ಉಚಿತ ಬೀಜ-ಗೊಬ್ಬರ ನೀಡಲು ಆಗ್ರಹ
Team Udayavani, Jun 7, 2022, 11:05 AM IST
ಕಲಬುರಗಿ: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕೃಷಿಗೆ ಭಾರಿ ಉತ್ತೇಜನವೇನೂ ಸಿಕ್ಕಿಲ್ಲ. ಅಲ್ಲದೆ, ಮಾರುಕಟ್ಟೆಯಲ್ಲಿ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕಿಲ್ಲ, ಸರಕಾರದ ಬೆಂಬಲ ಬೆಲೆಯೂ ಅಷ್ಟಕಷ್ಟೆ. ಆದ್ದರಿಂದ ಪ್ರಸಕ್ತ ಮುಂಗಾರಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರವನ್ನು ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಖೀಲ ಭಾರತ ಕಿಸಾನ್ ಸಭಾ ಸದಸ್ಯರು ಪ್ರತಿಭಟನೆ ಮಾಡಿದರು.
ರೈತ ವಿರೋಧಿಯಾಗಿರುವ ಮೂರು ಕರಾಳ ಕಾಯಿದೆಗಳನ್ನು ಕೂಡ ಕೈ ಬಿಡಬೇಕು. ಎಲ್ಲ ಬೆಳೆಗೆ ವೈಜ್ಜಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು, ಎಲ್ಲ ನೀರಾವರಿ ಯೋಜನೆಗಳನ್ನು ಕಾಲ ಮಿತಿಯಲ್ಲಿ ಅರಂಭಿಸಬೇಕು, ರೈತರ ಪಂಪ್ ಸೆಟ್ಗಳಲ್ಲಿ ಹಗಲಿನಲ್ಲಿ 12 ಗಂಟೆ ನಿರಂತರವಾಗಿ ವಿದ್ಯುತ್ ಒದಗಿಸಬೇಕು. 60 ವರ್ಷ ಮೇಲ್ಪಟ್ಟಿರುವ ರೈತರಿಗೆ ಮಾಸಿಕ 5000 ಪಿಂಚಣಿ ಕೊಡಬೇಕು, ಉದ್ಯೋಗ ಖಾತ್ರ ಅಡಿಯಲ್ಲಿ 250 ದಿನ ಕಾಯಾಂ ಉದ್ಯೋಗ ನೀಡಬೇಕು, ರೈತರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ, ಗ್ರಾಮೀಣ ಮಟ್ಟದಲ್ಲಿ ರಸ್ತೆಗಳ ಸುಧಾರಣೆ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹೆಚ್ಚು ಸಾಲ ಕೊಡಬೇಕು ಎಂದು ಆಗ್ರಹಿಸಿದರು.
ಈ ವೇಳೆಯಲ್ಲಿ ಜಿಲ್ಲಾಧ್ಯಕ್ಷ ಮೌಲಾಮುಲ್ಲಾ, ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಮಲ್ಲಿಕಾರ್ಜುನ ದೊಡ್ಡಮನಿ, ಭೀಮರಾಯ ಮುದಬಸಪ್ಪಗೋಳ್, ಚಂದ್ರಕಾಂತ ಖೂಬ್ರೆ, ಮಹಾನಂದ ನಾಡಗೌಡ, ಲಕ್ಷ್ಮಿ ದೊಡ್ಡಮನಿ, ಜನಾಬಾಯಿ ವಗ್ಗೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ