ಧರ್ಮ-ಸಂಸ್ಕಾರದಿಂದ ನೆಮ್ಮದಿ: ಶ್ರೀ ಸಿದ್ದರಾಮ ಶಿವಾಚಾರ್ಯ
Team Udayavani, Mar 22, 2022, 12:40 PM IST
ಜೇವರ್ಗಿ: ಧರ್ಮ-ಸಂಸ್ಕಾರದಿಂದಲೇ ಮಾನವ ಸಮುದಾಯಕ್ಕೆ ನೆಮ್ಮದಿ ಎಂದು ಸದ್ಗುರು ವಿಶ್ವಾರಾಧ್ಯ ತಪೋವನ ಮಠದ ಪೀಠಾಧಿಪತಿ ಡಾ| ಸಿದ್ಧರಾಮ ಶಿವಾಚಾರ್ಯರು ನುಡಿದರು.
ತಾಲೂಕಿನ ಶಖಾಪುರ ಎಸ್.ಎ ಗ್ರಾಮದ ಆರಾಧ್ಯ ದೈವ ಸಿದ್ಧಕುಲ ಚಕ್ರವರ್ತಿ ಸದ್ಗುರು ವಿಶ್ವಾರಾಧ್ಯರು ಮತ್ತು ಧರ್ಮಪತ್ನಿ ಮಾತೋಶ್ರೀ ಬಸವಾಂಬೆ ತಾಯಿಯವರ 71 ನೇ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿನ ಪ್ರತಿಯೊಬ್ಬರೂ ಮಠ, ಮಂದಿರಗಳಲ್ಲಿ ಆಯೋಜಿಸುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಧರ್ಮಾಚರಣೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಅಂದಾಗ ಮಾತ್ರ ಸಾತ್ವಿಕ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ಲಿಂ.ಸಿದ್ಧರಾಮ ಶಿವಯೋಗಿಗಳು ತಮ್ಮ ಜೀವನದುದ್ದಕ್ಕೂ ಭಕ್ತರ ಉದ್ಧಾರಕ್ಕಾಗಿ ಶ್ರಮಿಸಿದ ಶ್ರೇಷ್ಠ ಸಂತರಾಗಿದ್ದರು. ಅವರ ಸಮಾಜಮುಖೀ ಚಿಂತನೆಗಳು ಈಗಲೂ ಸಾರ್ವಕಾಲಿಕ ಸತ್ಯದಿಂದ ಕೂಡಿವೆ ಎಂದು ನುಡಿದರು.
ಲಿಂ.ಸಿದ್ಧರಾಮ ಶಿವಯೋಗಿಗಳ ತತ್ವ ಪದಗಳ ಆಧಾರಿತ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಬೀದರನ ಗುರುದೇವಾನಂದ ಆಶ್ರಮದ ಗಣೇಶಾನಂದ ಸ್ವಾಮೀಜಿ “ಕರುಣಿಸೆನ್ನನು ಶ್ರೀಗುರುವೇ’ ಎನ್ನುವ ವಿಷಯದ ಕುರಿತು ಪ್ರವಚನ ನೀಡಿದರು.
ಮುಖಂಡರಾದ ಸೋಮನಗೌಡ ಪಾಟೀಲ ಹಾಲಗಡ್ಲಾ, ಸಿದ್ರಾಮಪ್ಪಗೌಡ ಹರನೂರ, ಶಾಂತಗೌಡ ಪಾಟೀಲ ಐನಾಪುರ, ಬಸವಂತ್ರಾಯಗೌಡ ಮಾಲಿಪಾಟೀಲ ಹರನೂರ, ಬಾಪುಗೌಡ ಪಾಟೀಲ ಹಾಲಗಡ್ಲಾ, ನಿಂಗಣ್ಣಗೌಡ ಪಾಟೀಲ ಹರನೂರ, ಶರಣು ಸಾಹು ಗೋಗಿ, ದುಂಡಪ್ಪ ಮೋದಿ, ಶಂಕರಗೌಡ ಪಾಟೀಲ, ಸಿದ್ರಾಮಪ್ಪ ಕೋಬಾಳ, ವಿಶ್ವನಾಥಗೌಡ ಪಾಟೀಲ, ವೆಂಕೋಬರಾವ ವಾಗಣಗೇರಿ, ಶೇಖಪ್ಪಗೌಡ ಪೊಲೀಸ್ ಪಾಟೀಲ, ಮಹಾದೇವಪ್ಪ ಇಜೇರಿ, ಹಳ್ಳೆಪ್ಪ ದೇಸಾಯಿ, ಭೀಮರಾಯ ಹಾಗೂ ಶಖಾಪುರ, ಹರನೂರ, ಹಾಲಗಡ್ಲಾ, ಅವರಾದ ಗ್ರಾಮಸ್ಥರು ಭಾಗವಹಿಸಿದ್ದರು. ಡಾ| ಮಹಾಂತಗೌಡ ಪಾಟೀಲ ಸೊನ್ನ ನಿರೂಪಿಸಿ, ವಂದಿಸಿದರು. ಮತ್ತಿಮಡು ಗ್ರಾಮದ ಅಣ್ಣಾರಾಯ ಶಳ್ಳಗಿ, ಹಂಗನಳ್ಳಿಯ ಸೂರ್ಯಕಾಂತ, ಕೊಲ್ಲೂರಿನ ಕುಮಾರಿ ಸಂಜನಾ ದೇಸಾಯಿ, ರವಿಸ್ವಾಮಿ ಗೋಟೂರ ಅವರಿಂದ ಸಂಗೀತ ಸೇವೆ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು