ಎಸ್ಸಿ ಪ್ರಮಾಣ ಪತ್ರಕ್ಕೆ ಮನವಿ
Team Udayavani, Feb 10, 2022, 11:48 AM IST
ಅಫಜಲಪುರ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಾಸವಾಗಿರುವ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಹೈದ್ರಾಬಾದ ಕರ್ನಾಟಕ ಬೇಡಜಂಗಮ ಸಮಾಜ ಸಂಸ್ಥೆ ವತಿಯಿಂದ ತಹಶೀಲ್ದಾರ್ ನಾಗಮ್ಮ ಅವರಿಗೆ ಮನವಿ ಮಾಡಿಕೊಳ್ಳಲಾಯಿತು.
ಸಮಾಜದ ಜಿಲ್ಲಾಧ್ಯಕ್ಷ ಅಮರೇಶ್ವರ ರಾವೂರಮಠ ಮಾತನಾಡಿ, ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ನಿರ್ಣಯ ಕೈಗೊಂಡಿದೆ. ಹೀಗಾಗಿ ಬೇಡ ಜಂಗಮ ಸಮಾಜದವರು ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದಾಗ ಸರ್ಕಾರದ ಆದೇಶಗಳನ್ನು ಪರಿಗಣಿಸಿ, ಪ್ರಮಾಣಪತ್ರ ನೀಡಬೇಕೆಂದು ವಿನಂತಿಸಿದರು.
ಮುಖಂಡ ಚಿದಾನಂದ ಮಠ ಮಾತನಾಡಿ, ಸಮಾಜ ಬಾಂಧವರು ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದಾಗ ಸ್ಥಳ ತನಿಖೆ ಮತ್ತು ಪಂಚನಾಮೆ ಸಮಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ ಹಾಗೂ ನಿರ್ದೇಶನ ಪರಿಗಣಿಸಲು ತಿಳಿಹೇಳಾಗಿದೆ, ಅಲ್ಲದೇ ಗ್ರಾಮ ಲೇಖಪಾಲಕರು ಹಾಗೂ ಕಂದಾಯ ನಿರೀಕ್ಷಕರು ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ, ನಿರ್ದೇಶನ, ಸರ್ಕಾರದ ಆದೇಶಗಳನ್ನು ಗಣನೆಗೆ ತೆಗೆದುಕೊಂಡು ಪರಿಗಣಿಸಲು ಕಟ್ಟುನಿಟ್ಟಿನ ಸೂಚನೆ ನೀಡಲು ವಿನಂತಿಸಿಕೊಳ್ಳುತ್ತಿದ್ದೇವೆ ಎಂದರು.
ಮುಖಂಡರಾದ ಮಲ್ಲಯ್ಯ ಹೊಸಮಠ, ಶರಣಯ್ಯ ಹಿರೇಮಠ, ಮಲ್ಲಯ್ಯ ಶಿವಲಿಂಗಯ್ಯ, ಶಿವಲಿಂಗಯ್ಯ ಮಠ, ವಿಶ್ವನಾಥ ಮಠಪತಿ, ಶಾಂತಯ್ಯ ಕಳ್ಳಿಮಠ, ಸೋಮಯ್ಯ ಹಿರೇಮಠ, ಮಹೇಶ ಮಠ, ಶಿವಾನಂದ ಚೆನ್ನಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ