ಕಾಶಿಯಲ್ಲಿ 42 ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮ


Team Udayavani, Feb 11, 2022, 11:06 AM IST

2kashi

ಸೊಲ್ಲಾಪುರ: ಬಹುಭಾಷಾ ಪಂಡಿತ, ಧರ್ಮರತ್ನ ಡಾ| ಮಲ್ಲಿಕಾರ್ಜುನ ಶ್ರೀಗಳನ್ನು ಕಾಶಿ ಜ್ಞಾನ ಸಿಂಹಾಸನ ಪೀಠದ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದು, ಮೇ.13ರಂದು ಕಾಶಿಯಲ್ಲಿ ಅದ್ಧೂರಿ ಪಟ್ಟಾಭಿಷೇಕ ಸಮಾರಂಭ ನಡೆಯಲಿದೆ ಎಂದು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.

ಇಲ್ಲಿನ ಅಕ್ಕಲಕೋಟ ರಸ್ತೆಯಲ್ಲಿರುವ ವೀರತಪಸ್ವಿ ಮಠದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಕಾಶಿ ಜಗದ್ಗುರುಗಳು ಈ ಮಾಹಿತಿ ನೀಡಿದರು. ಅಪ್ಪಂದಿರು ಕಷ್ಟಪಟ್ಟು ದುಡಿದಿದ್ದನ್ನೆಲ್ಲ ಮಕ್ಕಳಿ ಗಾಗಿ ಒಪ್ಪಿಸಿ ನಿವೃತ್ತರಾಗುತ್ತಾರೆ. ಅದೇ ರೀತಿ ಪೀಠಗಳು ತಮ್ಮ ಉತ್ತರಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಧಾರ್ಮಿಕ ಕಾರ್ಯಗಳನ್ನು ಮುನ್ನಡೆಯುವಂತೆ ಮಾಡಲಾಗುತ್ತದೆ. 32 ವರ್ಷದ ಹಿಂದೆ ಕಾಶಿ ಪೀಠಕ್ಕೆ ನಾನು ಆಯ್ಕೆಯಾಗಿದ್ದೆ. ಸಮಾಜಕ್ಕೆ ಸಾಧ್ಯವಾದಷ್ಟು ಉತ್ತಮ ಕಾರ್ಯ ಮಾಡಿರುವೆ. ಹೀಗಾಗಿ ಬದುಕಿರುವಾಗಲೇ ಸರಿಯಾದ ವ್ಯಕ್ತಿಗೆ ಜವಾಬ್ದಾರಿ ನೀಡಿ ನಿವೃತ್ತಿ ಹೊಂದುವ ಆಶಯದೊಂದಿಗೆ ಧರ್ಮ ಮತ್ತು ಸಾಮಾಜಿಕ ಕಾರ್ಯ ನಿರಂತರವಾಗಿ ನಡೆಯಬೇಕೆಂದು ಸಾಮರ್ಥ್ಯ ಹೊಂದಿದ ಡಾ| ಮಲ್ಲಿಕಾರ್ಜುನ ಶ್ರೀಗಳನ್ನು 87ನೇ ಪೀಠಾಧಿಪತಿ ಎಂದು ಅಧಿಕಾರ ವಹಿಸಲು ಅಧಿಕೃತವಾಗಿ ಪಟ್ಟಾಭಿಷೇಕ ಜರುಗಲಿದೆ ಎಂದರು.

ಏಪ್ರಿಲ್‌ 2ರ ಶನಿವಾರ ಯುಗಾದಿಯಿಂದ ಹಿಡಿದು ಮೇ 13ರ ವರೆಗೆ 42 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ಭಕ್ತ ಸಮೂಹ ಕಾಶಿಗೆ ಆಗಮಿಸಲಿದೆ. ಎಲ್ಲ ಭಕ್ತರು ತನು-ಮನ-ಧನದಿಂದ ಸೇವೆ ನೀಡಬೇಕು ಎಂದು ನುಡಿದರು.

ಕಾಶಿ ಪೀಠದ ಉತ್ತರಾಧಿಕಾರಿ ಡಾ| ಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ, ಹೊಟಗಿ ಮಠದ ಮಠಾಧೀಶರಾದ ಲಿಂ. ತಪೋರತ್ನಂ ಯೋಗಿರಾಜೇಂದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ಪಂಚಪೀಠಾಧೀಶ್ವರರಿಗೆ ಸಲ್ಲಿಸಿದ ಸೇವೆಯಿಂದ ನನಗೆ ಈ ಅವಕಾಶ ಒದಗಿ ಬಂದಿದೆ. ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಮುಗಿಸಿರುವೆ. ಅವರ ಮಾರ್ಗದರ್ಶನದಲ್ಲಿ ಕಾಶಿ ಪೀಠದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.

ಸೊಲ್ಲಾಪುರ ಶಾಸಕ ವಿಜಯಕುಮಾರ ದೇಶಮುಖ, ಮಾಜಿ ಶಾಸಕ ಸಿದ್ಧರಾಮ ಮೇತ್ರೆ, ವಿಶ್ವನಾಥ ಚಾಕೋತೆ ಮಾತನಾಡಿದರು. ಹೊಟಗಿ ಮಠದ ವತಿಯಿಂದ ಕಾಶಿ ನೂತನ ಪೀಠಾಧಿಪತಿ ಡಾ| ಮಲ್ಲಿಕಾರ್ಜುನ ಶ್ರೀಗಳು ಕಾಶಿ ಜಗದ್ಗುರುಗಳನ್ನು ಸತ್ಕರಿಸಿದರು.

ಮಂದ್ರೂಪದ ರೇಣುಕ ಶ್ರೀ, ನಾಗನಸೂರಿನ ಶ್ರೀಕಂಠ ಶ್ರೀ, ಚಿಟಗುಪ್ಪದ ಗುರುಲಿಂಗ ಶ್ರೀ, ಮೈಂದರಗಿಯ ನೀಲಕಂಠ ಶ್ರೀ, ಸುಗೂರೇಶ್ವರ ಶ್ರೀ, ಜಿಂತೂರಿನ ಅಮೃತೇಶ್ವರ ಶ್ರೀ ಸೇರಿದಂತೆ ನಾಡಿನ ಇತರ ಶ್ರೀಗಳು, ಎಪಿಎಂಸಿ ಮಾಜಿ ಅಧ್ಯಕ್ಷೆ ಇಂದುಮತಿ ಅಲಗೊಂಡಾ ಪಾಟೀಲ, ಸಂಚಾಲಕ ಕೇದಾರ ಉಂಬರಜೆ, ಸಿದ್ಧೇಶ್ವರ ಬಮಣಿ, ಹರೀಶ ಪಾಟೀಲ, ರಾಮಪ್ಪ ಚಿವಡಶೆಟ್ಟಿ, ಬಸವರಾಜ ಶಾಸ್ತ್ರೀ ಹಿರೇಮಠ, ಶಿವಯೋಗಿ ಶಾಸ್ತ್ರೀ ಹೊಳಿಮಠ, ಶಿವಾನಂದ ಪಾಟೀಲ, ಪ್ರಾಂಶುಪಾಲ ಗಜಾನನ ಧರಣೆ, ಡಾ| ರಾಜೇಂದ್ರ ಘೂಳಿ, ತಮ್ಮಾ ಮುಸ್ತಾರೆ, ರಾಜಶೇಖರ ಹಿರೇಹಬ್ಬು, ಸುಧಿಧೀರ ಥೋಬಡೆ, ಮಹೇಶ ಅಂದೇಲಿ, ಚಿದಾನಂದ ಮುಸ್ತಾರೆ, ರಾಜಶೇಖರ ಬುರ್ಕುಲೆ, ಪ್ರಭುರಾಜ ವಿಭೂತೆ ಹೊಟಗಿ, ಕುಂಭಾರಿ, ದರ್ಗಾನಹಳ್ಳಿ, ಧೋತ್ರಿ, ಮುಸ್ತಿ, ಬೋರಾಮಣಿ ಪಾಲ್ಗೊಂಡಿದ್ದರು. ಸಿದ್ಧಯ್ಯ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಶಾಂತಯ್ಯ ಸ್ವಾಮಿ ನಿರೂಪಿಸಿದರು, ರಾಜಕುಮಾರ ಬೋರೆ ವಂದಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.