ವಿದ್ಯುತ್ ಪರಿವರ್ತಕ ಸ್ಥಳಾಂತರಕ್ಕೆ ಮನವಿ
Team Udayavani, Jun 9, 2022, 2:57 PM IST
ಚಿಂಚೋಳಿ: ತಾಲೂಕಿನ ಸೇಡಂ ಮುಖ್ಯರಸ್ತೆ ಪಕ್ಕದಲ್ಲಿರುವ ಕೊರಡಂಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಇರುವ ವಿದ್ಯುತ್ ಪರಿವರ್ತಕ ಬೇರೆಡೆ ಸ್ಥಳಾಂತರಿಸಬೇಕು ಎಂದು ಮುಖ್ಯಶಿಕ್ಷಕ ಶ್ರೀಶೈಲ ನಾಗಾವಿ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಟಿಸಿಯಿಂದ ಹೊರಡುತ್ತಿರುವ ಬೆಂಕಿಕಿಡಿಗಳಿಂದ ವಿದ್ಯಾರ್ಥಿಗಳು ಭಯಭೀತರಾ ಗಿದ್ದಾರೆ. ಮೂಕ ಪ್ರಾಣಿಗಳು ವಿದ್ಯುತ್ ಸ್ಪರ್ಶದಿಂದ ಮೃತಪಡುತ್ತಿವೆ. ಆದ್ದರಿಂದ ಕೂಡಲೇ ಟಿಸಿಯನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಕೋರಿದ್ದಾರೆ. ಕೊರಡಂಪಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಅನೇಕ ವರ್ಷಗಳಿಂದ ಗ್ರಾಮಕ್ಕೆ ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ಪರಿವರ್ತಕ ಕೂಡಿಸಲಾಗಿದೆ. ಶಾಲೆ ವಿದ್ಯಾರ್ಥಿಗಳು ವಿರಾಮ ವೇಳೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದಕ್ಕೆ ಭಯಪಡುವಂತಾಗಿದೆ. ಒಮ್ಮೊಮ್ಮೆ ವಿದ್ಯುತ್ ಪೂರೈಕೆಯಲ್ಲಿ ಹೆಚ್ಚು ಲೋಡ್ ಆದ ಸಂದರ್ಭದಲ್ಲಿ ಬೆಂಕಿ ಕಿಡಿಗಳಿಂದ ಬೆಂಕಿ ಹತ್ತಿಕೊಳ್ಳುತ್ತಿದೆ ಎಂದು ಮುಖ್ಯಶಿಕ್ಷಕರು ತಿಳಿಸಿದ್ದಾರೆ.
ಈಗಾಗಲೇ ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿವೆ. ಜೆಸ್ಕಾಂ ಅಧಿ ಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷ ಬಾಬುರಾವ ತಿಪ್ಪಾ, ಸದಸ್ಯರಾದ ಮಲ್ಲಿಕಾರ್ಜುನ, ರಾಚಯ್ಯ ಸ್ವಾಮಿ, ಸಿದ್ರಾಮ ಕುಂಬಾರ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ