ಪ್ರಾಂತ್ಯ ಬದಲಾದರೂ ಭಾಷೆ ಮರೆಯದಿರಿ

ಮುಂದಿನ ದಿನಗಳಲ್ಲಿ ಬೇರೆ ಭಾಗದ ಜನರ ಕೂಗು ಏಳಬಹುದು.

Team Udayavani, Sep 13, 2021, 1:40 PM IST

ಪ್ರಾಂತ್ಯ ಬದಲಾದರೂ ಭಾಷೆ ಮರೆಯದಿರಿ

ಸೇಡಂ: ಕಲಬುರಗಿಯ ಜನತೆ ಸ್ವಾಭಿಮಾನ ಮತ್ತು ನಂಬಿಕೆಗೆ ಹೆಸರಾದವರು. ಪ್ರಾಂತ್ಯ ಬದಲಾದರೂ ಭಾಷೆಯನ್ನು ಎಂದಿಗೂ ಮರೆಯಬಾರದು ಎಂದು ವಿಧಾನ ಪರಿಷತ್‌ ಸದಸ್ಯ ಡಾ| ಸಾಬಣ್ಣ ತಳವಾರ ಹೇಳಿದರು.

ಪಟ್ಟಣದ ಬ್ರಹ್ಮಕುಮಾರ ಆಶ್ರಮದಲ್ಲಿ ಇಷ್ಟಸಿದ್ಧಿ ವಿನಾಯಕ ಮಂಡಳಿ, ಶಕ್ತಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾಹಿತಿ ಸಂತೋಷ ತೊಟ್ನಳ್ಳಿ ಸಂಪಾದಿತ “ಕಾಗಿಣಾ ತೀರದ ಧ್ವನಿಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಜಾತಿ, ಆರ್ಥಿಕ ಸ್ಥಿತಿ ಹಾಗೂ ಸಾಮಾಜಿಕ ವ್ಯವಸ್ಥೆ ಹದಗೆಟ್ಟಿದೆ. ನಮ್ಮ ಭಾಗದ ಜನರು ಸಾಹಿತ್ಯಿಕವಾಗಿ ಶ್ರೀಮಂತರಾಗಬೇಕು.

ನಮ್ಮ ಭಾಗದ ಸಂಪನ್ಮೂಲಗಳ ಶಕ್ತಿ ಗೌರವಿಸುವಂತೆ ಆಗಬೇಕು. ಡಾ| ಬಿ.ಆರ್‌. ಅಂಬೇಡ್ಕರ್‌ ಹೇಳಿದಂತೆ ಸ್ವಾಭಿಮಾನವಿಲ್ಲದ ಬದುಕು ಸತ್ತ ಶವ ಇದ್ದಂತೆ ಎಂದರು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ಕಾಗಿಣಾ ನದಿ ತೀರ ಅನೇಕ ಶಕ್ತಿಗಳ ನಿರ್ಮಾತೃವಾಗಿದೆ. ದಾಸ್ಯದ ಸಂಕೇತವಾಗಿದ್ದ ಹೈದ್ರಾಬಾದ್‌ ಕರ್ನಾಟಕ ಕಲ್ಯಾಣ ಕರ್ನಾಟಕ ಮಾಡಿದ ತೃಪ್ತಿ ನನಗಿದೆ.

371ನೇ ಕಲಂನಲ್ಲಿನ ನ್ಯೂನತೆಗಳನ್ನು ಸರಿಪಡಿಸದೇ ಇದಲ್ಲಿ ಮುಂದಿನ ದಿನಗಳಲ್ಲಿ ಬೇರೆ ಭಾಗದ ಜನರ ಕೂಗು ಏಳಬಹುದು. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ ಎಂದರು. ಸಾಹಿತಿಗಳು ಮಾನವೀಯತೆ ನಿರ್ಮಿಸುವ ಶಿಲ್ಪಿಗಳಿದ್ದಂತೆ. ಕಾಗಿಣಾ ತೀರದಲ್ಲಿ ಕಲೆಗೆ ಕೊರತೆಯಿಲ್ಲ. ಏತ ನೀರಾವರಿಗಾಗಿ 600 ಕೋಟಿ ರೂ. ಅನುದಾನ ತಂದಿದ್ದೇನೆ. ಪ್ರತಿ ರೈತರ ಜಮೀನುಗಳಿಗೆ ಮುಂದಿನ ದಿನಗಳಲ್ಲಿ ನೀರು ದೊರೆಯಲಿದೆ. ಅಳಿವಿನಂಚಿನಲ್ಲಿದ್ದ ಡಿಸಿಸಿ ಬ್ಯಾಂಕ್‌ ಪುನಶ್ಚೇತನಗೊಳಿಸಿ ಸಾವಿರ ಕೋಟಿ ರೂ. ಬಡ್ಡಿ ರಹಿತ ಸಾಲ ವಿತರಣೆ ಮಾಡುತ್ತಿದ್ದೇನೆ ಎಂದು ಹೇಳಿದರು.

ಚಲನಚಿತ್ರ ನಿರ್ದೇಶಕ ವೆಂಕಟೇಶ ಕೊಟ್ಟೂರು, ಹಿರಿಯ ಸಾಹಿತಿ ಗುರುಶಾಂತಯ್ಯ ಭಂಟನೂರು, ರಾಜ ಯೋಗಿನಿ ಬ್ರಹ್ಮಕುಮಾರ ಕಲಾವತಿ ಅಕ್ಕ, ಸಾಹಿತಿ ಲಿಂಗಾರೆಡ್ಡಿ ಶೇರಿ ಮಾತನಾಡಿದರು. ಬಿಜೆಪಿ ತಾಲೂಕು ಅಧ್ಯಕ್ಷ ಪರ್ವತ ರೆಡ್ಡಿ ಪಾಟೀಲ ನಾಮವಾರ, ಶಿವಶರಣಪ್ಪ ಚಂದನಕೇರಿ ವೇದಿಕೆಯಲ್ಲಿದ್ದರು.  ಬಸವರಾಜ ರೇವಗೊಂಡ ಸ್ವಾಗತಿಸಿದರು. ಸಂತೋಷ ತೊಟ್ನಳ್ಳಿ ಪ್ರಾಸ್ತಾವಿಕ ಮಾತನಾಡಿದರು, ಪ್ರಕಾಶ ಗೊಣಗಿ ನಿರೂಪಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.