೀಡಿದರು. ಜೆಸ್ಕಾಂ ಎಇಇ ಮಾಣಿಕರಾವ್ ಕುಲಕರ್ಣಿ ಮಾತನಾಡಿ, ವಿದ್ಯುತ್ ತಗುಲಿ ಎತ್ತು ಮೃತಪಟ್ಟಿದ್ದರಿಂದ ಸಂತ್ರಸ್ತ ರೈತನಿಗೆ ಪರಿಹಾರ ವಿತರಿಸಲಾಗಿದೆ ಎಂದರಲ್ಲದೇ, ತಾಲೂಕಿನಲ್ಲಿ ಖಾಲಿ ಇರುವ ಜೆಇ ಹುದ್ದೆಗಳನ್ನು ತುಂಬುವಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಶಾಸಕರಲ್ಲಿ ಮನವಿ ಮಾಡಿದರು.
ಲೈನ್ಮ್ಯಾನ್ ರಜನೀಶ ಜಂಗಲೆ, ಮುಖಂಡ ಪ್ರಭುಲಿಂಗ ವಾರದ, ಈರಣ್ಣಾ ಬೀದಿ, ಸಚಿನ್ ನರೋಣೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು