ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
Team Udayavani, Jan 7, 2022, 11:48 AM IST
ಸೇಡಂ: ಕಿರಾಣಿ ಅಂಗಡಿ, ಹೋಟೆಲ್, ಪಾನ್ಶಾಪ್ಗ್ಳಲ್ಲಿ ಅಕ್ರಮ ಮದ್ಯ ಮಾರಾಟ ನಡೆದಿದ್ದು, ಕೂಡಲೇ ಸ್ಥಗಿತಗೊಳಿಸಬೇಕು ಇಲ್ಲದಿದ್ದರೆ ನಮ್ಮ ಮಾಂಗಲ್ಯವನ್ನೇ ನ್ಯಾಯಾಲಯಕ್ಕೆ ಕಟ್ಟುತ್ತೇವೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಭೀಮನಗರ ಹೂಡಾದ ಮಹಿಳೆಯರು ಅಕ್ರಮ ಮದ್ಯ ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಬಕಾರಿ ಕಚೇರಿಗೆ ಆಗಮಿಸಿ, ಅಬಕಾರಿ ನಿರೀಕ್ಷಕ ರವಿಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಗ್ರಾಮದ ಮಹಿಳೆ ಅಂಬವ್ವ, ಗ್ರಾಮದ ಎಲ್ಲೆಡೆ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆದಿದೆ. ಗ್ರಾಮದ ಯುವಕರು ಮದ್ಯಕ್ಕೆ ಮಾರು ಹೋಗಿ ಮನೆಗೆ ಬರುತ್ತಿಲ್ಲ. ಕೆಲ ಯುವಕರು ಈಗಾಗಲೇ ಮೃತಪಟ್ಟಿದ್ದಾರೆ. ಆದ್ದರಿಂದ ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಯಿರಿ ಎಂದು ಅಳಲು ತೋಡಿಕೊಂಡರು.
ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷ್ಮೀಬಾಯಿ ಜಮಾದಾರ, ಮಲ್ಲಿಕಾರ್ಜುನ ವಡ್ಡೆರಾಜ, ಹಣಮಂತ ಇಟಗಿ, ಬಸಣ್ಣ ಜಮಾದಾರ, ಭೀಮಾಶಂಕರ ನಾಯಕ, ಭೀಮಣ್ಣ ವಿಕಾರಾಬಾದ, ಬೀರಪ್ಪ ಪೂಜಾರಿ, ಹಣಮಂತ ರಾಂಪೂರ, ರಹಿಮ್ ಜಮಾದಾರ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ