ರಸ್ತೆ ಅಭಿವೃದ್ದಿ ನೆಪದಲ್ಲಿ ಚೆಲ್ಲಾಟ-ಬಸ್ಸಿಗೆ ಪರದಾಟ


Team Udayavani, May 9, 2022, 11:29 AM IST

4bus

ವಾಡಿ: ಮುಖ್ಯ ರಸ್ತೆ ಅಭಿವೃದ್ಧಿ ನೆಪದಲ್ಲಿ ಕಳೆದೊಂದು ತಿಂಗಳಿಂದ ಪಟ್ಟಣಕ್ಕೆ ಬಸ್‌ ಪ್ರವೇಶ ನಿಷೇಧಿಸಲಾಗಿದ್ದು, ಜನಾಕ್ರೋಶ ಭುಗಿಲೆದ್ದಿದೆ.

ಅತ್ತ ರಸ್ತೆ ಅಭಿವೃದ್ಧಿಯೂ ನಡೆಯುತ್ತಿಲ್ಲ. ಇತ್ತ ಬಸ್‌ ಸಂಚಾರವೂ ಇಲ್ಲ. ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಪುರಸಭೆಯ ಜನಪ್ರತಿನಿಧಿಗಳ ಬೇಜವಾಬ್ದಾರಿ ಧೋರಣೆಯಿಂದ ಸ್ಥಳೀಯರು ಪರದಾಡುವಂತಾಗಿದೆ.

ಪಟ್ಟಣದ ಶ್ರೀನಿವಾಸ ಗುಡಿ ವೃತ್ತದಿಂದ ರೆಸ್ಟ್‌ಕ್ಯಾಂಪ್‌ ತಾಂಡಾ ಮೇಲ್ಸೇತುವೆ ವರೆಗಿನ ಪ್ರಮುಖ ರಸ್ತೆ ಅಭಿವೃದ್ಧಿಪಡಿಸಿ ಪುಟ್‌ಪಾತ್‌ ಹಾಗೂ ವಿದ್ಯುತ್‌ ದೀಪಗಳ ಅಳವಡಿಕೆ ಕಾರ್ಯಕ್ಕೆ ಮಂಜೂರಾದ ಐದು ಕೋಟಿ ರೂ. ಅನುದಾನದ ಸದ್ಬಳಕೆ ದೃಷ್ಟಿಯಿಂದ ಚಾಲನೆ ನೀಡಲಾಗಿದ್ದ ಸಿಸಿ ರಸ್ತೆ ಕಾಮಗಾರಿ ಅರ್ಧಕ್ಕೆ ಸ್ಥಗಿತವಾಗಿದೆ. ಇದೇ ನೆಪ ಮುಂದಿಟ್ಟುಕೊಂಡು ನಗರ ಪ್ರವೇಶಿಸುತ್ತಿದ್ದ 40ಕ್ಕೂ ಹೆಚ್ಚು ಬಸ್‌ಗಳ ಸಂಚಾರ ನಿಷೇಧಿಸಿ ತಿಂಗಳುಗಳೇ ಉರುಳಿವೆ.

ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಕೇಂದ್ರಗಳಿಗೆ ಪ್ರಯಾಣ ಬೆಳೆಸುವ ಸ್ಥಳೀಯ ಪ್ರಯಾಣಿಕರು ನಗರ ಹೊರವಲಯದ ಎರಡು ಕಿ.ಮೀ ದೂರದ ಬಳಿರಾಮ ಚೌಕ್‌ಗೆ ಹೋಗಬೇಕಾಗಿದೆ. ಅದೇ ರೀತಿ ಕಲಬುರಗಿ ನಗರದಿಂದ ವಾಡಿ ಪಟ್ಟಣಕ್ಕೆ ಬರುವವರು ನಾಲ್ಕು ಕಿ.ಮೀ ಅಂತರದ ರಾವೂರು ಗ್ರಾಮದಲ್ಲಿ ಇಳಿದು ಆಟೋ-ಲಾರಿ ಹತ್ತಿ ಬರಬೇಕಾದ ಸಂಕಷ್ಟ ಎದುರಾಗಿದೆ.

ಸಾರಿಗೆ ಸೌಲಭ್ಯ ಸ್ಥಗಿತಗೊಳಿಸಿ ನೆಮ್ಮದಿ ಕಸಿದುಕೊಂಡ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳಿಗೆ ಜನರು ಶಾಪ ಹಾಕುತ್ತಿದ್ದಾರೆ. ಮುಖ್ಯರಸ್ತೆ ಹದಗೆಡುವ ಮೊದಲೇ ಮತ್ತೊಮ್ಮೆ ರಸ್ತೆ ಮಂಜೂರಾಗಿರುವುದಕ್ಕೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ರಸ್ತೆ ಎತ್ತರದಿಂದ ಬಡಾವಣೆ ಮನೆಗಳು ತಗ್ಗಿಗೆ ಜಾರಿವೆ. ಮಳೆಗಾಲದಲ್ಲಿ ಜಲಾವೃತಕ್ಕೆ ತುತ್ತಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಇಂಥಹದ್ದರಲ್ಲಿ ಎತ್ತರದ ರಸ್ತೆಯನ್ನೇ ಮತ್ತಷ್ಟು ಎತ್ತರಕ್ಕೆ ಏರಿಸಿ ಅಭಿವೃದ್ಧಿ ಮಾಡಲಾಗುತ್ತಿರುವ ಐದು ಕೋಟಿ ರೂ. ವೆಚ್ಚದ ರಸ್ತೆ ಜನರಿಗೆ ದಿಗಿಲು ಮೂಡಿಸಿದೆ. ಮೂರಿಂಚು ಡಾಂಬರ್‌ ಹಾಕಿ ರಸ್ತೆ ಅಭಿವೃದ್ಧಿ ಮಾಡಿದ್ದರೆ ಯಾರಿಗೂ ತೊಂದರೆಯಿರಲಿಲ್ಲ.

ಇನ್ನೊಂದೆಡೆ ಜನರ ಅಸಮಾಧಾನದ ನಡುವೆಯೂ ಭರದಿಂದ ಸಾಗಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿ ಏಕಾಏಕಿ ಸ್ಥಗಿತವಾಗಿದೆ. ರಸ್ತೆಯುದ್ದಕ್ಕೂ ಹಾಕಲಾಗಿರುವ ಜಲ್ಲಿಕಲ್ಲುಗಳ ರಾಶಿ ಸಣ್ಣ ವಾಹನಗಳ ಸಂಚಾರಕ್ಕೆ ಕಂಟಕವಾಗಿ ಪರಿಣಮಿಸಿದೆ. ಕಾಮಗಾರಿ ಸ್ಥಗಿತವಾದರೂ ಬಸ್‌ ಸಂಚಾರ ಆರಂಭವಾಗಿಲ್ಲ. ಸಿಮೆಂಟ್‌ ಲಾರಿಗಳ ಸಂಚಾರಕ್ಕೇನೂ ನಿರ್ಬಂಧವಿಲ್ಲ. ಅಧಿಕಾರಿಗಳ ಇಂತಹ ಚೆಲ್ಲಾಟದ ಧೋರಣೆಯಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಬಸ್‌ ಸಂಚಾರ ಸ್ಥಗಿತವಾಗಿ ತಿಂಗಳು ಕಳೆದಿದೆ. ಪ್ರಯಾಣಿಕರನ್ನು ತುಂಬಿಕೊಂಡು ಬರುವ ಯಾದಗಿರಿ-ಕಲಬುರಗಿ ಬಸ್‌ಗಳು ಬೈಪಾಸ್‌ ರಸ್ತೆಯಿಂದ ಸಾಗುತ್ತಿವೆ. ಬಸ್‌ ಚಾಲಕರಿಗೆ ಇದೊಂದೇ ನೆಪ ಸಾಕಿತ್ತು. ಪರಿಣಾಮ ಈಗ ಯಾವ ಬಸ್‌ ಕೂಡ ನಗರದೊಳಗೆ ಬರುತ್ತಿಲ್ಲ. ಇದರಿಂದ ಜನರು ಕಷ್ಟ ಅನುಭವಿಸುತ್ತಿದ್ದಾರೆ. ಲಾರಿಗಳಿಗೆ ಓಡಾಡಲು ಅವಕಾಶ ನೀಡಿ ಬಸ್‌ ಸಂಚಾರ ಸ್ಥಗಿತಗೊಳಿಸಿರುವುದು ಸರಿಯಲ್ಲ. ಸತೀಶ ಸಾವಳಗಿ, ಸ್ಥಳೀಯ ಯುವ ಮುಖಂಡ

ಸೋಮವಾರದಿಂದ ಕಾಮಗಾರಿ ಪುನಃ ಶುರುವಾಗಲಿದೆ. ನಗರದೊಳಕ್ಕೆ ಬಸ್‌ ಸಂಚಾರ ಆರಂಭಿಸುವಂತೆ ಶೀಘ್ರ ಸಾರಿಗೆ ಸಂಸ್ಥೆಗೆ ಪತ್ರ ರವಾನಿಸುತ್ತೇವೆ. ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ಶುರುವಾಗಲಿದೆ. ಮರೆಪ್ಪ, ಅಭಿಯಂತರ, ಪಿಡಬ್ಲ್ಯೂಡಿ

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.