ಪುಂಡಾಟಿಕೆ ಮೆರೆದರೆ ಮುಲಾಜಿಲ್ಲದೇ ಸೂಕ್ತ ಕ್ರಮ


Team Udayavani, Feb 15, 2022, 1:13 PM IST

12missbehavior

ಆಳಂದ: ಶಾಂತಿ ಸುವ್ಯವಸ್ಥೆ ಕಾಪಾಡುವುದು ನಾಗರಿಕರ ಕರ್ತವ್ಯವಾಗಿದೆ. ಇಷ್ಟಾಗಿಯೂ ಕ್ಷುಲಕ ಕಾರಣ ಮುಂದೆ ಮಾಡುವುದಾಗಲಿ ಶಾಲೆ, ಕಾಲೇಜುಗಳ ಮುಂದೆ ಹಿಜಾಬ್‌, ಕೇಸರಿ ಶಾಲು ವಿಷಯದಲ್ಲಿ ಪುಂಡಾಟಿಕೆ ಮೆರೆದರೆ ಯಾವುದೇ ಮುಲಾಜಿಲ್ಲದೇ ಪ್ರಕರಣ ದಾಖಲು ಮಾಡಲಾಗುವುದು ಎಂದು ಸ್ಥಳೀಯ ಡಿವೈಎಸ್‌ಪಿ ರವೀಂದ್ರ ಶಿರೂರ ಅವರು ಎಚ್ಚರಿಸಿದರು.

ಪಟ್ಟಣದ ಪೊಲೀಸ್‌ ಠಾಣೆ ಆವರಣದಲ್ಲಿ ಕರೆದ ನಾಗರಿಕ ಶಾಂತಿ ಸಮಿತಿ ಸಭೆ ಹಾಗೂ ದಲಿತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂವಿಧಾನದಡಿ ಬದುಕಬೇಕಾಗಿದೆ. ಅದನ್ನು ಮೀರಿ ನಡೆಯಬಾರದು. ಮತ್ತೂಬ್ಬರ ಹಕ್ಕುಗಳಿಗೆ ಧಕ್ಕೆ ತರುವಂತಹ ಕೆಲಸ ಆಗಬಾರದು. ಮೊದಲು ದೇಶ ದೇಶವಿದ್ದರೆ ನಾವು ನೀವು, ಸ್ವಾರ್ಥಕ್ಕಾಗಿ ಜಾತಿ ಧರ್ಮದ ಆಧಾರದ ಮೇಲೆ ದೇಶ ಒಡೆಯುವುದು ಸಲ್ಲ. ಯಾವುದೇ ಧರ್ಮವು ಹಿಂಸೆಯನ್ನು ಮಾಡುವಂತೆ ಹೇಳುವುದಿಲ್ಲ. ಮಾನವೀಯತೆ ಮತ್ತು ಏಕತೆ ಕಾಪಾಡುವಂತೆ ಬೋಧಿಸಿವೆ. ಮಾನವೀಯತೆ ಮತ್ತೆ ಏಕತೆ ಕಟ್ಟುವರ ಕಡೆಗೆ ಇರಬೇಕು ಹೊರತು ಅದನ್ನು ಕೆಡವಲು ಪ್ರಯತ್ನಿಸುವ ಮನಸ್ಸುಗಳ ಕಡೆಗೆ ತಿರುಗಬಾರದು. ಶಿಕ್ಷಕರು ಎಂದರೆ ದೇಶವನ್ನು ಕಟ್ಟುವವರು ಅವರು ಮನಸ್ಸು ಮಾಡಿದರೆ ಏನೆಯಲ್ಲ ಮಾಡಬಲ್ಲರು ಗುರುವಿನ ಸ್ಥಾನ ದೊಡ್ಡದು ಅದನ್ನು ಗೌರವಿಸುವ ಕೆಲಸ ಆಗಬೇಕು. ಜಾತಿ ನಿಂದನೆ ಪ್ರಕರಣ ದಾಖಲಾದಾಗ ಅನ್ಯಾಯ ಆದವರಿಗೆ ಸರ್ಕಾರದ ಪರಿಹಾರ ನೀಡಲಾಗಿದೆ. ಜಗಳಗಳು ಮಾಡದಂತೆ ಎಲ್ಲ ಮುಖಂಡರು ಸೇರಿ ರಾಜಿಸಂಧಾನ ಪಂಚಾಯಿತಿ ನಡೆಸಿದರೆ ವಾತಾವರಣ ತಿಳಿಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಸಿಪಿಐ ಮಂಜುನಾಥ ಮಾತನಾಡಿ, ಶಾಂತಿ ಸೌಹಾರ್ದತೆಗೆ ಇನ್ನೊಂದು ಹೆಸರು ಆಳಂದ ಆಗಿದೆ. ಎಲ್ಲರೂ ಪರಸ್ಪರ ಸ್ನೇಹಬಾಂಧವ್ಯದೊಂದಿಗೆ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಕಾನೂನು ಪಾಲಿಸಬೇಕು ಎಂದರು.

ಪುರಸಭೆ ಸದಸ್ಯ ಶಿವಪುತ್ರ ನಡಗೇರಿ, ಫಿರದೋಷ ಅನ್ಸಾರಿ, ಅಮಜದಲಿ ಕರಜಗಿ, ಮುಖಂಡ ಪ್ರಕಾಶ ಮೂಲಭಾರತಿ, ದಯಾನಂದ ಶೇರಿಕಾರ, ಧರ್ಮಾ ಬಂಗರಗಿ, ಮಲ್ಲಿಕಾರ್ಜುನ ಬೋಳಣಿ, ಖಲೀಲ ಅನ್ಸಾರಿ, ದಸ್ತಗೀರ ಗೌರ, ಪರಮೇಶ್ವರ ಖೋಂಬಿನ, ರಾಘವೇಂದ್ರ ಹಿರೋಳಿ, ಸೂರ್ಯಕಾಂತ ತಟ್ಟೆ, ಮೋಹಿಜ ಕಾರಬಾರಿ, ದತ್ತಾತ್ರೇಯ ಅಟ್ಟೂರ ಭಾಗವಹಿಸಿ ಮಾತನಾಡಿ, ತಾಲೂಕಿನಲ್ಲಿ ಜಗಳಗಳು ಆದಾಗ ಯಾವುದೇ ಜನಪತ್ರಿನಿಧಿಗಳ ಮಾತು ಕೇಳಿ ಪ್ರಕರಣ ದಾಖಲಿಸುವುದು, ಕೈಬಿಡುವುದು ಮಾಡಬೇಡಿ. ಅನ್ಯಾಯವಾದಾಗ ನ್ಯಾಯ ನೀಡಿ ತಪ್ಪಿಸ್ಥರಿಗೆ ಶಿಕ್ಷೆಯಾಗಲಿ. ಇದನ್ನು ಬಿಟ್ಟು ತಾರತಮ್ಯ ನೀತಿ ಅನುಸರಿಸಬೇಡಿ ಎಂದು ಒತ್ತಾಯಿಸಿದರು.

ನರೋಣಾ ಪಿಎಸ್‌ಐ ವಾತ್ಸಲ್ಯ, ಮಾದನಹಿಪ್ಪರಗಾ ಪಿಎಸ್‌ಐ ಮಲ್ಲಣ್ಣ ಯಲಗೊಂಡ, ಭಗವಂತರಾಯ ಶಾಂತಿ ಸಭೆ, ದಲಿತ ದಿನಾಚರಣೆ ಉದ್ದೇಶಿಸಿ ಮಾತನಾಡಿದರು. ಮುಖಂಡ ಶ್ರೀಶೈಲ್‌ ಖಜೂರಿ, ಆಸೀಫ ಅನ್ಸಾರಿ, ಲಕ್ಷ್ಮಣ ಝಳಕಿ, ಸಂಜಯ ನಾಯಕ, ಸೀತಾರಾಮ ಜಮಾದಾರ, ಶೇಖರಗೌಡ ಪಾಟೀಲ್‌, ಸರಣು ನರೋಣಿ, ಸತ್ತಾರ ಮುರುಮಕರ್‌, ಸುಲೇಮಾನ್‌ ಮುಗುಟ, ಗುಲಾಮಹುಸೇನ ಟಪ್ಪೆವಾಲೆ ಇತರರು ಇದ್ದರು.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.